ಮನೆ ರಾಜ್ಯ ಆರೋಪ ಸಾಬೀತಾದರೆ ದೇಶದ್ರೋಹಿಗಳಿಗೆ ಪಾಠ ಕಲಿಸದೇ ಬಿಡುವುದಿಲ್ಲ: ದಿನೇಶ್ ಗುಂಡೂರಾವ್

ಆರೋಪ ಸಾಬೀತಾದರೆ ದೇಶದ್ರೋಹಿಗಳಿಗೆ ಪಾಠ ಕಲಿಸದೇ ಬಿಡುವುದಿಲ್ಲ: ದಿನೇಶ್ ಗುಂಡೂರಾವ್

0

ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ್ ಝಿಂದಾಬಾದ್ ಘೋಷಣೆ ವಿಚಾರದಲ್ಲಿ ಎಫ್ ಎಸ್ ಎಲ್ ವರದಿ ಬರುವ ಮುನ್ನವೇ ಬಿಜೆಪಿಯವರು ಅಪರಾಧ ನಿರ್ಣಯಕ್ಕೆ ಬಂದಿದ್ದಾರೆ. ಬಿಜೆಪಿ ಯವರಿಗೆ ಇಷ್ಟೊಂದು ಆತುರವೇಕೆ.? ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪ್ರತಿಕ್ರಿಯಿಸಿರುವ ಅವರು, ಇಲ್ಲಿ ಘೋಷಣೆ ವಿಚಾರದಲ್ಲಿ ಸ್ವಲ್ಪ ಗೊಂದಲವಿದೆ. ಪಾಕಿಸ್ತಾನದ ಪರ ಘೋಷಣೆ ಕೂಗಿದ್ದು ನಿಜವಾದರೆ ಅಂತಹ ದೇಶದ್ರೋಹಿಗಳಿಗೆ ಪಾಠ ಕಲಿಸದೇ ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಅದು ‘ನಾಸೀರ್ ಸಾಬ್ ಝಿಂದಾಬಾದೋ? ಅಥವಾ ಪಾಕಿಸ್ತಾನ್ ಝಿಂದಾಬಾದ್’ ಘೋಷಣೆಯೋ ಎಂಬುದು ತಿಳಿಯಬೇಕು. ಎಫ್ ಎಸ್ ಎಲ್ ವರದಿ ಬಂದ ನಂತರ ಅದು ಸ್ಪಷ್ಟವಾಗಲಿದೆ. ಅಲ್ಲಿಯವರೆಗೂ ಕಾಯಲು ತಾಳ್ಮೆ ಇಲ್ಲವೆಂದರೆ ಹೇಗೆ.? ಎಂದು ಪ್ರಶ್ನಿಸಿದ್ದಾರೆ.

ಹಿಂದಿನ ಲೇಖನವಿದ್ಯಾರ್ಥಿಗಳಲ್ಲಿ ಕುತೂಹಲ, ಸೃಜನಶೀಲತೆ ಮತ್ತು ಕಲ್ಪನೆಯನ್ನು ಬೆಳೆಸುವ ನಿಟ್ಟಿನಲ್ಲಿ ನೆಹರು ಸ್ಟ್ರೀಮ್‌ ಲ್ಯಾಬ್‌ ಸ್ಥಾಪನೆಗೆ ಚಿಂತನೆ: ಸಚಿವ ಎನ್‌ ಎಸ್‌ ಭೋಸರಾಜು
ಮುಂದಿನ ಲೇಖನಬಿಟ್‌ ಕಾಯಿನ್ ಪ್ರಕರಣ: ಡಿವೈಎಸ್ಪಿ ಶ್ರೀಧರ್ ಪೂಜಾರ್ ಪರಾರಿ- ಮತ್ತೊಬ್ಬ ಇನ್ಸ್‌ಪೆಕ್ಟರ್ ಬಂಧನ