ಬೆಳಗಾವಿ : ನಾವು ಮಾತನಾಡಿದರೆ ಬಲಾತ್ಕಾರ, ಅವರು ಮಾತನಾಡಿದರೆ ಚಮತ್ಕಾರ ಎಂದು ರಾಮನಗರದ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ.
ಯತೀಂದ್ರ ಸಿದ್ದರಾಮಯ್ಯನವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಾವು ಏನಾದರೂ ಮಾತನಾಡಿದರೆ ನೋಟಿಸ್ ಕೊಡುತ್ತಾರೆ. ನಮ್ಮ ವರಿಷ್ಠರು ಅಷ್ಟು ವೀಕ್ ಇಲ್ಲ, ಬಲಿಷ್ಠವಾಗಿದೆ ಎಂದು ಹೇಳಿದರು.
ಹೈಕಮಾಂಡ್ ಎಲ್ಲವನ್ನೂ ತೀರ್ಮಾನ ಮಾಡುತ್ತದೆ. ಯತೀಂದ್ರ ಹೇಳಿಕೆ ಹಿಂದೆ ಯಾರಿದ್ದಾರೆ ಗೊತ್ತಿಲ್ಲ. ಪದೇಪದೆ ಅವರು ನೀಡುವ ಹೇಳಿಕೆಯ ಬಗ್ಗೆ ಅವರನ್ನೇ ಕೇಳಬೇಕು . ನಮಗೆ ಹೇಳಿಕೆ ಕೊಡಬೇಡಿ ಎಂದಿದ್ದಾರೆ. ಹೀಗಾಗಿ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.
ಈ ಹಿಂದೆ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರೆ ಎಂದು ಹೇಳಿದ್ದಕ್ಕೆ ಇಕ್ಬಾಲ್ ಹುಸೇನ್ ಅವರಿಗೆ ಶಿಸ್ತು ಸಮಿತಿ ನೋಟಿಸ್ ಜಾರಿ ಮಾಡಿತ್ತು ಎನ್ನಲಾಗಿದೆ.














