ಪೋಷಕರಲ್ಲಿ ತಂದೆ ಅಥವಾ ತಾಯಿ ಯರಾದರೂ ಒಬ್ಬರು ಆರ್ಥಿಕವಾಗಿ ತೊಂದರೆ ಎದುರಿಸುತ್ತಿರುವ ಪರಿಶಿಷ್ಟ ಸಮುದಾಯಕ್ಕೆ ಸೇರಿದ್ದರೆ ಅಂತಹ ಮಗುವನ್ನು ಎಸ್.ಸಿ / ಎಸ್.ಟಿ ವರ್ಗಕ್ಕೆ ಸೇರಿದ್ದು ಎಂದು ಪರಿಗಣಿಸಬಹುದು ಎಂದು ಕೇರಳ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ನ್ಯಾ. ವಿಜು ಅಬ್ರಹಾಂ ಅವರಿದ್ದ ನ್ಯಾಯಪೀಠ ಈ ಮಹತ್ವದ ಆದೇಶ ಹೊರಡಿಸಿದೆ. ಸದ್ರಿ ಪ್ರಕರಣದಲ್ಲಿ ಅರ್ಜಿದಾರನ ತಂದೆ ಸಿರಿಯನ್ ಕ್ರಿಶ್ಚಿಯನ್ ಸಮುದಾಯದವರಾಗಿದ್ದು, ತಾಯಿ ಹಿಂದೂ ಪಣಿಯಾ ಸಮುದಾಯಕ್ಕೆ ಸೇರಿದವರಾಗಿದ್ದಾರೆ. 1950 ರ ಸಂವಿದಾನದ ಆದೇಶ , ಎರಡನೇ ಶೆಡ್ಯೂಲ್ ಪ್ರಕಾರ ಮಾನ್ಯತೆ ಪಡೆದ ಪರಿಶಿಷ್ಟ ಪಂಗಡ ಸಮುದಾಯವಾಗಿದೆ.
ವಿದ್ಯಾರ್ಥಿಯೊಬ್ಬರು ಜಾತಿ ಪ್ರಮಾಣಪತ್ರ ಕೋರಿ ಅರ್ಜಿ ಸಲ್ಲಿಸಿದ್ದು, ತಾನು ಪಣಿಯ ಜಾತಿಗೆ ಸೇರಿದ್ದು, ಪಣಿಯ ಜಾತಿಗೆ ನೀಡುವ ಎಲ್ಲ ಸವಲತ್ತುಗಳಿಗೆ ಅರ್ಹಳು ಎಂದು ಘೋಷಿಸುವಂತೆ ಕೋರಿ ನ್ಯಾಯಲಯಕ್ಕೆ ಅರ್ಜಿ ಸಲ್ಲಿಸಿದಳು.
ಮಗುವನ್ನು ಸಮುದಾಯ ತನ್ನದೆಂದು ಒಪ್ಪಿಕೊಂಡಿರುವಾಗ, ಆ ಮಗು ಅದೇ ಸಾಮಾಜಿಕ ತತ್ವದಲ್ಲಿ ಬದುಕುತ್ತಿದ್ದರೆ ಆಗ ಆ ಮಗುವನ್ನು ಎಸ್.ಸಿ /ಎಸ್.ಟಿ ಸಮುದಾಯಕ್ಕೆ ಸೇರಿದೆ ಎಂದು ಪರಿಗಣಿಸಬಹುದು ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು.
ಸೂಕ್ತ ವಿಚಾರಣೆ ನಡೆಸಿದ ಬಳಿಕ, ನ್ಯಾಯಲಯದ ಮುಂದೆ ಇರಿಸಲಾದ ದಾಖಲೆಗಳು ಮತ್ತು ಮೌಖಿಕ ಸಾಕ್ಷ್ಯವನ್ನು ಪರಿಗಣಿಸಿ ವಿದ್ಯಾರ್ಥಿನಿ ಪಣಿಯ ಸಮುದಾಯಕ್ಕೆ ಸೇರಿದವರು ಎಂದು ಘೋಷಿಸಿ, ಕೆ.ಐ.ಆರ್.ಎ.ಡಿ.ಎಸ್ ನೀಡಿದ ವರದಿಯನ್ನು ಬದಿಗೆ ಸರಿಸಿತು. ಆಕೆ ಪಣಿಯ ಸಮುದಾಯಕ್ಕೆ ಸೇರಿದವರು ಎಂಬ ವಾದವನ್ನು ಬೆಂಬಲಿಸುವ ಸೂಕ್ತ ದಾಖಲೆಗಳನ್ನು ಒದಗಿಸಲು ಅರ್ಜಿದಾರರು ಮುಕ್ತವಾಗಿದ್ದಾರೆ ಎಂದು ತಿಳಿಸಿತು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.