ಬೆಂಗಳೂರು: ಕುಮಾರಸ್ವಾಮಿಯವರೇ ತಿಮಿಂಗಿಲ ಯಾರೆಂದು ಹೇಳಿದ್ರೆ ಪ್ರಕರಣ ಮುಗಿಯುತ್ತದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.
ರೇವಣ್ಣ ಪ್ರಕರಣ ರಾಜಕೀಯ ಪ್ರೇರಿತ. ಇದರ ಹಿಂದೆ ದೊಡ್ಡ ತಿಮಿಂಗಿಲವೇ ಇದೆ ಎಂಬ ಹೆಚ್ಡಿಕೆ ಹೇಳಿಕೆಗೆ ಅವರು ಈ ರೀತಿಯಾಗಿ ಪ್ರತಿಕ್ರಿಯಿಸಿದರು.
ಇಂದು ಸದಾಶಿವನಗರದ ತಮ್ಮ ನಿವಾಸದ ಬಳಿ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ತಿಮಿಂಗಿಲ ಯಾರೆಂದು ತಿಳಿಸಿದರೆ ಈ ಪ್ರಕರಣ ಮುಗಿಯುತ್ತದೆ. ಕುಮಾರಸ್ವಾಮಿಯವರೇ ಹೇಳಿದ್ರೆ ಒಳ್ಳೆಯದು. ಅವರು ಪ್ರತಿದಿನ ಒಂದೊಂದು ಹೇಳಿಕೆ ಕೊಡುತ್ತಾರೆ. ಅವರು ದಾಖಲೆ ಕೊಟ್ಟ ನಂತರ ತನಿಖೆ ಮಾಡಲಿಲ್ಲ ಎಂದು ಹೇಳಲಿ ಎಂದು ಸವಾಲು ಹಾಕಿದರು.
ಪ್ರಜ್ವಲ್ ರೇವಣ್ಣ ಇಂದು ರಾಜ್ಯಕ್ಕೆ ವಾಪಸ್ ಆಗಲಿದ್ದಾರೆ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿದ ಪರಮೇಶ್ವರ್, ನಿಮಗೆ ಮಾಹಿತಿ ಇದೆಯೇ?, ಹೇಳಿ. ಟಿಕೆಟ್ ಬುಕ್ ಆಗಿರುವ ಬಗ್ಗೆ ಮಾಹಿತಿ ತಮಗೆ ಇದೆಯಾ?. ಗೃಹ ಇಲಾಖೆಗೆ ಮಾಹಿತಿ ಇರುತ್ತದೆ. ನಿಮಗೆ ಹೇಳಲು ಆಗಲ್ಲ. ನಿಮಗೆ ಗೊತ್ತಿದ್ರೆ ಹೇಳಿ ತನಿಖೆಗೆ ಸಹಾಯ ಆಗುತ್ತದೆ ಎಂದು ತಿಳಿಸಿದರು.
107 ಸಾಹಿತಿಗಳು ಸಿಎಂಗೆ ಬರೆದ ಪತ್ರದ ವಿಚಾರವಾಗಿ ಪ್ರತಿಕ್ರಿಯಿಸಿ, ಸಾಹಿತಿಗಳು ಬರೆದ ಪತ್ರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಸಾಹಿತಿಗಳು ಸಮಾಜದ ಬಗ್ಗೆ ಕಳಕಳಿ ಇರುವವರು. ಅನೇಕ ವಿಷಯಗಳನ್ನು ನಿತ್ಯ ಗಮನಿಸಿರುತ್ತಾರೆ. ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ಪತ್ರವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಎಸ್.ಐ.ಟಿ ಎಲ್ಲವನ್ನೂ ಪರಿಗಣಿಸುತ್ತದೆ ಎಂದು ತಿಳಿಸಿದರು.
ಇನ್ನು, ಸಿಎಂ ಜೊತೆಗಿನ ಸಭೆ ವಿಚಾರವಾಗಿ ಪ್ರತಿಕ್ರಿಯಿಸಿದ ಗೃಹ ಸಚಿವರು ಸಭೆಯ ವಿಚಾರ ಬಹಿರಂಗವಾಗಿ ಹೇಳುವಂತದ್ದಲ್ಲ. ಸತೀಶ್ ಜಾರಕಿಹೊಳಿ ಪುತ್ರಿ ಸ್ಪರ್ಧೆ ಮಾಡಿದ್ರು. ಆ ವಿಚಾರವಾಗಿ ಸತೀಶ್ ಅವರನ್ನು ಭೇಟಿಯಾಗಿದ್ದೆ ಎಂದಷ್ಟೇ ಹೇಳಿದರು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.