ಮನೆ ಸುದ್ದಿ ಜಾಲ ಮಾ.21 ರಿಂದ ಸಾರಿಗೆ ನೌಕರರ ಅನಿರ್ಧಿಷ್ಟಾವಧಿ ಪ್ರತಿಭಟನೆ: ಸಾರ್ವಜನಿಕರಿಗೆ ತೊಂದರೆ

ಮಾ.21 ರಿಂದ ಸಾರಿಗೆ ನೌಕರರ ಅನಿರ್ಧಿಷ್ಟಾವಧಿ ಪ್ರತಿಭಟನೆ: ಸಾರ್ವಜನಿಕರಿಗೆ ತೊಂದರೆ

0

ಬೆಂಗಳೂರು:  ರಾಜ್ಯ ಸರ್ಕಾರ 6 ವರ್ಷ ಕಳೆದರೂ ಸಾರಿಗೆ ನೌಕರರ ವೇತನ ಹೆಚ್ಚಳ ಮಾಡದ ಮತ್ತು ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸದ ಹಿನ್ನೆಲೆ ಮಾರ್ಚ್ 21 ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ಮಾಡಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರು ಮುಂದಾಗಿದ್ದಾರೆ.

ಇದರಿಂದಾಗಿ ಮಾರ್ಚ್ 22 ರಂದು ಯುಗಾದಿಗೆ ತಮ್ಮ ಊರುಗಳಿಗೆ ತೆರಳುವ ಪ್ರಯಾಣಿಕರಿಗೆ ಸಾಕಷ್ಟು ತೊಂದರೆಯಾಗಲಿದೆ.

ಈ ಮುಷ್ಕರಕ್ಕೆ 4 ನಿಗಮಗಳ ನೌಕರರು ಬೆಂಬಲ ವ್ಯಕ್ತಪಡಿಸಿದ್ದು, ಅಂದಿನಿಂದ 23,000 ಕೆಎಸ್ ಆರ್ ಟಿಸಿ ಬಸ್ ಗಳು ರಸ್ತೆಗೆ ಇಳಿಯುವುದಿಲ್ಲ ಎಂದು ಸಾರಿಗೆ ನೌಕರರ ಸಂಘ ಹೇಳಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಸಾರಿಗೆ ಸಚಿವ ಬಿ. ನಮ್ಮ ಎಲ್ಲ ಬೇಡಿಕೆಗಳನ್ನು ಈಡೇರಿಸುತ್ತೇವೆ ಎಂದು ಈ ಹಿಂದೆ ನಡೆದ ಹಲವು ಸಭೆಗಳಲ್ಲಿ ಹೇಳಿದ್ದರು. ಆದರೆ ಇನ್ನುವರೆಗು ನಮ್ಮ ಬೇಡಿಕೆಗಳನ್ನು ಈಡೇರಿಸಿಲ್ಲ. ಇತ್ತೀಚಿಗೆ ಸರ್ಕಾರಿ ನೌಕರರು, ವೇತನ ಹೆಚ್ಚಳ ಸಂಬಂಧ ಪ್ರತಿಭಟನೆ ಮಾಡಿದ ವೇಳೆ ಸಿಎಂ ಬೊಮ್ಮಾಯಿ ಶೇ 17 ರಷ್ಟು ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಿದರು. ಆದರೆ ನಾವು ಇಷ್ಟು ವರ್ಷಗಳಿಂದ ಪ್ರಭಟನೆ ನಡೆಸುತ್ತಿದ್ದರೂ, ಗಮನ ಹರಿಸುತ್ತಿಲ್ಲ. ಅವರು ಕೇವಲ ಶೇ 10 ರಷ್ಟು ಮಾತ್ರ ವೇತನ ಹೆಚ್ಚಿಸುವ ಭರವಸೆ ನೀಡಿದ್ದಾರೆ. ನಾವು ಅದನ್ನು ತಿರಸ್ಕರಿಸಿದ್ದೇವೆ ಎಂದು ಸಾರಿಗೆ ನೌಕರರ ಸಂಘದ ಅಧ್ಯಕ್ಷ ಹೆಚ್.ವಿ. ಅನಂತ ಸುಬ್ಬರಾವ್ ಹೇಳಿದ್ದಾರೆ.

ಬೇಡಿಕೆಗಳೇನು?

1. ಮೂಲ ವೇತನಕ್ಕೆ ಬಿ.ಡಿ.ಎ ವಿಲೀನಗೊಳಿಸಿ, ಮೂಲ ವೇತಕ್ಕೆ ಶೇ. 25 ರಷ್ಟು ಹೆಚ್ಚಿಸಬೇಕು

2. ವೇತನ ಹೆಚ್ಚಳವೂ ಪರಿಷ್ಕೃತ ಮೂಲ ವೇತನದ ಶೇ.3 ರಷ್ಟಿರಬೇಕು.

3. ಆಯ್ಕೆ ಶ್ರೇಣಿ ಹಾಗೂ ಉನ್ನತ ಶ್ರೇಣಿಗಳ ವೇತನ ಶ್ರೇಣಿಯನ್ನು ಮೇಲಿನಂತೆಯೇ ಸಿದ್ದಪಡಿಸಬೇಕು

4. ಆಯ್ಕೆ ಶ್ರೇಣಿ ಬಡ್ತಿಯನ್ನು ಸೇವಾವಧಿಯ ಪ್ರತಿ 10 ವರ್ಷಕ್ಕೆ ನೀಡಬೇಕು.

5. ಎಲ್ಲ ನೌಕರರಿಗೂ ಹಾಲಿ ಇರುವ ಬಾಟಾ ಮಾಸಿಕ, ದೈನಂದಿನ (ಕ್ಯಾಷ್, ರಿಪಾಸ್ಟ್ , ಬಟ್ಟೆ ತೊಳೆಯುವ, ರಾತ್ರಿ ಪಾಳಿ ಪ್ರೋತ್ಸಾಹ ಭತ್ಯೆ) ಭತ್ಯೆಗಳನ್ನು ಐದು ಪಟ್ಟು ಜಾಸ್ತಿ ಮಾಡಬೇಕು.

6. ಹೊಲಿಗೆ ಭತ್ಯ, ಶೂ, ಜೆರ್ಸಿ, ರೈನ್ ಕೋಟ್ ಗೆ ನೀಡುವ ಮೊತ್ತವನ್ನು ಮೂರು ಪಟ್ಟು ಹೆಚ್ಚಿಸಬೇಕು.

7. ಎಲ್ಲ ನಿರ್ವಾಹಕರಿಗೂ ಕ್ಯಾಪಿಯರ್ ಗಳಿಗೆ ಸಮಾನದ ನಗದು ಪ್ರೋತ್ಸಾಹಧನ ನೀಡಬೇಕು.

8.  2021ರ ಏಪ್ರಿಲ್ನಲ್ಲಿ ಮುಷ್ಕರ ನಡೆಸಿದ ಸಂದರ್ಭದಲ್ಲಿ ಸವೆಯಿಂದ ವಜಾಗೊಳಿಸಿದ ನೌಕರರನ್ನು ಷರತ್ತಿಲ್ಲದೆ ಮರು ನೇಮಕ ಮಾಡಬೇಕು.

9. ವರ್ಗಾವಣೆ ಶಿಕ್ಷೆಗೆ ಒಳಗಾದ ಸಿಬ್ಬಂದಿ, ನೌಕರರನ್ನು ಮೂಲ ಘಟಕಕ್ಕೆ ಮರು ನಿಯೋಜಿಸಬೇಕು.

10.   ಮುಷ್ಕರದ ವೇಳೆ ಎಫ್ ಐಆರ್ ದಾಖಲಿಸಿರುವ ನೌಕರರನ್ನು ಕೆಲಸಕ್ಕೆ ವಾಪಸ್ ತೆಗೆದುಕೊಳ್ಳಬೇಕು.

11. ಜಂಟಿ ಕ್ರಿಯಾ ಸಮಿತಿಯಿಂದ ಸಲ್ಲಿಸಿರುವ ಬೆಡಿಕೆಗಳನ್ನು ಆಡಳಿತ ವರ್ಗದವರು ಚರ್ಚಿಸಿ, ವಿಳಂಬವಿಲ್ಲದೆ ಈಡೇರಿಸಬೇಕು.