ಬೆಂಗಳೂರು(Bengaluru): ರಾಜ್ಯದಲ್ಲಿ ಬಿಜೆಪಿಗೆ ಅಭಿವೃದ್ದಿ ಮಂತ್ರ ಹೇಳಲು ಆಗಲ್ಲ, ಗಲಾಟೆ, ಪ್ರಚೋದನೆ ಮಾಡಬೇಕು ಎಂಬುದೇ ಬಿಜೆಪಿ ಉದ್ದೇಶ ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಶುಕ್ರವಾರ ಮಾತನಾಡಿದ ಅವರು, ಗಣೇಶೋತ್ಸವಕ್ಕೆ ಬಾಲ ಗಂಗಾಧರ್ ತಿಲಕ್ ಫೋಟೋ ಹಂಚಿದರೆ ಅದಕ್ಕೆ ಅರ್ಥ ಇದೆ. ಗಣೇಶ ಉತ್ಸವಕ್ಕೆ ಅವರು ಶಕ್ತಿ ತುಂಬಿದವರು. ವಿಘ್ನ ನಿವಾರಣೆ ಮಾಡುವವನು ವಿನಾಯಕ. ಆ ವಿನಾಯಕನಿಗೂ ಸಾವರ್ಕರ್ಗೂ ಏನು ಸಂಬಂಧ? ಎಂದು ಪಶ್ನಿಸಿದರು.
ಈ ರೀತಿ ಮಾಡುವುದರಿಂದ ಬಿಜೆಪಿ ತನ್ನ ವಿಚಾರ ಧಾರೆಯನ್ನು ಹಾಗೂ ದೇಶದ ವಿಚಾರ ಧಾರೆಯನ್ನು ಕುಗ್ಗಿಸುವ ಕೆಲಸವನ್ನು ಮಾಡುತ್ತಿದೆ ಎಂದು ಆರೋಪಿಸಿದರು.
ಆಗಸ್ಟ್ 28 ಹಾಗೂ 29 ಎರಡು ದಿನ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಬರುತ್ತಿದ್ದಾರೆ. ದೆಹಲಿಯಿಂದ ಸೆ.1 ನೇ ತಾರೀಕು ತಂಡ ಬರಲಿದೆ. ಭಾರತ್ ಜೋಡೋ ಕಾರ್ಯಕ್ರಮದ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ತಿಳಿಸಿದರು.
ಗೃಹ ಸಚಿವ ಆರಗ ಜ್ಞಾನೇಂದ್ರ ಸೇರಿ ನಾಲ್ವರಿಗೆ ಬದಲಿ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಯುಕ್ತರ ನಡೆಯನ್ನು ತರಾಟೆಗೆ ತೆಗೆದುಕೊಂಡಿರುವ ಸುಪ್ರೀಂ ಕೋರ್ಟ್ ನಡೆಗೆ ಪ್ರತಿಕ್ರಿಯೆ ನೀಡಿದ ಡಿ. ಕೆ. ಶಿವಕುಮಾರ್, ರಾಜಕೀಯ ಒತ್ತಡ ಇಲ್ಲದೆ ಅಧಿಕಾರಿ ಏನು ಮಾಡಲು ಸಾಧ್ಯವಿಲ್ಲ. ಫಲಾನುಭವಿಗಳು ಮೊದಲು ರಾಜೀನಾಮೆ ನೀಡಲಿ. ಸರ್ಜಾ ಅವರನ್ನು ದುರುಪಯೋಗ ಮಾಡಿಕೊಳ್ಳುವವರು ರಾಜೀನಾಮೆ ನೀಡಿದರೆ ಸೂಕ್ತ. ಸಿಎಂ ಬಸವರಾಜ ಬೊಮ್ಮಾಯಿ ಅವರು ಪಲಾನುಭಾವಿಗಳನ್ನು ಕೈ ಬಿಡಬೇಕು ಎಂದು ಆಗ್ರಹಿಸಿದರು.
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.