ಮನೆ ರಾಜ್ಯ ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಳ : ಎಲ್ಲಾ ಶಾಲೆಗಳಿಗೆ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ.!

ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಳ : ಎಲ್ಲಾ ಶಾಲೆಗಳಿಗೆ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ.!

0

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಮತ್ತೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಇದೀಗ ಗಂಭೀರ ಎಚ್ಚರಿಕೆ ತೆಗೆದುಕೊಂಡಿದ್ದು, ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ ನೂತನ ಮಾರ್ಗಸೂಚಿಗಳನ್ನು ಜಾರಿಗೊಳಿಸಿದೆ. ಈ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕೆಂದು ಶಾಲಾ ಆಡಳಿತ ಮಂಡಳಿಗೆ ಸೂಚನೆ ನೀಡಲಾಗಿದೆ.

ಕೊರೊನಾ, ಡೆಂಗ್ಯೂ ಹಾಗೂ ಇತರ ವೈರಲ್ ಸೋಂಕುಗಳು ಮಳೆಗಾಲದಲ್ಲಿ ಹೆಚ್ಚಾಗುವ ಸಾಧ್ಯತೆ ಇರುವುದರಿಂದ, ಈ ಸಂದರ್ಭದಲ್ಲಿ ಮಕ್ಕಳ ಆರೋಗ್ಯಕ್ಕೆ ಹೆಚ್ಚಿನ ನಿಗಾ ವಹಿಸಬೇಕೆಂಬ ಅಗತ್ಯತೆಯಿಂದಲೇ ಈ ಕ್ರಮ ಕೈಗೊಳ್ಳಲಾಗಿದೆ. ಆರೋಗ್ಯ ಇಲಾಖೆ ಆಯುಕ್ತ ಡಾ. ಶಿವಕುಮಾರ್ ಅವರಿಂದ ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಲಾಗಿದೆ.

ಆರೋಗ್ಯ ಇಲಾಖೆಯ ಮಾರ್ಗಸೂಚಿಗಳ ಪ್ರಮುಖ ಅಂಶಗಳು:

  1. ಮಕ್ಕಳಲ್ಲಿ ಜ್ವರ, ಕೆಮ್ಮು, ನೆಗಡಿ ಮೊದಲಾದ ಕೋವಿಡ್ ಗುರ್ತಿನ ಲಕ್ಷಣಗಳು ಕಂಡುಬಂದಲ್ಲಿ ಅವರನ್ನು ಶಾಲೆಗೆ ಕಳುಹಿಸಬಾರದು.
  2. ವಿದ್ಯಾರ್ಥಿಗಳು ಸಂಪೂರ್ಣವಾಗಿ ಗುಣಮುಖರಾದ ಮೇಲೆ ಮಾತ್ರ ಶಾಲೆಗೆ ಹಾಜರಾಗಲು ಅವಕಾಶ ನೀಡಬೇಕು.
  3. ಶಾಲೆಗೆ ಬಂದ ಮಕ್ಕಳಲ್ಲಿ ಕೋವಿಡ್ ಸಂಬಂಧಿತ ಲಕ್ಷಣಗಳು ಕಂಡುಬಂದರೆ ತಕ್ಷಣ ಪೋಷಕರಿಗೆ ಮಾಹಿತಿ ನೀಡಿ ಮನೆಗೆ ಕಳುಹಿಸಬೇಕು.
  4. ಶಾಲಾ ಸಿಬ್ಬಂದಿಯಲ್ಲೂ ಸಮಾನ ಲಕ್ಷಣಗಳು ಕಂಡುಬಂದರೆ ಮುಂಜಾಗ್ರತಾ ಕ್ರಮವಾಗಿ ಆರೋಗ್ಯ ಇಲಾಖೆಯ ಸೂಚನೆಯಂತೆ ಕ್ರಮ ಕೈಗೊಳ್ಳಬೇಕು.
  5. ಶಾಲೆಗಳಲ್ಲಿ ಸ್ವಚ್ಛತೆ ಪಾಲನೆ, ಕೈ ತೊಳೆಯುವ ವ್ಯವಸ್ಥೆ, ಹಾಗೂ ಕೋವಿಡ್ ನಿಯಮ ಪಾಲಿಸಬೇಕು.

ಮಕ್ಕಳ ಆರೋಗ್ಯಕ್ಕಾಗಿ ಶಾಲಾ ಆಡಳಿತ ಮಂಡಳಿಗಳು ಆರೋಗ್ಯ ಇಲಾಖೆಯ ಮಾರ್ಗಸೂಚಿಗಳನ್ನೂ ಪಾಲಿಸುವ ಜವಾಬ್ದಾರಿ ಹೊಂದಿವೆ.