ಮನೆ ರಾಷ್ಟ್ರೀಯ ಶ್ರೀರಾಮಮಂದಿರದ ಉದ್ಘಾಟನಾ ಸಮಾರಂಭ: ವಿಶೇಷ ಧಾರ್ಮಿಕ ವ್ರತ ಅನುಸರಿಸುವುದಾಗಿ ತಿಳಿಸಿದ ಪ್ರಧಾನಿ ಮೋದಿ

ಶ್ರೀರಾಮಮಂದಿರದ ಉದ್ಘಾಟನಾ ಸಮಾರಂಭ: ವಿಶೇಷ ಧಾರ್ಮಿಕ ವ್ರತ ಅನುಸರಿಸುವುದಾಗಿ ತಿಳಿಸಿದ ಪ್ರಧಾನಿ ಮೋದಿ

0

ಹೈದರಾಬಾದ್​: ಅಯೋಧ್ಯೆ ಶ್ರೀರಾಮಮಂದಿರದ ಉದ್ಘಾಟನಾ ಸಮಾರಂಭ ಸಮೀಪಿಸುತ್ತಿದೆ. ಇಡೀ ದೇಶ ಐತಿಹಾಸಿಕ ಕಾರ್ಯಕ್ರಮವನ್ನು ಎದುರು ನೋಡುತ್ತಿದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿಶೇಷ ಆಡಿಯೋ ಸಂದೇಶ ನೀಡಿದ್ದಾರೆ. ಇಂದಿನಿಂದ 11 ದಿನಗಳ ವಿಶೇಷ ಧಾರ್ಮಿಕ ವ್ರತಾಚರಣೆ ಅನುಸರಿಸುವುದಾಗಿ ಅವರು ಬಹಿರಂಗಪಡಿಸಿದ್ದಾರೆ.

Join Our Whatsapp Group

“ಈ ಮಹತ್ವದ ಸಂದರ್ಭಕ್ಕೆ ಸಾಕ್ಷಿಯಾಗುವ ಅವಕಾಶ ಸಿಕ್ಕಿದ್ದು ನನ್ನ ಅದೃಷ್ಟ. ನಾನು ಹಿಂದೆಂದೂ ಇಷ್ಟೊಂದು ಉತ್ಸುಕನಾಗಿರಲಿಲ್ಲ. ಜೀವನದಲ್ಲಿ ಇದೇ ಮೊದಲ ಬಾರಿಗೆ ಅಂತಹ ವಿಶೇಷ ಭಾವನೆಗಳನ್ನು ಅನುಭವಿಸುತ್ತಿದ್ದೇನೆ. ಇಂಥ ಅದ್ಭುತ ಸಮಯದಲ್ಲಿ ಮನಸ್ಸಿನಲ್ಲಿ ಮೂಡುವ ಭಾವನೆಗಳನ್ನು ವ್ಯಕ್ತಪಡಿಸುವುದು ಕಷ್ಟ” ಎಂದು ಮೋದಿ ಹೇಳಿದ್ದಾರೆ.

ಹಿಂದೂ ಶಾಸ್ತ್ರಗಳ ಪ್ರಕಾರ, ದೇವಾಲಯಗಳಲ್ಲಿ ಪ್ರಾಣಪ್ರತಿಷ್ಠಾನೆಯ ಮೊದಲು ಕೆಲವು ನಿಯಮಗಳನ್ನು ಅನುಸರಿಸಬೇಕಿರುತ್ತದೆ. ಕೆಲವು ಹಿಂದೂ ಪುರಾಣಗಳು ಈ ಸಂದರ್ಭಕ್ಕೂ ಮೊದಲು ಉಪವಾಸ ವ್ರತಾಚರಣೆಯನ್ನು ಉಲ್ಲೇಖಿಸಿವೆ. ಬ್ರಹ್ಮ ಮುಹೂರ್ತದ ಸಮಯದಲ್ಲಿ ಎಚ್ಚರಗೊಳ್ಳುವ ನಿಯಮಗಳನ್ನು ವಿವರಿಸಲಾಗಿದೆ. ಪ್ರಾರ್ಥನೆಗಳನ್ನು ಸಲ್ಲಿಸಲಾಗುತ್ತದೆ. ಆಹಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕಿರುತ್ತದೆ.

ಅಯೋಧ್ಯೆಯಲ್ಲಿ ರಾಮನ ಮೂರ್ತಿ ಪ್ರತಿಷ್ಠಾಪನೆ ಕಾರ್ಯ ಪ್ರಧಾನಿ ಮೋದಿ ಸಮ್ಮುಖದಲ್ಲಿ ನಡೆಯಲಿದೆ. ಜನವರಿ 22ರಂದು ಮಧ್ಯಾಹ್ನ 12.20ಕ್ಕೆ ಈ ಕಾರ್ಯಕ್ರಮ ಜರುಗಲಿದೆ. ಜನವರಿ 16ರಿಂದ ವೈದಿಕ ಕಾರ್ಯಕ್ರಮಗಳು ಆರಂಭವಾಗಲಿವೆ. ಆರ್‌ ಎಸ್‌ ಎಸ್ ಸಂಚಾಲಕ ಮೋಹನ್ ಭಾಗವತ್, ಯುಪಿ ಗವರ್ನರ್ ಆನಂದಿ ಬೆನ್ ಪಟೇಲ್ ಮತ್ತು ಸಿಎಂ ಯೋಗಿ ಆದಿತ್ಯನಾಥ್ ಭಾಗವಹಿಸಲಿದ್ದಾರೆ. ಸಮಾರಂಭಕ್ಕೆ ಸಾವಿರಾರು ಸಂತರು ಆಗಮಿಸಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.

ಇದೇ ಮೊದಲ ಬಾರಿಗೆ ರಾಮ ಮಂದಿರದ ಭದ್ರತೆಗೆ ಕೃತಕ ಬುದ್ಧಿಮತ್ತೆ (AI) ಕಣ್ಗಾವಲು ಹಾಕಲಾಗಿದೆ. ದೇಗುಲದ ಉದ್ಘಾಟನೆಗೆ ವಿಶೇಷ ಭದ್ರತೆ ಕಲ್ಪಿಸಲಾಗಿದೆ.

ಹಿಂದಿನ ಲೇಖನಹುಟ್ಟು ಹಬ್ಬ ಸಂಭ್ರಮಾಚರಣೆ ಬಳಿಕ ಜಾಲಿ ರೈಡ್ ಹೋಗುತ್ತಿದ್ದಾಗ ಅಪಘಾತ: ಇಬ್ಬರ ಸಾವು
ಮುಂದಿನ ಲೇಖನಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಸಂಸದ ಪ್ರತಾಪ್ ಸಿಂಹ