ಮನೆ ರಾಜಕೀಯ ವರುಣಾದಲ್ಲಿ ಗೆದ್ದರೆ ಕ್ಷೇತ್ರದಲ್ಲಿಯೇ ಶಾಶ್ವತ ಮನೆ ಮಾಡುತ್ತೇನೆ: ವಿ.ಸೋಮಣ್ಣ

ವರುಣಾದಲ್ಲಿ ಗೆದ್ದರೆ ಕ್ಷೇತ್ರದಲ್ಲಿಯೇ ಶಾಶ್ವತ ಮನೆ ಮಾಡುತ್ತೇನೆ: ವಿ.ಸೋಮಣ್ಣ

0

ಮೈಸೂರು:  ವರುಣ ಕ್ಷೇತ್ರದ ಜನರು ಗೆಲ್ಲಿಸಿದರೆ ನಾನು ವರುಣದಲ್ಲೇ ಇರುತ್ತೇನೆ. ವರುಣ ಕ್ಷೇತ್ರದಲ್ಲೇ ಶಾಶ್ವತವಾಗಿ ಮನೆ ಮಾಡುತ್ತೇನೆ ಎಂದು ಕುರಿತು ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ತಿಳಿಸಿದ್ದಾರೆ.

Join Our Whatsapp Group

ವರುಣಾ ಕ್ಷೇತ್ರದಲ್ಲಿ ಇಂದು ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಿಎಂ ಸಿದ್ದರಾಮಯ್ಯ ಪರ  ನಟ ಶಿವರಾಜ್ ಕುಮಾರ್ ಸೇರಿದಂತೆ ಸ್ಟಾರ್​ ಗಳು ಪ್ರಚಾರ ನಡೆಸುತ್ತಿರುವ ಕುರಿತು ಅವರು ಪ್ರತಿಕ್ರಿಯಿಸಿದರು.

ಸಿದ್ದರಾಮಯ್ಯ ಹತಾಶರಾಗಿ ಸ್ಟಾರ್​’ಗಳನ್ನು ಕರೆಸಿಕೊಂಡು ಪ್ರಚಾರಕ್ಕೆ ನಡೆಸುತ್ತಿದ್ದಾರೆ. ಕ್ಷೇತ್ರಕ್ಕೆ ಒಂದೇ ದಿನ ಪ್ರಚಾರಕ್ಕೆ ಬರುತ್ತೇನೆ ಎಂದಿದ್ದ ಸಿದ್ದರಾಮಯ್ಯ ಈಗ ಮತ್ತೆ ಮತ್ತೆ ಬರುತ್ತಿದ್ದಾರೆ ಎಂದರು.

ರಾಜ್ ಕುಮಾರ್ ಕುಟುಂಬಕ್ಕೂ ನನಗೂ 40 ವರ್ಷದ ಅವಿನಾಭಾವ ಸಂಬಂಧವಿದೆ. ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ನಮ್ಮ ಕ್ಷೇತ್ರದಲ್ಲಿ ಬೃಹತ್ ಆಸ್ಪತ್ರೆ ಕಟ್ಟಿಸಿದ್ದೇನೆ. ನನಗೆ ವಿಜಯ್, ರಮ್ಯಾ ಬಗ್ಗೆ ಗೊತ್ತಿಲ್ಲ ಆದರೆ ಶಿವರಾಜ್ ಯಾಕೆ ಹೀಗೆ ಮಾಡಿದರು ಗೊತ್ತಿಲ್ಲ ಅಷ್ಟೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಹೊರಗಿನವರಿಂದ ವರುಣಾ ಕ್ಷೇತ್ರ ಅಭಿವೃದ್ದಿ  ಆಗಲ್ಲ ಎಂಬ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ವಿ ಸೋಮಣ್ಣ, ತಮ್ಮ ಮನೆಯ ಕೋಳಿ ಕೂಗಿದರೆ ಮಾತ್ರ ಬೆಳಕು ಎಂಬಂತೆ ಹೇಳಿದ್ದಾರೆ. ಸಿದ್ದರಾಮಯ್ಯ ಮನಸ್ಸು ಮಾಡಿದರೆ ವರುಣಾ ಅಭಿವೃದ್ಧಿ ಮಾಡಬಹುದಿತ್ತು. ಆದರೆ ಈ ಕ್ಷೇತ್ರದಲ್ಲಿ ಒಂದು ಕಾಲೇಜು ಇಲ್ಲ, ಆಸ್ಪತ್ರೆ ಇಲ್ಲ, ಸರಿಯಾದ ರಸ್ತೆಗಳಿಲ್ಲ. ಎಲ್ಲದ್ದಕ್ಕೂ ನಾನೇ ಎಂಬುವುದನ್ನು ಸಿದ್ದರಾಮಯ್ಯ ಮೊದಲು ಬಿಡಲಿ ಎಂದು ಕಿಡಿಕಾರಿದರು.

ಹಿಂದಿನ ಲೇಖನವಿವಾದ ಶುರುವಾಗ್ತಿದ್ದಂತೆ ‘ಕೇರಳ ಸ್ಟೋರಿ’ಯಲ್ಲಿ ದೊಡ್ಡ ಬದಲಾವಣೆ
ಮುಂದಿನ ಲೇಖನಆರ್’ಸಿಬಿಗೆ ಮುಂದಿನ ಪಂದ್ಯ ಯಾವಾಗ?, ಯಾವ ತಂಡದ ವಿರುದ್ಧ?: ಇಲ್ಲಿದೆ ಮಾಹಿತಿ