ಮನೆ ಕ್ರೀಡೆ ಭಾರತ ವಿರುದ್ದದ ಏಕದಿನ ಸರಣಿ: ಟಾಸ್‌ ಗೆದ್ದು ಬೌಲಿಂಗ್‌ ಆಯ್ದುಕೊಂಡ ವಿಂಡೀಸ್‌

ಭಾರತ ವಿರುದ್ದದ ಏಕದಿನ ಸರಣಿ: ಟಾಸ್‌ ಗೆದ್ದು ಬೌಲಿಂಗ್‌ ಆಯ್ದುಕೊಂಡ ವಿಂಡೀಸ್‌

0

ಟ್ರಿನಿಡಾಡ್ (Trinidad): ಭಾರತ-ವೆಸ್ಟ್‌ ಇಂಡೀಸ್‌ ನಡುವಣ ಏಕದಿನ ಕ್ರಿಕೆಟ್‌ ಸರಣಿ ಇಂದಿನಿಂದ ಆರಂಭವಾಗಿದ್ದು, ಟಾಸ್‌ ಗೆದ್ದಿರುವ ವಿಂಡೀಸ್‌ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ.

ಇಲ್ಲಿನ ಕ್ವೀನ್ಸ್‌ ಪಾರ್ಕ್‌ ಓವಲ್‌ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದ್ದು, ಅನುಭವಿ ಮತ್ತು ಪ್ರಮುಖ ಆಟಗಾರರು ವಿಶ್ರಾಂತಿ ಪಡೆದಿರುವ ಭಾರತ ತಂಡವನ್ನು ಶಿಖರ್ ಧವನ್ ಮುನ್ನಡೆಸಲಿದ್ದಾರೆ. ಯುವ ಆಟಗಾರರನ್ನೊಳಗೊಂಡ ಶಿಖರ್‌ ಬಳಗಕ್ಕೆ ನಿಕೋಲಸ್ ಪೂರನ್ ನಾಯಕತ್ವದ ವಿಂಡೀಸ್ ಪಡೆಯು ಸವಾಲೊಡ್ಡಲಿದೆ.

ನಾಯಕ ರೋಹಿತ್‌ ಶರ್ಮಾ, ವಿರಾಟ್ ಕೊಹ್ಲಿ, ಮೊಹಮ್ಮದ್ ಶಮಿ, ಜಸ್‌ಪ್ರೀತ್ ಬೂಮ್ರಾ, ರಿಷಭ್ ಪಂತ್ ಮತ್ತು ಹಾರ್ದಿಕ್ ಪಾಂಡ್ಯ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಕೋವಿಡ್‌ ಕಾರಣದಿಂದಾಗಿ ವಿಂಡೀಸ್‌ ತಂಡದ ಅನುಭವಿ ಆಟಗಾರ ಜೇಸನ್‌ ಹೋಲ್ಡರ್‌ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ.

ಸದ್ಯ ಬ್ಯಾಟಿಂಗ್‌ ಮಾಡುತ್ತಿರುವ ಭಾರತ ತಂಡ 8.1 ಓವರ್‌ ಗಳಲ್ಲಿ 60 ರನ್‌ ಗಳಿಸಿದೆ. ಶಿಖರ್‌ ಧವನ್‌ 28, ಶುಭಮನ್‌ ಗಿಲ್‌ 32 ರನ್‌ ಗಳಿಸಿ ಆಡುತ್ತಿದ್ದಾರೆ.

ಹಿಂದಿನ ಲೇಖನಕೇರಳದಲ್ಲಿ 3ನೇ ಮಂಕಿಪಾಕ್ಸ್‌ ಸೋಂಕು ವರದಿ
ಮುಂದಿನ ಲೇಖನಆರೋಪ ಮುಚ್ಚಿಕೊಳ್ಳಲು ಕಾಂಗ್ರೆಸ್‌ ನಾಯಕರ ಮೇಲೆ ಇಡಿ ವಿಚಾರಣೆ: ಸಿದ್ದರಾಮಯ್ಯ