ಪ್ರಧಾನಿ ಅವರಿಗೂ ಆಹ್ವಾನ: ಶ್ರೀ ವಿಶ್ವಪ್ರಸನ್ನ ತೀರ್ಥ ಸಾಮೀಜಿ ಮಾಹಿತಿ
ಮೈಸೂರು: ಮುಂಬರುವ ಮಕರ ಸಂಕ್ರಾಂತಿ ಹಬ್ಬದ ನಂತರ ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮಮಂದಿರದ ಉದ್ಘಾಟನೆಗೆ ದಿನಾಂಕ ನಿಗದಿ ಮಾಡಲಾಗುವುದು ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು.
ನಗರದ ಸರಸ್ವತಿಪುರಂನ ಉಡುಪಿ ಕೃಷ್ಣಧಾಮದಲ್ಲಿ ಚಾತುರ್ಮಾಸ ವ್ರತ ಆಚರಣೆಯಲ್ಲಿರುವ ಶ್ರೀಗಳು ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿ, ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರನ್ನು ಉದ್ಘಾಟನಾ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ಅವರ ಸಮಯವನ್ನು ನೋಡಿಕೊಂಡು ದೇಗುಲ ಉದ್ಘಾಟನೆಗೆ ದಿನಾಂಕ ನಿಗದಿ ಮಾಡಲಾಗುತ್ತದೆ ಎಂದರು.
ರಾಮಮಂದಿರ ನಿರ್ಮಾಣವಾದರೆ ಸಾಲದು, ರಾಮರಾಜ್ಯ ನಿರ್ಮಾಣವಾಗಬೇಕು ಎಂಬುದು ಎಲ್ಲರ ಆಶಯ. ಪ್ರತಿಯೊಬ್ಬರೂ ತಮ್ಮ ಕಾರ್ಯಕ್ಷೇತ್ರದಲ್ಲಿ ಸಮಾಜಕ್ಕೆ ಕೊಡುಗೆ ನೀಡಬೇಕು. ರಾಮನ ಗುಣಗಳಲ್ಲಿ ಎಲ್ಲರೂ ಒಂದೊಂದು ಗುಣ ಅಳವಡಿಸಿಕೊಂಡರೆ ರಾಮರಾಜ್ಯ ಕಲ್ಪನೆ ನನಸಾಗಲಿದೆ. ರಾಮಭಕ್ತಿ ಬೇರೆ ಅಲ್ಲ. ದೇಶಭಕ್ತಿ ಬೇರೆ ಅಲ್ಲ. ರಾಮಸೇವೆ, ದೇಶ ಸೇವೆ ಎರಡೂ ಒಂದೆ. ಸಮಾಜದಲ್ಲಿ ಇರುವ ಅಸಹಾಯಕರಿಗೆ, ಬಡವರಿಗೆ, ಕಷ್ಟದಲ್ಲಿ ಇರುವವರಿಗೆ ಅವರವರ ವೃತ್ತಿ ಸೀಮೆಯಲ್ಲಿ ನೆರವಾಗುವುದೇ ರಾಮ ಸೇವೆ ಎಂದರು.
ಗೋವುಗಳ ರಕ್ಷಣೆಗೆ ಮಠದಿಂದ ಹೆಚ್ಚಿನ ಒತ್ತು ನೀಡಲಾಗಿದೆ. ಈ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲೂ ಗೋಶಾಲೆ ತೆರೆಯಬೇಕೆಂಬುದು ನಮ್ಮ ಆಪೇಕ್ಷೆಯಾಗಿದೆ. ಆ ನಿಟ್ಟಿನಲ್ಲಿ ನಾವು ಕಾರ್ಯೋನ್ಮಖರಾಗಿದ್ದೇವೆ. ಇಂದು ಸಮಾಜದಲ್ಲಿ ಅನೇಕ ಬಗೆಯ ಗೊಂದಲಗಳು ಸೃಷ್ಟಿಯಾಗಿವೆ. ಹಿಂಸೆಯ ವೈಭವೀಕರಣವಾಗುತ್ತಿದೆ. ವಿದೇಶಗಳಲ್ಲಿ ಅಪರಾಧ ಮಾಡಲು ಹಿಂದೆ ಮುಂದೆ ನೋಡುತ್ತಾರೆ. ಆದರೆ ನಮ್ಮಲ್ಲಿ ಆ ರೀತಿ ಇಲ್ಲ. ಕಾನೂನಿನ ಮೇಲೆ ಭಯವೇ ಇಲ್ಲವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಶಾಸಕಾಂಗ, ಕಾರ್ಯ್ಂಗ, ನ್ಯಾಯಾಂಗ ಸಮರ್ಥವಾಗಿ ಕಾರ್ಯ ನಿರ್ವಹಿಸಬೇಕು. ಜನರ ವಿಶಾಸಗಳಿಸಬೇಕು. ಪತ್ರಿಕಾರಂಗ ಸಮಾಜ ಕಟ್ಟುವ ಕೆಲಸ ಮಾಡಬೇಕು. ಸಾಮರಸ್ಯ ಗಟ್ಟಿಗೊಳಿಸುವ ಕೆಲಸವನ್ನು ಮಾಡುವ ಮೂಲಕ ಪತ್ರಿಕಾರಂಗ ಸಮಾಜದಲ್ಲಿ ಮಾದರಿಯಾಗಿ ನಿಲ್ಲಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ರಾಜ್ಯ ಹೋಟೆಲ್ ಮಾಲಿಕರ ಸಂಘದ ಉಪಾಧ್ಯಕ್ಷ ರವಿಶಾಸ್ತ್ರಿ, ಹೋಟೆಲ್ ಮಾಲೀಕರ ಪತ್ರಿನ ಸಹಕಾರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಆರ್.ತಂತ್ರಿ, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಟಿ.ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಎಂ.ಸುಬ್ರಹ್ಮಣ್ಯ, ಕಾರ್ಯದರ್ಶಿ ರಂಗಸಾಮಿ, ರಾಜ್ಯ ಸಮಿತಿ ಸದಸ್ಯ ಬಿ.ರಾಘವೇಂದ್ರ, ಕಾರ್ಯಕಾರಿ ಸಮಿತಿ ಸದಸ್ಯರಾದ ಶಿವಮೂರ್ತಿ ಜುಪ್ತಿಮಠ, ಆರ್.ಕೃಷ್ಣ, ಮಾಚಮ್ಮ ಮಲ್ಲಿಗೆ, ಹಿರಿಯ ಪತ್ರಕರ್ತ ಮೂಗೂರು ನಂಜುಂಡಸಾಮಿ ಇತರರು ಹಾಜರದ್ದಿರು.
ಕೆ ಸುಧಾಕರ್ ಗೆ ಗಂಡಾಂತರ.
ಕಾಂಗ್ರೆಸ್ ಕಾರ್ಯಕರ್ತರಿಗೆ ಐಟಿ ಕಿರುಕುಳ
ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆ ದ್ವಂಸ
ಏಪ್ರಿಲ್ 26ಕ್ಕೆ ಮೊದಲ ಹಂತದ ಚುನಾವಣೆ……
'ಕೈ' ಪರ ಪ್ರಚಾರದಲ್ಲಿದ್ದಾಗ ತಡೆದ ಬಿಜೆಪಿ ಕಾರ್ಯಕರ್ತರು….
ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ರಾಪಿಡೋ ವತಿಯಿಂದ ಸಿಹಿ ಸುದ್ದಿ
ಏಪ್ರಿಲ್ 26ಕ್ಕೆ ಏನೆಲ್ಲ ಲಭ್ಯವಿರುತ್ತದೆ….
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.