ಹುಬ್ಬಳ್ಳಿ: ಹಂಪಿ ಮತ್ತು ವಿಜಯನಗರ ಸಾಮ್ರಾಜ್ಯದ ಗತ ವೈಭವ ಸಾರುವ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಚಿತ್ರಗಳು, ಹಂಪಿಯಲ್ಲಿ ರಾರಾಜಿಸುತ್ತಿದ್ದು, ಈ ಚಿತ್ರಗಳಿಗೆ ಪ್ರವಾಸಿಗರು ಮನಸೋತಿದ್ದಾರೆ.
ಹಂಪಿಯಲ್ಲಿ ಕೆಲದಿನಗಳ ಹಿಂದಷ್ಟೇ ಜಿ 20 ಸಭೆ ನಡೆದಿತ್ತು. ಸಭೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಅಧಿಕಾರಿಗಳು ಈ ಚಿತ್ರಗಳನ್ನು ಹಂಚಿಕೊಂಡಿದ್ದರು. ಈ ಚಿತ್ರಗಳು ಹಂಪಿಗೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗುವಂತೆ ಮಾಡಿದೆ.
ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಚಿತ್ರಗಳು ವಿಜಯನಗರ, ಹಂಪಿಯ ಪರಂಪರೆಯನ್ನು ಸಾರುತ್ತಿದೆ. ಇಲ್ಲಿನ ಹಳೆಯ ಮಾರುಟ್ಟೆ, ಜನರ ಖರೀದಿ, ಕುದುರೆ, ಆನೆ ಹಾಗೂ ಇತರೆ ಪ್ರಾಣಿಗಳನ್ನು ಸುಂದರ ರೀತಿಯಲ್ಲಿ ಬಿಡಿಸಲಾಗಿದೆ. ರಾಜಮನೆತನದ ಚಿತ್ರ ಹಲವರ ಕಣ್ಮನ ಸೆಳೆಯುತ್ತಿದೆ ಎಂದು ಜಿ20 ಪ್ರತಿನಿಧಿಗಳಿಗೆ ಪ್ರವಾಸಿ ತಾಣಗಳ ಪರಿಚಯಿಸಿದ ಗೈಡ್ ನಾಗರಾಜ್ ಕೆ ಎಂಬವವರು ಹೇಳಿದ್ದಾರೆ.
ಹಂಪಿ ರಾಜ್ಯದ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾಗಿದ. ಹಂಪಿಯಲ್ಲಿರುವ ಸ್ಮಾರಕಗಳು, ದೇವಾಲಯಗಳು ಮತ್ತು ಇತರ ಪಾರಂಪರಿಕ ಸ್ಥಳಗಳ ಚಿತ್ರಗಳು ಪ್ರವಾಸಿಗರ ಸಂಖ್ಯೆ ಹೆಚ್ಚಾಗುವಂತೆ ಮಾಡಿದೆ ಎಂದು ತಿಳಿಸಿದ್ದಾರೆ.
ಹಂಪಿಯಲ್ಲಿ ಇಂದು ಪ್ರೀ ವೆಡ್ಡಿಂಗ್ ಶೂಟ್ಗಳು ಜನಪ್ರಿಯವಾಗುತ್ತಿವೆ. ಆದರೆ, ಫೋಟೋ ಅಥವಾ ಫಿಲ್ಮ್ ಶೂಟ್ಗಳಿಗೆ ಸ್ಥಳೀಯ ಅಧಿಕಾರಿಗಳ ಅನುಮತಿ ಅಗತ್ಯವಿದೆ. ಇಲ್ಲಿ ಸೆಲ್ ಫೋನ್ ಫೋಟೋಗ್ರಫಿಗೆ ಯಾವುದೇ ನಿರ್ಬಂಧವಿಲ್ಲ ಎಂದು ಮಾಹಿತಿ ನೀಡಿದರು.
ಹಂಪಿಯ ಖ್ಯಾತ ಛಾಯಾಗ್ರಾಹಕ ಶಿವಶಂಕರ ಬಣಗಾರ್ ಮಾತನಾಡಿ, ಎಐ ಚಿತ್ರಗಳು ಆಕರ್ಷಕವಾಗಿವೆ. ಆದರೆ ಅವು ಹಂಪಿಯ ಸ್ಮಾರಕಗಳಿಗೆ ನ್ಯಾಯ ಒದಗಿಸುತ್ತಿಲ್ಲ. ಚಿತ್ರಗಳು ಉತ್ತರ ಭಾರತದಲ್ಲಿ ಇರುವ ದೇವಾಲಯಗಳನ್ನು ಹೋಲುತ್ತವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಕೆ ಸುಧಾಕರ್ ಗೆ ಗಂಡಾಂತರ.
ಕಾಂಗ್ರೆಸ್ ಕಾರ್ಯಕರ್ತರಿಗೆ ಐಟಿ ಕಿರುಕುಳ
ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆ ದ್ವಂಸ
ಏಪ್ರಿಲ್ 26ಕ್ಕೆ ಮೊದಲ ಹಂತದ ಚುನಾವಣೆ……
'ಕೈ' ಪರ ಪ್ರಚಾರದಲ್ಲಿದ್ದಾಗ ತಡೆದ ಬಿಜೆಪಿ ಕಾರ್ಯಕರ್ತರು….
ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ರಾಪಿಡೋ ವತಿಯಿಂದ ಸಿಹಿ ಸುದ್ದಿ
ಏಪ್ರಿಲ್ 26ಕ್ಕೆ ಏನೆಲ್ಲ ಲಭ್ಯವಿರುತ್ತದೆ….
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.