ಮನೆ ರಾಜಕೀಯ ವಿಕೃತ ಮನಸ್ಸಿನವರು ಸೇರಿ ಐಎನ್ ಡಿಐಎ ಒಕ್ಕೂಟ ಮಾಡಿಕೊಂಡಿದ್ದಾರೆ: ಆರಗ ಜ್ಞಾನೇಂದ್ರ

ವಿಕೃತ ಮನಸ್ಸಿನವರು ಸೇರಿ ಐಎನ್ ಡಿಐಎ ಒಕ್ಕೂಟ ಮಾಡಿಕೊಂಡಿದ್ದಾರೆ: ಆರಗ ಜ್ಞಾನೇಂದ್ರ

0

ತೀರ್ಥಹಳ್ಳಿ: ವಿಕೃತ ಮನಸ್ಸಿನವರೆಲ್ಲಾ ಸೇರಿ ಐಎನ್ ಡಿಐಎ ಒಕ್ಕೂಟ ಮಾಡಿಕೊಂಡಿದ್ದಾರೆ ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಹೇಳಿದರು.

ಇತ್ತೀಚಿಗೆ ಕೇರಳ ಮುಸ್ಲಿಂ ಲೀಗ್ ನ ಸದಸ್ಯರು, ಹಿಂದುಗಳನ್ನು ಹೊಡೆದು, ದೇವಸ್ಥಾನದ ಮುಂದೆ ನೇಣಿಗೆ ಹಾಕಬೇಕು ಎಂದು ಕೂಗಿದ್ರು‌. ಜಮ್ಮು ಕಾಶ್ಮೀರದ ಓರ್ವ ಸದಸ್ಯ 370 ಆಕ್ಟ್ ರದ್ದು ಮಾಡಲು ಕೇಸ್ ಹಾಕ್ತಾರೆ. ಇಂತವರೆಲ್ಲಾ ಸೇರಿ ಮೋದಿ ಎದುರು ಒಕ್ಕೂಟ ಮಾಡಿಕೊಂಡಿದ್ದಾರೆ. ಇವರು ಅಧಿಕಾರಕ್ಕೆ ಬಂದ್ರೇ ಏನಾಗುತ್ತೇ ಎಂಬ ಸೂಚನೆ ಕೊಡ್ತಿದ್ದಾರೆ ಎಂದು ತಿಳಿಸಿದರು.

ಸನಾತನ ಧರ್ಮದ ಬಗ್ಗೆ ತಮಿಳುನಾಡಿನ ಸಚಿವರ ಹೇಳಿಕೆ ಬಗ್ಗೆ ಮಾತನಾಡಿದ ಅವರು, ತಮಿಳುನಾಡು ಸಚಿವ ಹಾಗೂ ಸಿಎಂ ಪುತ್ರ ಉದಯನಿಧಿ ಸ್ಟ್ಯಾಲಿನ್ ಹೇಳಿಕೆ ಬಹಳ ಆಶ್ಚರ್ಯವಾಗಿದೆ. ಮದ ಬಂದ ಪ್ರಾಣಿಗಳ ರೀತಿ ವರ್ತನೆ ಮಾಡ್ತಿದ್ದಾರೆ. ಅವರದ್ದು ವಿಕೃತ ಸ್ವಭಾವ. ದೇಶದಲ್ಲಿ ಶೇ.80 ಕ್ಕಿಂತ ಹೆಚ್ಚು ಜನಸ ಸನಾತನ ಧರ್ಮಿಯರು ಇದ್ದಾರೆ.

ಹಿಂದೂ ಧರ್ಮದಿಂದಲೇ ಎಲ್ಲಾ ಧರ್ಮ ಶಾಂತಿಯಿಂದ ನೆಲೆಗೊಂಡಿವೆ. ಆದರೂ, ಕೂಡ ಹಿಂದೂ ಧರ್ಮದ ನಿರ್ನಾಮದ ಬಗ್ಗೆ ಮಾತಾಡ್ತಾರೆ. ಭಾವನಗಳಿಗೆ ಧಕ್ಕೆ ತಂದೂ ಬದುಕಬಹುದು ಎಂಬುದನ್ನು ನಾನು ಖಂಡಿಸುತ್ತೇನೆ ಎಂದರು.

ಜನಸಾಮಾನ್ಯರು ಇದನ್ನು ಹಗುರವಾಗಿ ಪರಿಗಣಿಸಬಾರದು. ಐಎನ್ ಡಿಐಎ ಒಕ್ಕೂಟದಲ್ಲಿನ ಕಾಂಗ್ರೆಸ್ ಸಹಿತ ಎಲ್ಲಾ ಪಕ್ಷಗಳು ಈ ವಿಚಾರದಲ್ಲಿ ಉತ್ತರ ಕೊಡಬೇಕು ಎಂದು ಆರಗ ಜ್ಞಾನೇಂದ್ರ ಆಗ್ರಹಿಸಿದರು.

ಹಿಂದಿನ ಲೇಖನನಿಮ್ಮ ಬದುಕಿನಲ್ಲಿ ಪವಾಡಗಳನ್ನು ಮಾಡಿ
ಮುಂದಿನ ಲೇಖನಬೆಂ-ಮೈ ರಾಷ್ಟ್ರೀಯ ಹೆದ್ದಾರಿಯ ರಾಂಗ್ ಸೈಡ್​ ನಲ್ಲಿ ವಾಹನ ಚಲಾಯಿಸಿದರೆ ಕಠಿಣ ಕ್ರಮ: ಅಲೋಕ್ ಕುಮಾರ್