ಮನೆ ರಾಷ್ಟ್ರೀಯ ಅಕ್ರಮ ಹಣ ವರ್ಗಾವಣೆ ಕೇಸ್: ಡಿಕೆಶಿ ವಿರುದ್ಧದ ವಿಚಾರಣೆ ಜುಲೈ 30ಕ್ಕೆ ಮುಂದೂಡಿಕೆ

ಅಕ್ರಮ ಹಣ ವರ್ಗಾವಣೆ ಕೇಸ್: ಡಿಕೆಶಿ ವಿರುದ್ಧದ ವಿಚಾರಣೆ ಜುಲೈ 30ಕ್ಕೆ ಮುಂದೂಡಿಕೆ

0

ನವದೆಹಲಿ(New Delhi): ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ಇತರೆ ನಾಲ್ವರು ಆರೋಪಿಗಳ ವಿರುದ್ಧದ ಹಣ ಅಕ್ರಮ ವರ್ಗಾವಣೆ ಪ್ರಕರಣದ ವಿಚಾರಣೆಯನ್ನು ಇ.ಡಿ ವಿಶೇಷ ಕೋರ್ಟ್ ಜುಲೈ 30ಕ್ಕೆ ಮುಂದೂಡಿದೆ.

ಡಿಕೆಶಿಗೆ ನೀಡಿರುವ ಜಾಮೀನು ನವೀಕರಿಸಲು ವಕೀಲರು ಮನವಿ ಸಲ್ಲಿಸಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಇ.ಡಿ ಪರ ವಕೀಲರು, ಡಿಕೆಶಿ ಅವರಿಗೆ ಜಾಮೀನು ನೀಡಿರುವುದು ದೆಹಲಿ ಹೈಕೋರ್ಟ್, ಇಡಿ ವಿಶೇಷ ನ್ಯಾಯಾಲಯದಲ್ಲಿ ಅಲ್ಲ. ಈ ನ್ಯಾಯಾಲಯ ಜಾಮೀನನ್ನು ನಿರಾಕರಿಸಬೇಕು ಎಂದರು.

ಇಡಿ ವಕೀಲರ ವಾದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಡಿಕೆಶಿ ಪರ ವಕೀಲರು, ಇದೇ ಕೋರ್ಟ್ ಕಾರ್ತಿ ಚಿದಂಬರಂಗೆ ಜಾಮೀನು ನೀಡಿದೆ. ಡಿಕೆಶಿಗೂ ಜಾಮೀನು ನೀಡಬಹುದು ಎಂದು ವಾದಿಸಿದರು.

ವಾದ–ಪ್ರತಿವಾದ ಆಲಿಸಿದ ಇ.ಡಿ ನ್ಯಾಯಾಲಯವು ವಿಚಾರಣೆಯನ್ನು ಜುಲೈ 30ಕ್ಕೆ ಮುಂದೂಡಿತು.

ಹಿಂದಿನ ಲೇಖನವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ಇಳಿಕೆ: ಇಂದಿನಿಂದಲೇ ಪರಿಷ್ಕೃತ ದರ ಜಾರಿ
ಮುಂದಿನ ಲೇಖನರಿಲಯನ್ಸ್ ಜಿಯೋ  ಪರಿಚಯಿಸಿದೆ ಹೊಸ ಗೇಮ್ ಕಂಟ್ರೋಲರ್