ನವದೆಹಲಿ(Newdelhi): ನಾನು ಅಪೇಕ್ಷೆ ಪಟ್ಟು ನಿಂತಿರುವ ಚುನಾವಣೆ ಅಲ್ಲ. ನಮ್ಮ ನಾಯಕರು ಒತ್ತಾಯ ಮಾಡಿದ ಮೇಲೆ ಚುನಾವಣೆಗೆ ಸ್ಪರ್ಧಿಸಿದ್ದೇನೆ. ಇದು ವೈಯಕ್ತಿಕ ಹೋರಾಟ ಅಲ್ಲ ಎಂದು ಎಐಸಿಸಿ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಶುಕ್ರವಾರ ಇಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷನಾಗಿದ್ದ ವೇಳೆಯೂ ಇದನ್ನೇ ಹೇಳಿದ್ದೆ. ಕೆಲವರು ನಾನು ಅಂತ ಹೇಳುತ್ತಾರೆ. ಅದರ ಬದಲು ನಾವು ಎಂದರೆ ಪಕ್ಷಕ್ಕೆ ಒಳ್ಳೆಯದು. ನಾನು ಸಾಮೂಹಿಕ ನಾಯಕತ್ವದಲ್ಲಿ ನಂಬಿಕೆ ಇಟ್ಟಿದ್ದೇನೆ. ನನ್ನೊಬ್ಬನ ಕೈಯಿಂದ ಎಲ್ಲವೂ ಸಾಧ್ಯವಿಲ್ಲ ಎಂದರು.
ರಾಜಸ್ಥಾನದ ಉದಯಪುರದಲ್ಲಿ ತೆಗೆದುಕೊಂಡ ನಿರ್ಧಾರಗಳನ್ನು ಜಾರಿ ಮಾಡುವುದಕ್ಕೆ ಮೊದಲ ಆದ್ಯತೆ ನೀಡುತ್ತೇನೆ ಎಂದರು.
ಅಭ್ಯರ್ಥಿಯಾಗಿ ಹತ್ತು ರಾಜ್ಯಗಳಲ್ಲಿ ಪ್ರವಾಸ ಮಾಡಿ ಮತ ಕೇಳಿದ್ದೇನೆ. ಇನ್ನು ಒಂದಷ್ಟು ರಾಜ್ಯಗಳು ಬಾಕಿ ಇವೆ. ರಾಜ್ಯದ ಹಲವು ನಾಯಕರಿಗೆ ಕರೆ ಮಾಡಿ ಮಾತನಾಡಿದ್ದೇನೆ ಎಂದರು.
ಕಾಂಗ್ರೆಸ್ ಪಕ್ಷಕ್ಕಾಗಿ ಗಾಂಧಿ ಪರಿವಾರ ತ್ಯಾಗ ಮಾಡಿದೆ. ಸೋನಿಯಾ ಗಾಂಧಿ ಕೂಡಾ ಸಾಕಷ್ಟು ಹೋರಾಟ ಮಾಡಿದ್ದಾರೆ. ಬಿಜೆಪಿಯು ನಮ್ಮ ಸರ್ಕಾರಗಳನ್ನು ಉರುಳಿಸುವ ಪ್ರಯತ್ನ ಮಾಡಿದೆ. ಇದನ್ನೆಲ್ಲ ಗಮನದಲ್ಲಿಟ್ಟುಕೊಂಡು ಗಾಂಧಿ ಕುಟುಂಬದ ಸಲಹೆ, ಮಾರ್ಗದರ್ಶನ ಪಡೆಯುತ್ತೇನೆ. ಇದರಲ್ಲಿ ನಾಚಿಕೆ ಪಡುವಂತಹುದು ಏನಿದೆ. ತಪ್ಪುಗಳಿದ್ದರೆ ತಿದ್ದಿಕೊಳ್ಳುತ್ತೇನೆ ಎಂದರು.
ಗಾಂಧಿ ಪರಿವಾರ ಬಿಟ್ಟು ರಾಜಕೀಯ ಮಾಡಲು ಸಾಧ್ಯವಿಲ್ಲ. ಗಾಂಧಿ ಕುಟುಂಬ ಪವರ್ ಸೆಂಟರ್ ಅಲ್ಲ, ಅವರ ಅನುಭವವನ್ನು ಪಡೆಯುವುದರಲ್ಲಿ ತಪ್ಪಿಲ್ಲ ಎಂದು ಅವರು ಹೇಳಿದರು.
ಪಕ್ಷದ ಜಿ 23 ನಾಯಕರು ನನ್ನ ಬೆಂಬಲಕ್ಕೆ ನಿಂತಿದ್ದಾರೆ. ನಮ್ಮದು ಪ್ರಧಾನಿ ನರೇಂದ್ರ ಮೋದಿ–ಗೃಹ ಸಚಿವ ಅಮಿತ್ ಶಾ ತತ್ವದ ವಿರುದ್ಧ ಹೋರಾಟ. ಶಾಸಕರ ಖರೀದಿ, ಹಿಂಬಾಗಿಲ ಮೂಲಕ ಸರ್ಕಾರ ರಚನೆಯ ವಿರುದ್ಧ ನಾವು ಹೋರಾಟ ಮಾಡಲಿದ್ದೇವೆ ಎಂದು ಅವರು ತಿಳಿಸಿದರು.
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.