ಮನೆ ರಾಜಕೀಯ ಸರ್ದಾರ್ ವಲ್ಲಭಭಾಯ್ ಪಟೇಲ್  ದೇಶದ ಮೊದಲ ಪ್ರಧಾನಿಯಾಗಿದ್ದರೆ ಇಂದಿನ ಹಲವು ಸಮಸ್ಯೆಗಳು ಇರುತ್ತಿರಲಿಲ್ಲ: ಅಮಿತ್ ಶಾ

ಸರ್ದಾರ್ ವಲ್ಲಭಭಾಯ್ ಪಟೇಲ್  ದೇಶದ ಮೊದಲ ಪ್ರಧಾನಿಯಾಗಿದ್ದರೆ ಇಂದಿನ ಹಲವು ಸಮಸ್ಯೆಗಳು ಇರುತ್ತಿರಲಿಲ್ಲ: ಅಮಿತ್ ಶಾ

0

ಹೊಸ ದಿಲ್ಲಿ(Newdelhi): ಸರ್ದಾರ್ ವಲ್ಲಭಭಾಯ್ ಪಟೇಲ್ ಅವರು ದೇಶದ ಮೊದಲ ಪ್ರಧಾನ ಮಂತ್ರಿ ಆಗಿದ್ದರೆ, ದೇಶದಲ್ಲಿ ಇಂದು ನಾವು ಎದುರಿಸುತ್ತಿರುವ ಹಲವು ಸಮಸ್ಯೆಗಳು ಇಲ್ಲವಾಗಿರುತ್ತಿದ್ದವು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ 147ನೇ ಜನ್ಮ ದಿನಾಚರಣೆ ಅಂಗವಾಗಿ ದಿಲ್ಲಿಯ ಸರ್ದಾರ್ ಪಟೇಲ್ ವಿದ್ಯಾಲಯದಲ್ಲಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು.

ತಮ್ಮ ಭಾಷಣದಲ್ಲಿ ಗುಜರಾತ್’ನ ಮೊರ್ಬಿ ತೂಗು ಸೇತುವೆ ದುರಂತದಲ್ಲಿ ಮೃತಪಟ್ಟವರಿಗೆ ಶ್ರದ್ಧಾಂಜಲಿ ಕೋರಿದರು. ಮೃತರ ಕುಟುಂಬಸ್ಥರಿಗೆ ತಮ್ಮ ಸಂತಾಪ ಸೂಚಿಸಿದರು.

ಸರ್ದಾರ್ ಪಟೇಲರನ್ನು ಕರ್ಮಯೋಗಿ ಎಂದು ಬಣ್ಣಿಸಿದ ಅಮಿತ್ ಶಾ, ಸರ್ದಾರ್ ಪಟೇಲರು ತಮ್ಮ ಕಲ್ಪನೆಗಳನ್ನು ಜಾರಿಗೆ ತರಲು ಕಠಿಣ ಪರಿಶ್ರಮ ಹಾಕಿದರು ಎಂದು ಹಾಡಿ ಹೊಗಳಿದರು.

ಭಾರತದಲ್ಲಿ ಸ್ವಾತಂತ್ರ್ಯ ಪೂರ್ವದಲ್ಲಿ ಅಸ್ತಿತ್ವದಲ್ಲಿ ಇದ್ದ 500ಕ್ಕೂ ಹೆಚ್ಚು ರಾಜಮನೆತನಗಳನ್ನು ಒಗ್ಗೂಡಿಸಿ ಅಖಂಡ ಭಾರತವನ್ನು ನಿರ್ಮಿಸುವಲ್ಲಿ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಪಾತ್ರವನ್ನು ಸ್ಮರಿಸಿದ ಅಮಿತ್ ಶಾ, ಭಾರತದ ಸ್ವಾತಂತ್ರ್ಯಕ್ಕೆ ಪಟೇಲ್ ಅವರ ಕೊಡುಗೆ ಅವಿಸ್ಮರಣೀಯ ಎಂದರು.

ಪಟೇಲ್ ಅವರ ದೂರ ದೃಷ್ಟಿ, ಅವರ ಚಿಂತನೆ ಹಾಗೂ ಭಾರತನ್ನು ಒಗ್ಗೂಡಿಸಿದ ಬಗೆಯನ್ನು ಅರಿಯಬೇಕು. ಪ್ರಜಾಪ್ರಭುತ್ವದ ಬೇರುಗಳು ಆಳವಾಗಿ ರೂಪುಗೊಳ್ಳುವಂತೆ ಪಟೇಲರು ಭಾರತವನ್ನು ಒಂದಾಗಿಸಿದರು ಎಂದು ಅಭಿಪ್ರಾಯಪಟ್ಟರು.

ವಿದ್ಯಾರ್ಥಿಗಳಿಗೆ ಪ್ರಾಥಮಿಕ ಶಿಕ್ಷಣವನ್ನು ಅವರ ಮಾತೃಭಾಷೆಯಲ್ಲಿಯೇ ನೀಡಬೇಕು. ವಿದ್ಯಾರ್ಥಿಗಳು ತಮ್ಮ ಮಾತೃಭಾಷೆ ಉಳಿಸಿ ಬೆಳೆಸಲು ಪ್ರೋತ್ಸಾಹಿಸಬೇಕು ಎಂದು ಕರೆ ನೀಡಿದರು.

ಹಿಂದಿನ ಲೇಖನಆದರ್ಶ ರಾಜಕಾರಣಿ  ಭೀಮಸೇನ
ಮುಂದಿನ ಲೇಖನಅವ್ಯವಹಾರ ಪ್ರಕರಣ: ಬಿಎಸ್’ವೈ ವಿರುದ್ಧದ ತನಿಖೆಗೆ ನೀಡಿದ್ದ ತಾತ್ಕಾಲಿಕ ತಡೆಯಾಜ್ಞೆ ವಿಸ್ತರಿಸಿದ ಸುಪ್ರೀಂಕೋರ್ಟ್