ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಸಹಕಾರ ಸಂಘದ ಅಧ್ಯಕ್ಷ ಸತ್ಯನಾರಾಯಣ ಇಟಕಾರಿ ಎಂಬುವವರನ್ನ ಬಂಧಿಸಲಾಗಿದೆ.
ಬರೊಬ್ಬರಿ 18 ನಕಲಿ ಖಾತೆ ಸೃಷ್ಟಿಸಿ ಹಣ ವರ್ಗಾಯಿಸಿದ ಆರೋಪದಡಿ ಅರೆಸ್ಟ್ ಮಾಡಿ 8 ದಿನಗಳ ಎಸ್ಐಟಿ ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ. ನಿನ್ನೆ(ಜೂ.04) ಆತನನ್ನು ಪೊಲೀಸರು ಬಂಧಿಸಿ ಕೋರ್ಟ್ಗೆ ಹಾಜರುಪಡಿಸಿದ್ದರು.
ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದ್ದು, ರಾಜ್ಯ ಸರ್ಕಾರ ಪ್ರಕರಣವನ್ನು ಎಸ್ಐಟಿಗೆ ನೀಡಿತ್ತು. ಅದರ ಬೆನ್ನೆಲ್ಲೇ ಇದೇ ಜೂನ್ 01 ರಂದು ವಾಲ್ಮೀಕಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ್ ಹಾಗೂ ಲೆಕ್ಕಾಧಿಕಾರಿ ಪರಶುರಾಮ್ ಅವರನ್ನು ಬಂಧಿಸಿ, ಅವರನ್ನು 6 ದಿನಗಳ ಕಾಲ ಎಸ್ಐಟಿ ಕಸ್ಟಡಿಗೆ ನೀಡಿ ಬೆಂಗಳೂರಿನ 3ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿತ್ತು. ಈ ಮಧ್ಯೆ ಇದೀಗ ತೆಲಂಗಾಣ ಸಹಕಾರ ಸಂಘದ ಅಧ್ಯಕ್ಷನನ್ನು ಬಂಧಿಸಿ, ಎಸ್ಐಟಿ ವಶಕ್ಕೆ ಪಡೆದಿದೆ.
ಏನಿದು ಪ್ರಕರಣ?
ಕೆಲ ದಿನಗಳ ಹಿಂದೆ ಶಿವಮೊಗ್ಗದ ವಿನೋಬನಗರದ ಕೆಂಚಪ್ಪ ಲೇಔಟ್ ನಲ್ಲಿ ರಾತ್ರಿ ಸಮಯದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮ ಮಂಡಳಿಯ ಅಧೀಕ್ಷಕ ಚಂದ್ರಶೇಖರ್ ನೇಣಿಗೆ ಶರಣಾಗಿದ್ದರು. ಈ ವೇಳೆ ಆರು ಪುಟಗಳ ಡೆತ್ ನೋಟ್ ಬರೆದಿಟ್ಟು, ಅದರಲ್ಲಿ 187.33 ಕೋಟಿ ರೂ. ನಿಗಮ ಅನುದಾನದಲ್ಲಿ 80 ರಿಂದ 85 ಕೋಟಿ ರೂ. ಅವ್ಯವಹಾರ ಆಗಿದೆ. ಈ ವ್ಯವಹಾರಕ್ಕೆ ತನ್ನನ್ನು ಹಿರಿಯ ಅಧಿಕಾರಿಗಳಾದ ಪದ್ಮನಾಭ್ಮ, ಪರಶುರಾಮ್ ಹಾಗೂ ಬೆಂಗಳೂರು ಎಂ ಜಿ ರಸ್ತೆಯ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಮುಖ್ಯ ವ್ಯವಸ್ಥಾಪಕಿ ಶುಚಿಸ್ಮಿತಾ ರವುಲ್ ಮೂವರು ಸೇರಿ ಗೋಲ್ ಮಾಲ್ ಮಾಡಿದ್ದಾರೆ ಎಂದು ಬರೆದಿದ್ದರು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.