ಹೊಸ ದಿಲ್ಲಿ(Newdelhi): ಸರ್ದಾರ್ ವಲ್ಲಭಭಾಯ್ ಪಟೇಲ್ ಅವರು ದೇಶದ ಮೊದಲ ಪ್ರಧಾನ ಮಂತ್ರಿ ಆಗಿದ್ದರೆ, ದೇಶದಲ್ಲಿ ಇಂದು ನಾವು ಎದುರಿಸುತ್ತಿರುವ ಹಲವು ಸಮಸ್ಯೆಗಳು ಇಲ್ಲವಾಗಿರುತ್ತಿದ್ದವು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ 147ನೇ ಜನ್ಮ ದಿನಾಚರಣೆ ಅಂಗವಾಗಿ ದಿಲ್ಲಿಯ ಸರ್ದಾರ್ ಪಟೇಲ್ ವಿದ್ಯಾಲಯದಲ್ಲಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು.
ತಮ್ಮ ಭಾಷಣದಲ್ಲಿ ಗುಜರಾತ್’ನ ಮೊರ್ಬಿ ತೂಗು ಸೇತುವೆ ದುರಂತದಲ್ಲಿ ಮೃತಪಟ್ಟವರಿಗೆ ಶ್ರದ್ಧಾಂಜಲಿ ಕೋರಿದರು. ಮೃತರ ಕುಟುಂಬಸ್ಥರಿಗೆ ತಮ್ಮ ಸಂತಾಪ ಸೂಚಿಸಿದರು.
ಸರ್ದಾರ್ ಪಟೇಲರನ್ನು ಕರ್ಮಯೋಗಿ ಎಂದು ಬಣ್ಣಿಸಿದ ಅಮಿತ್ ಶಾ, ಸರ್ದಾರ್ ಪಟೇಲರು ತಮ್ಮ ಕಲ್ಪನೆಗಳನ್ನು ಜಾರಿಗೆ ತರಲು ಕಠಿಣ ಪರಿಶ್ರಮ ಹಾಕಿದರು ಎಂದು ಹಾಡಿ ಹೊಗಳಿದರು.
ಭಾರತದಲ್ಲಿ ಸ್ವಾತಂತ್ರ್ಯ ಪೂರ್ವದಲ್ಲಿ ಅಸ್ತಿತ್ವದಲ್ಲಿ ಇದ್ದ 500ಕ್ಕೂ ಹೆಚ್ಚು ರಾಜಮನೆತನಗಳನ್ನು ಒಗ್ಗೂಡಿಸಿ ಅಖಂಡ ಭಾರತವನ್ನು ನಿರ್ಮಿಸುವಲ್ಲಿ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಪಾತ್ರವನ್ನು ಸ್ಮರಿಸಿದ ಅಮಿತ್ ಶಾ, ಭಾರತದ ಸ್ವಾತಂತ್ರ್ಯಕ್ಕೆ ಪಟೇಲ್ ಅವರ ಕೊಡುಗೆ ಅವಿಸ್ಮರಣೀಯ ಎಂದರು.
ಪಟೇಲ್ ಅವರ ದೂರ ದೃಷ್ಟಿ, ಅವರ ಚಿಂತನೆ ಹಾಗೂ ಭಾರತನ್ನು ಒಗ್ಗೂಡಿಸಿದ ಬಗೆಯನ್ನು ಅರಿಯಬೇಕು. ಪ್ರಜಾಪ್ರಭುತ್ವದ ಬೇರುಗಳು ಆಳವಾಗಿ ರೂಪುಗೊಳ್ಳುವಂತೆ ಪಟೇಲರು ಭಾರತವನ್ನು ಒಂದಾಗಿಸಿದರು ಎಂದು ಅಭಿಪ್ರಾಯಪಟ್ಟರು.
ವಿದ್ಯಾರ್ಥಿಗಳಿಗೆ ಪ್ರಾಥಮಿಕ ಶಿಕ್ಷಣವನ್ನು ಅವರ ಮಾತೃಭಾಷೆಯಲ್ಲಿಯೇ ನೀಡಬೇಕು. ವಿದ್ಯಾರ್ಥಿಗಳು ತಮ್ಮ ಮಾತೃಭಾಷೆ ಉಳಿಸಿ ಬೆಳೆಸಲು ಪ್ರೋತ್ಸಾಹಿಸಬೇಕು ಎಂದು ಕರೆ ನೀಡಿದರು.
ಶಾಲೆಗೆ ಕುಡಿದು ಬರುತ್ತಿದ್ದ ಶಿಕ್ಷಕ ; ಚಪ್ಪಲಿ – ಶೂ ಎಸೆದು ಓಡಿಸಿದ ವಿದ್ಯಾರ್ಥಿಗಳು
ಮತದಾರರಿಗೆ ' ಸಿಹಿ ', ಸುದ್ದಿ..
ಮೋದಿ ಅಭಿಮಾನಿಯ ಕೋರಿಕೆ…
ಪ್ರಸ್ತುತ ಪೊಲೀಸ್ ವ್ಯವಸ್ಥೆಯನ್ನು ಅಣುಕಿಸುತ್ತಿರುವ ಕಾಲ್ಪನಿಕ ಸನ್ನಿವೇಶಗಳು..
ಅಭಿಮಾನಿ ದೇವರುಗಳ ಜೊತೆ ಜಾಕಿ ಚಲನಚಿತ್ರ ವೀಕ್ಷಿಸಿದ ಅಶ್ವಿನಿ ಪುನೀತ್
ಮೈಸೂರು ಮೆಡಿಕಲ್ ಕಾಲೇಜು ಮತ್ತು ಕೆ ಆರ್ ಆಸ್ಪತ್ರೆಯ ಕರ್ಮಕಾಂಡ
ಕರ್ನಾಟಕದ ಹೆಮ್ಮೆಯ ರತ್ನ ಶ್ರೀಮತಿ ಸುಧಾಮೂರ್ತಿಯವರು ರಾಜ್ಯಸಭಾ ಸದಸ್ಯೆಯಾಗಿ ಪ್ರಮಾಣ ವಚನ ಸ್ವೀಕರಿಸಿದರು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.