ಮೈಸೂರು: ವರುಣ ಕ್ಷೇತ್ರದ ಜನರು ಗೆಲ್ಲಿಸಿದರೆ ನಾನು ವರುಣದಲ್ಲೇ ಇರುತ್ತೇನೆ. ವರುಣ ಕ್ಷೇತ್ರದಲ್ಲೇ ಶಾಶ್ವತವಾಗಿ ಮನೆ ಮಾಡುತ್ತೇನೆ ಎಂದು ಕುರಿತು ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ತಿಳಿಸಿದ್ದಾರೆ.
ವರುಣಾ ಕ್ಷೇತ್ರದಲ್ಲಿ ಇಂದು ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಿಎಂ ಸಿದ್ದರಾಮಯ್ಯ ಪರ ನಟ ಶಿವರಾಜ್ ಕುಮಾರ್ ಸೇರಿದಂತೆ ಸ್ಟಾರ್ ಗಳು ಪ್ರಚಾರ ನಡೆಸುತ್ತಿರುವ ಕುರಿತು ಅವರು ಪ್ರತಿಕ್ರಿಯಿಸಿದರು.
ಸಿದ್ದರಾಮಯ್ಯ ಹತಾಶರಾಗಿ ಸ್ಟಾರ್’ಗಳನ್ನು ಕರೆಸಿಕೊಂಡು ಪ್ರಚಾರಕ್ಕೆ ನಡೆಸುತ್ತಿದ್ದಾರೆ. ಕ್ಷೇತ್ರಕ್ಕೆ ಒಂದೇ ದಿನ ಪ್ರಚಾರಕ್ಕೆ ಬರುತ್ತೇನೆ ಎಂದಿದ್ದ ಸಿದ್ದರಾಮಯ್ಯ ಈಗ ಮತ್ತೆ ಮತ್ತೆ ಬರುತ್ತಿದ್ದಾರೆ ಎಂದರು.
ರಾಜ್ ಕುಮಾರ್ ಕುಟುಂಬಕ್ಕೂ ನನಗೂ 40 ವರ್ಷದ ಅವಿನಾಭಾವ ಸಂಬಂಧವಿದೆ. ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ನಮ್ಮ ಕ್ಷೇತ್ರದಲ್ಲಿ ಬೃಹತ್ ಆಸ್ಪತ್ರೆ ಕಟ್ಟಿಸಿದ್ದೇನೆ. ನನಗೆ ವಿಜಯ್, ರಮ್ಯಾ ಬಗ್ಗೆ ಗೊತ್ತಿಲ್ಲ ಆದರೆ ಶಿವರಾಜ್ ಯಾಕೆ ಹೀಗೆ ಮಾಡಿದರು ಗೊತ್ತಿಲ್ಲ ಅಷ್ಟೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಹೊರಗಿನವರಿಂದ ವರುಣಾ ಕ್ಷೇತ್ರ ಅಭಿವೃದ್ದಿ ಆಗಲ್ಲ ಎಂಬ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ವಿ ಸೋಮಣ್ಣ, ತಮ್ಮ ಮನೆಯ ಕೋಳಿ ಕೂಗಿದರೆ ಮಾತ್ರ ಬೆಳಕು ಎಂಬಂತೆ ಹೇಳಿದ್ದಾರೆ. ಸಿದ್ದರಾಮಯ್ಯ ಮನಸ್ಸು ಮಾಡಿದರೆ ವರುಣಾ ಅಭಿವೃದ್ಧಿ ಮಾಡಬಹುದಿತ್ತು. ಆದರೆ ಈ ಕ್ಷೇತ್ರದಲ್ಲಿ ಒಂದು ಕಾಲೇಜು ಇಲ್ಲ, ಆಸ್ಪತ್ರೆ ಇಲ್ಲ, ಸರಿಯಾದ ರಸ್ತೆಗಳಿಲ್ಲ. ಎಲ್ಲದ್ದಕ್ಕೂ ನಾನೇ ಎಂಬುವುದನ್ನು ಸಿದ್ದರಾಮಯ್ಯ ಮೊದಲು ಬಿಡಲಿ ಎಂದು ಕಿಡಿಕಾರಿದರು.
ಏಪ್ರಿಲ್ 26ಕ್ಕೆ ಮೊದಲ ಹಂತದ ಚುನಾವಣೆ……
'ಕೈ' ಪರ ಪ್ರಚಾರದಲ್ಲಿದ್ದಾಗ ತಡೆದ ಬಿಜೆಪಿ ಕಾರ್ಯಕರ್ತರು….
ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ರಾಪಿಡೋ ವತಿಯಿಂದ ಸಿಹಿ ಸುದ್ದಿ
ಏಪ್ರಿಲ್ 26ಕ್ಕೆ ಏನೆಲ್ಲ ಲಭ್ಯವಿರುತ್ತದೆ….
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
ಮನೆ ಮಾರಾಟಕ್ಕೆಮನೆ ಮಾರಾಟಕ್ಕೆ….
ಅಮೆರಿಕದಲ್ಲೂ ಕೂಡ ಹೆಚ್ಚಾಗುತ್ತಿದ್ದಾರೆ ಭಾರತೀಯರು.
27ರೂ. ಗೆ, 28000 ಸಾವಿರ ದಂಡ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.