ಮನೆ ರಾಜಕೀಯ ಜೆಡಿಎಸ್ ಅಧಿಕಾರಕ್ಕೆ ಬಂದರೆ ರೈತ ಮಕ್ಕಳನ್ನು ಮದುವೆಯಾದವರಿಗೆ 2 ಲಕ್ಷ ಅನುದಾನ: ಹೆಚ್ ​ಡಿ ಕುಮಾರಸ್ವಾಮಿ

ಜೆಡಿಎಸ್ ಅಧಿಕಾರಕ್ಕೆ ಬಂದರೆ ರೈತ ಮಕ್ಕಳನ್ನು ಮದುವೆಯಾದವರಿಗೆ 2 ಲಕ್ಷ ಅನುದಾನ: ಹೆಚ್ ​ಡಿ ಕುಮಾರಸ್ವಾಮಿ

0

ಕೋಲಾರ: ರಾಜ್ಯದಲ್ಲಿ ಜೆಡಿಎಸ್ ಸರ್ಕಾರ ಬಂದರೆ ರೈತ ಮಕ್ಕಳನ್ನು ಮದುವೆಯಾದವರಿಗೆ 2 ಲಕ್ಷ ರೂ. ಅನುದಾನ ನೀಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್ ​ಡಿ ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ.

Join Our Whatsapp Group

ಜಿಲ್ಲೆಯ ಮುಳಬಾಗಿಲು ತಾಲೂಕಿನ ಜೆಡಿಎಸ್ ಅಭ್ಯರ್ಥಿ ಸಮೃದ್ಧಿ ಮಂಜುನಾಥ್ ಅವರ ನೇತೃತ್ವದಲ್ಲಿ ಶಿನಿಗೇನಹಳ್ಳಿಯಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿರುವ ಸ್ತ್ರೀ ಶಕ್ತಿ ಸಂಘಗಳ ಸಾಲ‌ ಮನ್ನಾ ಮಾಡುತ್ತೇವೆ ಎಂದು ಭರವಸೆ ನೀಡಿದರು.

ಮಾಜಿ ಸ್ಪೀಕರ್, ಕಾಂಗ್ರೆಸ್ ಹಿರಿಯ ನಾಯಕ ರಮೇಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, ಕೆಸಿ ವ್ಯಾಲಿ ಯೋಜನೆ ಹೆಸರಿನಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಜೇಬು ತುಂಬಿಸಿಕೊಂಡಿದ್ದಾರೆ. ಆ ಹಣದಿಂದಲೇ ಅವರು ಚುನಾವಣೆಗೆ ಹೋಗುತ್ತಿದ್ದಾರೆ ಎಂದರು.

ಯರಗೋಳ್ ನೀರಾವರಿ ಯೋಜನೆಗೆ ವಿಷಯುಕ್ತ ಕೆಸಿ ವ್ಯಾಲಿ ನೀರಾವರಿ ಯೋಜನೆ‌ ನೀರನ್ನು ಸೇರಿಸಲು ಹೊರಟಿದ್ದಾರೆ. ನಮ್ಮ ಸರ್ಕಾರ ಬಂದರೆ ಶುದ್ಧೀಕರಿಸಿ ಕುಡಿಯುವ ನೀರು ಕೊಡುತ್ತೇವೆ. ನಾನು ಶಪಥ ಮಾಡಿದ್ದೇನೆ ಮುಂದೆ ನಮ್ಮ ಸರ್ಕಾರ ಬಂದರೆ ಮೂರನೇ ಹಂತದ ಶುದ್ದೀಕರಣ ಮಾಡಿ ಶುದ್ದ ಕುಡಿಯುವ ನೀರು ಕೊಡುತ್ತವೆ ಎಂದರು.

ಮೀಸಲಾತಿ ವಿಚಾರದಲ್ಲಿ ಬಿಜೆಪಿ ಸರ್ಕಾರ ಹುಡುಗಾಟ ಮಾಡುತ್ತಿದೆ. ನಾವು ಅಧಿಕಾರಕ್ಕೆ ಬಂದರೆ ಮೀಸಲಾತಿ ಗೊಂದಲ ಸರಿಪಡಿಸುತ್ತೇವೆ. ಮುಸ್ಲಿಮರ ಮೀಸಲಾತಿಯನ್ನೂ ಕೂಡ ಸರಿಪಡಿಸುತ್ತೇವೆ ಎಂದರು.

ಹಿಂದಿನ ಲೇಖನಕುಂಬಳಕಾಯಿ ಬೀಜಗಳು ಆರೋಗ್ಯಕ್ಕೆ ಒಳಿತು
ಮುಂದಿನ ಲೇಖನಲೂಸ್‌ ಮಾದ ಯೋಗಿ 50ನೇ ಚಿತ್ರ ‘ರೋಸಿ’