ಏಪ್ರಿಲ್ 26ಕ್ಕೆ ಮೊದಲ ಹಂತದ ಚುನಾವಣೆ……
'ಕೈ' ಪರ ಪ್ರಚಾರದಲ್ಲಿದ್ದಾಗ ತಡೆದ ಬಿಜೆಪಿ ಕಾರ್ಯಕರ್ತರು….
ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ರಾಪಿಡೋ ವತಿಯಿಂದ ಸಿಹಿ ಸುದ್ದಿ
ಏಪ್ರಿಲ್ 26ಕ್ಕೆ ಏನೆಲ್ಲ ಲಭ್ಯವಿರುತ್ತದೆ….
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
ಮನೆ ಮಾರಾಟಕ್ಕೆಮನೆ ಮಾರಾಟಕ್ಕೆ….
ಅಮೆರಿಕದಲ್ಲೂ ಕೂಡ ಹೆಚ್ಚಾಗುತ್ತಿದ್ದಾರೆ ಭಾರತೀಯರು.
27ರೂ. ಗೆ, 28000 ಸಾವಿರ ದಂಡ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಬೆಂಗಳೂರು(Bengauru): ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಫಾರ್ಮ್ ಹೌಸ್ ಮೇಲೆ ಸಿಸಿಬಿ ಪೊಲೀಸರು ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ಅಲ್ಲಿ ವನ್ಯಜೀವಿಗಳನ್ನು ಅಕ್ರಮವಾಗಿ ಸಾಕಾಣಿಕೆ ಮಾಡಿರೋದು ಗೊತ್ತಾಗಿದೆ.
ಎಸ್.ಎಸ್.ಮಲ್ಲಿಕಾರ್ಜುನ್ ದಾವಣಗೆರೆಯ ಕಲ್ಲೇಶ್ವರ ಮಿಲ್ ಹಿಂಭಾಗದಲ್ಲಿರುವ ಫಾರ್ಮ್’ಹೌಸ್ ನಲ್ಲಿ ಏಳು ಚುಕ್ಕಿ ಜಿಂಕೆಗಳು, 10 ಕೃಷ್ಣಮೃಗಗಳು, ಏಳು ಕಾಡುಹಂದಿಗಳು, ಮೂರು ಮುಂಗುಸಿಗಳು, ಎರಡು ನರಿಗಳು ಸಿಕ್ಕಿವೆ ಎಂದು ತಿಳಿದು ಬಂದಿದೆ. ಸಿಸಿಬಿ ಪೊಲೀಸರು ವನ್ಯಜೀವಿಗಳನ್ನು ರಕ್ಷಿಸಿ ಅರಣ್ಯ ಇಲಾಖೆಗೆ ಹಸ್ತಾಂತರಿಸಿದ್ದಾರೆ.
ಪ್ರಕರಣದ ವಿವರ
ಬೆಂಗಳೂರಿನ ಹೆಬ್ಬಾಳದಲ್ಲಿ ಡಿ.18ರಂದು ಜಿಂಕೆ ಚರ್ಮ, ಕೊಂಬು, ಮೂಳೆ ಮಾರಾಟ ಮಾಡಲು ಬಂದಿದ್ದ ಸೆಂಥಿಲ್ ಎಂಬ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಈ ವೇಳೆ ಬಂಧಿತನನ್ನು ವಿಚಾರಣೆಗೆ ಒಳಪಡಿಸಿದಾಗ ದಾವಣಗೆರೆಯಿಂದ ಚರ್ಮ ಹಾಗೂ ಕೊಂಬು ತಂದಿರುವುದಾಗಿ ಆತ ಬಾಯ್ಬಿಟ್ಟಿದ್ದನು.
ಈ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಫಾರ್ಮ್’ಹೌಸ್’ನಲ್ಲಿದ್ದ ಕಾರ್ಮಿಕರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ.
ವನ್ಯಜೀವಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಳ್ಳಲು ಅವಕಾಶ ನೀಡಬೇಕು ಎಂದು ಅರಣ್ಯ ಇಲಾಖೆ ನ್ಯಾಯಾಲಯಕ್ಕೆ ಕೇಳಿಕೊಂಡಿದೆ. ಆದೇಶದ ಪ್ರತಿ ಸಿಗುತ್ತಿದ್ದಂತೆಯೇ ತನಿಖಾಧಿಕಾರಿಯನ್ನು ನೇಮಿಸಿ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲು ಅಧಿಕಾರಿಗಳು ನಿರ್ಧರಿಸಿದ್ದಾರೆ.
ನಾವು ಅನುಮತಿ ಪಡೆದುಕೊಂಡು ಪ್ರಾಣಿಗಳನ್ನು ಸಾಕಿದ್ದೇವೆ ಎಂದು ಎಸ್.ಎಸ್.ಮಲ್ಲಿಕಾರ್ಜುನ್ ಪ್ರತಿಕ್ರಿಯೆ ನೀಡಿದ್ದು, ಈ ಬಗ್ಗೆ ಅರಣ್ಯ ಇಲಾಖೆ ಈ ಬಗ್ಗೆ ಮಾಹಿತಿ ನೀಡಿಲ್ಲ.