ರಾಮನಗರ: ನಿಮ್ಮಲ್ಲಿರುವ ಹುರುಪು ಮತ್ತು ಉತ್ಸಾಹ ನೋಡಿದರೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ನಮಗೆ ಗೆಲುವು ಖಚಿತ ಎಂದೆನಿಸುತ್ತಿದೆ ಎಂಬುದಾಗಿ ಬಿಜೆಪಿ ಅಭ್ಯರ್ಥಿ ಡಾ. ಸಿಎನ್ ಮಂಜುನಾಥ್ ಭರವಸೆ ವ್ಯಕ್ತಪಡಿಸಿದರು.
ಶನಿವಾರ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಕೂಟಗಲ್ ಗ್ರಾಮ ಪಂಚಾಯಿತಿ ಜೆಡಿಎಸ್ ಭದ್ರಕೋಟೆಯಾಗಿದೆ. ಬಿಜೆಪಿ ಸೇರಿದ ಪರಿಣಾಮ ಇಡೀ ಕ್ಷೇತ್ರವೇ ಸುಭದ್ರ ಕೋಟೆಯಾಗಿದೆ ಎಂದು ಹೇಳಿದರು.
ಆರೋಗ್ಯ ಕ್ಷೇತ್ರದಲ್ಲಿ 35 ವರ್ಷಗಳ ಕಾಲ ಸುಮಾರು 75 ಲಕ್ಷ ಜನರಿಗೆ ಚಿಕಿತ್ಸೆ ಕೊಡಿಸಿದ್ದೇನೆ. ವೈದ್ಯಕೀಯ ಸೇವೆ ನೀಡುತ್ತಿರುವ ಸಂದರ್ಭ ಸುಮಾರು ಎರಡು ಕೋಟಿ ಜನರ ಸಂಪರ್ಕಕ್ಕೆ ಬಂದಿದ್ದೇನೆ. ಬೆಂಗಳೂರು ಗ್ರಾಮಾಂತರ ಮಾತ್ರವಲ್ಲದೆ ಇಡೀ ರಾಜ್ಯದ ಜನ ನನ್ನನ್ನು ಗುರುತಿಸಿದ್ದಾರೆ. ನಾನು ನಿರ್ದೇಶಕನಾದರೆ ಪಂಚತಾರಾ ಖಾಸಗಿ ಆಸ್ಪತ್ರೆ ಮಾಡಬೇಕು ಎಂದುಕೊಂಡಿದ್ದೆ. ಆದರೆ ಇದೀಗ ಅಂತದ್ದೇ ಸಾಧನೆ ಮಾಡಿದ ಖುಷಿ ನನಗಿದೆ. ರೈತರಿಗೆ ಮತ್ತು ಬಡವರಿಗೆ ಅತ್ಯುತ್ತಮ ಚಿಕಿತ್ಸೆ ಕೊಡಿಸಿದ್ದೇನೆ ಎಂದು ಮಂಜುನಾಥ್ ಹೇಳಿದರು.
ನನ್ನದು ಮೂರು ಘೋಷವಾಕ್ಯಗಳಿವೆ. ಅವುಗಳೆಂದರೆ, ಮೊದಲನೆಯದ್ದು ಚಿಕಿತ್ಸೆ ಮೊದಲು, ಹಣ ಪಾವತಿ ನಂತರ. ಎರಡನೇಯದು ಕಡತ ಆಮೇಲೆ, ಚಿಕಿತ್ಸೆ ಮೊದಲು. ಮೂರನೇಯದ್ದು, ಮಾನವೀಯತೆಗೆ ಮೊದಲ ಆದ್ಯತೆ. ನಾನು ನನ್ನ ಜೀವನದಲ್ಲಿ ಬಡವರ ಪರ ಕೆಲಸ ಮಾಡಿದ್ದೇನೆ. ಬಡವರ ಕಣ್ಣೀರು ಮತ್ತು ರೈತರ ಬೆವರಿಗೆ ಬಹಳ ಶಕ್ತಿ ಇದೆ. ಕಣ್ಣೀರಿಡುವ ಜನರ ಬಳಿ ಮೊದಲು ಹೋಗಿ ಮಾತನಾಡಿದ್ದೇನೆ. ಕಣ್ಣೀರಿನಲ್ಲಿ ಒಂದು ಪರ್ಸೆಂಟ್ ನೀರಿದ್ದರೆ ಶೇ 99 ರಷ್ಟು ನೋವಿರುತ್ತದೆ ಎಂದು ಅವರು ಹೇಳಿದರು.
ಭಾರತವನ್ನು ಎರಡು ರೀತಿಯಲ್ಲಿ ಪರಿಗಣಿಸಬಹುದು. ಒಂದು ವೈಮಾನಿಕ ಭಾರತ, ಇನ್ನೊಂದು ರೈಲಿನ ಭಾರತ. ನಿಜವಾದ ಭಾರತ ನೋಡಬೇಕಾದರೆ ರೈಲಿನಲ್ಲಿ ಪ್ರಯಾಣ ಮಾಡಬೇಕು. ಅನೇಕ ಸಮಸ್ಯೆಗಳನ್ನು ಕಾಣುತ್ತೇವೆ. ಪ್ರಧಾನಿ ಮೋದಿ ಹಾಗೂ ದೇವೇಗೌಡರ ಸರ್ಕಾರ ರೈಲಿನಲ್ಲಿ ಕಂಡ ಸಮಸ್ಯೆಗಳಿಗೆ ಪರಿಹಾರ ಕೊಟ್ಟಿದೆ ಎಂದು ಅವರು ಹೇಳಿದರು.
ರಾಜಕೀಯಕ್ಕೆ ಬರುತ್ತೇನೆ ಎಂದು ಕನಸಿನಲ್ಲಿ ಕೂಡ ಅಂದುಕೊಂಡಿರಲಿಲ್ಲ. ಜೆಡಿಎಸ್ ಸಂವಾದ ನೋಡಿದರೆ ನಾನೂ ಕೂಡ ಕಾರ್ಯಕರ್ತನಾಗಿರಬೇಕು ಎನಿಸುತ್ತಿದೆ. ನಿಮ್ಮ ಸ್ವಾಭಿಮಾನಕ್ಕೆ ದೊಡ್ಡ ಸಲಾಂ. ಮನಸ್ಸು ನಿರ್ಮಲವಾಗಿದ್ದರೆ, ಮಾತು ಮೃದವಾಗಿದ್ದರೇ ಚಮತ್ಕಾರ. ನಾವು ಏನು ಬಟ್ಟೆ ಹಾಕುತ್ತೇವೆ ಎಂಬುದು ಮುಖ್ಯ ಅಲ್ಲ. ಉಡುಗೆ ತೊಡುಗೆಯಲ್ಲಿ ಯಾರನ್ನೂ ಅಳೆಯಲಾಗದು. ಒಳ್ಳೆ ಬಟ್ಟೆ ಹಾಕಿಕೊಂಡಿದ್ದರೂ ಮನಸ್ಸು ಕೆಟ್ಟದಿರಬಹುದು ಎಂದು ಅವರು ಅಭಿಪ್ರಾಯ ಪಟ್ಟರು.
ಅಂಗಾಂಗ ದಾನ ಬಹಳ ದೊಡ್ಡ ದಾನ. ಅದೇ ರೀತಿ ಮತದಾನ ಮಹತ್ವದ ದಾನ. ಆ ಮತದಾನವನ್ನು ನನಗಾಗಿ ಮಾಡಿ. ಮತಗಳು ಮಾರಾಟ ಆಗಬಾರದು. ಮತಗಳು ಮಾರಾಟ ಆದರೆ ಪ್ರಜಾಪ್ರಭುತ್ವದ ಕೊಲೆ ಆದಂತೆ ಎಂದು ಮಂಜುನಾಥ್ ಹೇಳಿದರು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.