ಮನೆ ರಾಜ್ಯ ರಾಮಾಯಣ, ಸೀತೆ ಹಾಗೂ ರಾಮನಿಗೆ ಅವಮಾನ: ಡಿಕೆಶಿ ರಾಜೀನಾಮೆಗೆ  ಬಿಜೆಪಿ ಒತ್ತಾಯ

ರಾಮಾಯಣ, ಸೀತೆ ಹಾಗೂ ರಾಮನಿಗೆ ಅವಮಾನ: ಡಿಕೆಶಿ ರಾಜೀನಾಮೆಗೆ  ಬಿಜೆಪಿ ಒತ್ತಾಯ

0

ಬೆಂಗಳೂರು(Bengaluru): ಕರ್ನಾಟಕ ಕಾಂಗ್ರೆಸ್ ಘಟಕದ ಐಟಿ ಸೆಲ್‌ನ ಕಾರ್ಯದರ್ಶಿ ಶೈಲಜಾ ಅಮರನಾಥ್ ಎಂಬುವವರು ರಾಮಾಯಣ, ಸೀತೆ ಹಾಗೂ ರಾಮನಿಗೆ ಅವಮಾನ ಮಾಡಿದ್ದು, ಅವರ ಮೇಲೆ ಕೂಡಲೇ ಕ್ರಮ ಕೈಗೊಳ್ಳಿ ಎಂದು ರಾಜ್ಯ ಬಿಜೆಪಿ ಘಟಕ ಒತ್ತಾಯಿಸಿದೆ.

ಶೈಲಜಾ ಅಮರನಾಥ್ ಹಾಗೂ ಸಂಗಡಿಗರು ಕ್ಲಬ್ ಹೌಸ್ ಮೊಬೈಲ್ ಆ್ಯಪ್‌ನಲ್ಲಿ ಹಿಂದೂಗಳ ಭಾವನೆಗಳಿಗೆ ಅವಮಾನ ಮಾಡಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿದ್ದು, ಕ್ರಮ ಕೈಗೊಳ್ಳುವಂತೆ  ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಬಿಜೆಪಿ ಆಗ್ರಹಿಸಿದೆ.

ಡಿಕೆಶಿ ಅವರೇ, ನೀವು ಕೂಡಾ ಸಿದ್ದರಾಮಯ್ಯ ಜಾಡಿನಲ್ಲಿ ಹೆಜ್ಜೆ ಹಾಕುತ್ತಿದ್ದೀರಾ? ಹಿಂದೂ ದೇವ- ದೇವತೆ, ರಾಮಾಯಣಕ್ಕೆ ಅಪಮಾನ ಮಾಡಿದ ಶೈಲಜಾ ಅಮರನಾಥ್‌ಗೆ ಆಶ್ರಯ ನೀಡುವ ಮೂಲಕ ನಿಮ್ಮ ಅಂತರಾಳದಲ್ಲಿ ಇರುವ ಹಿಂದು ವಿರೋಧಿ ನೀತಿಯನ್ನು ಈಗ ಬಹಿರಂಗಪಡಿಸಿದ್ದೀರಿ. ಸಿದ್ದರಾಮಯ್ಯ ಒಬ್ಬ ಹಿಂದು ವಿರೋಧಿ. ನೀವೂ ಅವರಂತೆಯೇ? ಎಂದು ಬಿಜೆಪಿ ಪ್ರಶ್ನಿಸಿದೆ.

ಡಿಕೆಶಿ ಅವರೇ ನೀವು ಕೆಪಿಸಿಸಿ ಅಧ್ಯಕ್ಷರಾಗಿ ನೇಮಕಗೊಂಡ ನಂತರ ಕಾಂಗ್ರೆಸ್ ಪಕ್ಷದ ನಾನಾ ಘಟಕಗಳಿಗೆ ಎರಡು ವರ್ಗದ ಜನರನ್ನು ಮಾತ್ರ ನೇಮಕ ಮಾಡಿದ್ದೀರಿ. ಮೊದಲನೆಯದು ಶೈಲಜಾ ಅಮರನಾಥ್ ಅವರಂಥ ಹಿಂದು ವಿರೋಧಿಗಳು. ಎರಡನೆಯದು ನಲಪಾಡ್ ಅವರಂತಹ ರೌಡಿಗಳು. ಇಂಥ ಆಯ್ಕೆಗಾಗಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ ಎಂದು ಬಿಜೆಪಿ ಆಗ್ರಹಿಸಿದೆ.

ಹಿಂದಿನ ಲೇಖನಅಗ್ನಿಪಥ್ ವಿರೋಧಿಸಿ ಪ್ರತಿಭಟನೆ: ಕೇಂದ್ರ ಸಚಿವ ವಿ.ಕೆ.ಸಿಂಗ್ ಆಕ್ರೋಶ
ಮುಂದಿನ ಲೇಖನಬೇಸ್ ವಿವಿ ನೂತನ ಕ್ಯಾಂಪಸ್ ಉದ್ಘಾಟಿಸಿದ ಮೋದಿ