ಮನೆ ರಾಜಕೀಯ ರಾಜ್ಯದಲ್ಲಿ ಅಭಿವೃದ್ಧಿ ಬದಲು, ಗಲಾಟೆಗೆ ಪ್ರಚೋದನೆ ನೀಡುವುದೇ ಬಿಜೆಪಿ ಕೆಲಸ: ಡಿಕೆಶಿ

ರಾಜ್ಯದಲ್ಲಿ ಅಭಿವೃದ್ಧಿ ಬದಲು, ಗಲಾಟೆಗೆ ಪ್ರಚೋದನೆ ನೀಡುವುದೇ ಬಿಜೆಪಿ ಕೆಲಸ: ಡಿಕೆಶಿ

0

ಬೆಂಗಳೂರು(Bengaluru): ರಾಜ್ಯದಲ್ಲಿ ಬಿಜೆಪಿಗೆ ಅಭಿವೃದ್ದಿ ಮಂತ್ರ ಹೇಳಲು ಆಗಲ್ಲ, ಗಲಾಟೆ, ಪ್ರಚೋದನೆ ಮಾಡಬೇಕು ಎಂಬುದೇ ಬಿಜೆಪಿ ಉದ್ದೇಶ ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್‌ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಶುಕ್ರವಾರ ಮಾತನಾಡಿದ ಅವರು, ಗಣೇಶೋತ್ಸವಕ್ಕೆ ಬಾಲ ಗಂಗಾಧರ್ ತಿಲಕ್ ಫೋಟೋ ಹಂಚಿದರೆ ಅದಕ್ಕೆ ಅರ್ಥ ಇದೆ. ಗಣೇಶ ಉತ್ಸವಕ್ಕೆ ಅವರು ಶಕ್ತಿ ತುಂಬಿದವರು. ವಿಘ್ನ ನಿವಾರಣೆ ಮಾಡುವವನು ವಿನಾಯಕ. ಆ ವಿನಾಯಕನಿಗೂ ಸಾವರ್ಕರ್‌ಗೂ ಏನು ಸಂಬಂಧ? ಎಂದು ಪಶ್ನಿಸಿದರು.

ಈ ರೀತಿ ಮಾಡುವುದರಿಂದ ಬಿಜೆಪಿ ತನ್ನ ವಿಚಾರ ಧಾರೆಯನ್ನು ಹಾಗೂ ದೇಶದ ವಿಚಾರ ಧಾರೆಯನ್ನು ಕುಗ್ಗಿಸುವ ಕೆಲಸವನ್ನು ಮಾಡುತ್ತಿದೆ ಎಂದು ಆರೋಪಿಸಿದರು.

ಆಗಸ್ಟ್ 28 ಹಾಗೂ 29 ಎರಡು ದಿನ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಬರುತ್ತಿದ್ದಾರೆ. ದೆಹಲಿಯಿಂದ ಸೆ.1 ನೇ ತಾರೀಕು ತಂಡ ಬರಲಿದೆ. ಭಾರತ್ ಜೋಡೋ ಕಾರ್ಯಕ್ರಮದ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ತಿಳಿಸಿದರು.

ಗೃಹ ಸಚಿವ ಆರಗ ಜ್ಞಾನೇಂದ್ರ ಸೇರಿ ನಾಲ್ವರಿಗೆ ಬದಲಿ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಯುಕ್ತರ ನಡೆಯನ್ನು ತರಾಟೆಗೆ ತೆಗೆದುಕೊಂಡಿರುವ ಸುಪ್ರೀಂ ಕೋರ್ಟ್‌ ನಡೆಗೆ ಪ್ರತಿಕ್ರಿಯೆ ನೀಡಿದ ಡಿ. ಕೆ. ಶಿವಕುಮಾರ್, ರಾಜಕೀಯ ಒತ್ತಡ ಇಲ್ಲದೆ ಅಧಿಕಾರಿ ಏನು ಮಾಡಲು ಸಾಧ್ಯವಿಲ್ಲ. ಫಲಾನುಭವಿಗಳು ಮೊದಲು ರಾಜೀನಾಮೆ ನೀಡಲಿ. ಸರ್ಜಾ ಅವರನ್ನು ದುರುಪಯೋಗ ಮಾಡಿಕೊಳ್ಳುವವರು ರಾಜೀನಾಮೆ ನೀಡಿದರೆ ಸೂಕ್ತ. ಸಿಎಂ ಬಸವರಾಜ ಬೊಮ್ಮಾಯಿ ಅವರು ಪಲಾನುಭಾವಿಗಳನ್ನು ಕೈ ಬಿಡಬೇಕು ಎಂದು ಆಗ್ರಹಿಸಿದರು.

ಹಿಂದಿನ ಲೇಖನವಿಜಯಪುರದಲ್ಲಿ ಮತ್ತೆ ಭೂಕಂಪ:  3.9 ತೀವ್ರತೆ ದಾಖಲು
ಮುಂದಿನ ಲೇಖನಸಿಜೆಐ ಎನ್‌ ವಿ ರಮಣ ಅವರಿಗೆ ಬೀಳ್ಕೊಡುಗೆ: ಗದ್ಗದಿತರಾದ ಹಿರಿಯ ವಕೀಲ ದುಷ್ಯಂತ್‌ ದವೆ