ಮನೆ ರಾಜ್ಯ ಕಾವೇರಿ ಬಿಕ್ಕಟ್ಟು ಚರ್ಚಿಸಲು ದೆಹಲಿಯ ತಾಜ್ಮ ಮಾನ್ ಸಿಂಗ್ ಹೋಟೆಲ್ ನಲ್ಲಿ ನಾಳೆ ಬೆಳಿಗ್ಗೆ ಮಹತ್ವದ...

ಕಾವೇರಿ ಬಿಕ್ಕಟ್ಟು ಚರ್ಚಿಸಲು ದೆಹಲಿಯ ತಾಜ್ಮ ಮಾನ್ ಸಿಂಗ್ ಹೋಟೆಲ್ ನಲ್ಲಿ ನಾಳೆ ಬೆಳಿಗ್ಗೆ ಮಹತ್ವದ ಸಭೆ

0

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿವಾದ ಕೇಂದ್ರ ಸರ್ಕಾರದ ಮುಂದೆ ಬಾಕಿ ಇರುವ ರಾಜ್ಯದ ಯೋಜನೆಗಳು ಹಾಗೂ ಬರ ಪರಿಹಾರ ವಿಷಯಗಳಿಗೆ ಸಂಬಂಧಿಸಿದಂತೆ ಚರ್ಚಿಸಲು ದೆಹಲಿಯ ತಾಜ್ಮ ಮಾನ್ ಸಿಂಗ್ ಹೋಟೆಲ್ ನಲ್ಲಿ ನಾಳೆ ಬೆಳಿಗ್ಗೆ ಮಹತ್ವದ ಸಭೆ ಆಯೋಜಿಸಲಾಗಿದೆ.

ರಾಜ್ಯ ಪ್ರತಿನಿಧಿಸುವ ಕೇಂದ್ರದ ಸಚಿವರು ಲೋಕಸಭಾ ಸದಸ್ಯರು ಹಾಗೂ ರಾಜ್ಯಸಭಾ ಸದಸ್ಯರು ಈ ಮಹತ್ವದ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಈ ಸಭೆಯಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಂದು ಸಂಜೆ ನವದೆಹಲಿಗೆ ತೆರಳಲಿದ್ದಾರೆ.

ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ ಅವರು ಈಗಾಗಲೇ ನವದೆಹಲಿಯಲ್ಲಿ ವಾಸ್ತವ್ಯ ಹೂಡಿದ್ದು, ನಾಳೆ ನಡೆಯಲಿರುವ ಮಹತ್ವದ ಸಭೆಗೆ ಕರ್ನಾಟಕ ಭವನದಲ್ಲಿ ಪೂರ್ವಭಾವಿ ಚರ್ಚೆ ಮಾಡುತ್ತಿದ್ದಾರೆ.

ಹಿಂದಿನ ಲೇಖನವೈವಾಹಿಕ ಸಮಸ್ಯೆಗಳನ್ನು ಹೇಗೆ ಪರಿಹರಿಸುವುದು..?
ಮುಂದಿನ ಲೇಖನಕಿವಿ ಮೂಗು ಮತ್ತು ಗಂಟಲಿನ ರೋಗಗಳು