ವಿಜಯಪುರ: ಮುಸ್ಲಿಂ ಧರ್ಮಗುರುಗಳ ಸಮಾವೇಶದಲ್ಲಿ ಸಿಎಂ ಪಕ್ಕ ಕುಳಿತಿದ್ದ ಮೌಲ್ವಿ ಸಯ್ಯದ್ ಮೊಹಮ್ಮದ್ ತನ್ವೀರ್ ಪೀರಾ ಗೆ ಐಸಿಸ್ ಲಿಂಕ್ ಇದೆ ಎಂಬ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಕ್ಕೆ ಮುಸ್ಲಿಂ ಧರ್ಮಗುರು ಸಯ್ಯದ್ ಮೊಹಮ್ಮದ್ ತನ್ವೀರ್ ಪೀರಾ ಹಾಸ್ಮಿ ಉತ್ತರ ನೀಡಿದ್ದಾರೆ.
ಒಂದು ವೇಳೆ ಬಸನಗೌಡ ಪಾಟೀಲ್ ಯತ್ನಾಳ ಹೇಳಿಕೆ ಸಾಬೀತಾದರೆ ನಾನು ಈ ದೇಶವನ್ನು ತ್ಯಾಗ ಮಾಡಿ ಪಲಾಯನ ಮಾಡುತ್ತೇನೆ. ಸಾಬೀತು ಮಾಡದಿದ್ದರೆ ಯತ್ನಾಳ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಪಾಕಿಸ್ತಾನಕ್ಕೆ ಪಲಾಯನ ಮಾಡಬೇಕೆಂದು ಸವಾಲು ಹಾಕಿದ್ದಾರೆ.
ನನ್ನ ಮೇಲೆ ಯತ್ನಾಳ್ ಮಾಡಿರೋ ಆರೋಪಗಳಲ್ಲಿ ಸತ್ಯಾಂಶಗಳಿಲ್ಲ. 04-12-2023 ರಂದು ಹುಬ್ಬಳ್ಳಿಯಲ್ಲಿ ನಡೆದ ಅವಲಾದ ಗೌಸ ಎ ಆಜಮ್ ಸಮ್ಮೇಳನದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದೆ. ಇದೇ ವೇದಿಕೆಯಲ್ಲಿ ವಿವಿಧ ದರ್ಗಾದ ಪೀಠಾಧೀಶರು ರಾಜಕೀಯ ಧುರೀಣರು, ಸಿಎಂ ಸಿದ್ದರಾಮಯ್ಯ, ಕಾನೂನು ಸಚಿವ ಎಚ್ ಕೆ ಪಾಟೀಲ್ ಹಾಗೂ ಇತರೆ ಮಂತ್ರಿಗಳು ಶಾಸಕರು ಉಪಸ್ಥಿತರಿದ್ದರು. ಸಿಎಂ ಯಾವುದೇ ಕೋಮಿನವರಿಗೆ ಅಥವಾ ಸಮಾಜದವರಿಗೆ ಸೀಮಿತವಾಗಿಲ್ಲ. ರಾಜಕಾರಣದಲ್ಲಿ ಎಲ್ಲಾ ಧರ್ಮ ಮತ್ತು ಜಾತಿಗಳ ಸೇವೆ ಮಾಡುವುದು ಮುಖ್ಯಮಂತ್ರಿಗಳ ಕಾರ್ಯ. ಸಿಎಂ ಅವರ ಜನಪ್ರಿಯತೆಯನ್ನು ನೋಡಲಾರದೆ ಹತಾಶರಾಗಿ ಯತ್ನಾಳ್ ನನ್ನ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.
ಮುಸ್ಲಿಂ ಸಮಾಜದ ಬಗ್ಗೆ ಅವಹೇಳನಕಾರಿ ಹೇಳಿಕೆಯನ್ನು ಕೊಟ್ಟಿದ್ದಾರೆ . ಇದರ ಉದ್ದೇಶ ತಮ್ಮ ರಾಜಕೀಯ ಬೇಳೆಯನ್ನು ಬೇಯಿಸುವುದಕ್ಕೆ ಮಾತ್ರ . ನಾನು ಐಸಿಸ್ ಉಗ್ರರ ಜೊತೆ ನಂಟಿದೆ ಎಂಬುದನ್ನು ಸಾಬೀತು ಮಾಡಲಿ. ಕೇಂದ್ರ ಮತ್ತು ರಾಜ್ಯದ ಎಲ್ಲಾ ತನಿಖಾ ಸಂಸ್ಥೆಗಳಿಗೆ ಯತ್ನಾಳ್ ದಾಖಲೆ ಕೊಡಲಿ. ಶಾಸಕರು ಒಂದು ವಾರದೊಳಗೆ ಐಸಿಸ್ ಸಾಬೀತು ಮಾಡಲಿ. ಉಗ್ರರ ಜೊತೆಗೆ ನನ್ನ ನಂಟಿದೆ ಎಂಬುದನ್ನು ದಾಖಲೆ ಸಮೇತ ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ಶಾಸಕರ ಸ್ಥಾನಕ್ಕೆ ರಾಜಿನಾಮೆ ಕೊಟ್ಟು ಪಾಕಿಸ್ತಾನಕ್ಕೆ ಪಲಾಯನ ಮಾಡಬೇಕೆಂದು ಅಗ್ರಹಿಸಿದ್ದಾರೆ.
ಇನ್ನು ಉಗ್ರರ ಜೊತೆ ನಂಟಿದೆಯೆಂದು ಸಾಬೀತು ಪಡಿಸಿದರೆ ನಾನು ದೇಶವನ್ನು ತ್ಯಾಗ ಮಾಡುತ್ತೇನೆ. ನಾನಷ್ಟೇ ಅಲ್ಲಾ ನನ್ನ ಭಕ್ತರು, ಶಿಷ್ಯರು ದೇಶವನ್ನು ತ್ಯಾಗ ಮಾಡುತ್ತೇವೆ ಎಂದು ಸವಾಲು ಹಾಕಿದ್ದು, ಧರ್ಮಗುರು ಸಯ್ಯದ್ ಮೊಹಮ್ಮದ್ ತನ್ವೀರ್ ಪೀರಾ ಹಾಸ್ಮಿ ಅವರು ದೇಶಭಕ್ತಿ ಗೀತೆಯ ಮೂಲಕ ಯತ್ನಾಳ್ಗೆ ಟಾಂಗ್ ಕೊಟ್ಟಿದ್ದಾರೆ. ಈ ಹಿಂದೆ ಕಾರ್ಯಕ್ರಮವೊಂದರಲ್ಲಿ ತಾವೇ ಹಾಡಿದ ದೇಶಭಕ್ತಿ ಗೀತೆ ಸಾರೇ ಜಹಾಸೇ ಅಚ್ಚಾ ಹಿಂದೂ ಸಿತಾ ಹಮಾರಾ ಹಾಡನ್ನು ಫೇಸ್ಬುಕ್ ಅಕೌಂಟ್ ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.