ಮನೆ ರಾಷ್ಟ್ರೀಯ ಅಕ್ರಮ ಹಣ ವರ್ಗಾವಣೆ ಪ್ರಕರಣ: ಇ.ಡಿ ವಿಚಾರಣೆಗೆ ಹಾಜರಾದ ಡಿಕೆಶಿ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಇ.ಡಿ ವಿಚಾರಣೆಗೆ ಹಾಜರಾದ ಡಿಕೆಶಿ

0

ನವದೆಹಲಿ(Newdelhi): ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಜಾರಿ ನಿರ್ದೇಶನಾಲಯದ ವಿಚಾರಣೆಗೆ ಸೋಮವಾರ ಹಾಜರಾಗಿದ್ದಾರೆ.

ಶಿವಕುಮಾರ್ ಅವರಿಗೆ ಕಳೆದ ವಾರ ಇ.ಡಿ. ಅಧಿಕಾರಿಗಳು ಸಮನ್ಸ್ ನೀಡಿ ಸೋಮವಾರ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು.ಅದರಂತೆ ಇಂದು 11 ಗಂಟೆ ಸುಮಾರಿಗೆ ಇ.ಡಿ. ಕಚೇರಿಗೆ ಡಿ.ಕೆ.ಶಿವಕುಮಾರ್ ತಲುಪಿದರು.

ಯಾವ ವಿಷಯಕ್ಕೆ ಸಂಬಂಧಿಸಿ ಸಮನ್ಸ್ ನೀಡಿದ್ದಾರೆ ಎಂಬುದು ಗೊತ್ತಿಲ್ಲ. ಈ ಬಗ್ಗೆ ವಿಚಾರಣೆ ಮುಗಿದ ಬಳಿಕ ಪ್ರತಿಕ್ರಿಯಿಸುತ್ತೇನೆ ಎಂದು ಶಿವಕುಮಾರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಹಿಂದಿನ ಲೇಖನಚಂಡೀಘಡ ಹಾಸ್ಟೆಲ್ ವಿದ್ಯಾರ್ಥಿನಿ ವಿಡಿಯೋ ವೈರಲ್ ಪ್ರಕರಣ: ಇಬ್ಬರ ಬಂಧನ
ಮುಂದಿನ ಲೇಖನಗ್ರಾಮಕ್ಕೆ ನುಗ್ಗಿದ ಒಂಟಿ ಸಲಗ: ಜನರಲ್ಲಿ ಆತಂಕ