ಮನೆ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಒಳ ಮೀಸಲಾತಿ: ಸಚಿವ ಸಂಪುಟ ಉಪ ಸಮಿತಿ ರಚನೆ

ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಒಳ ಮೀಸಲಾತಿ: ಸಚಿವ ಸಂಪುಟ ಉಪ ಸಮಿತಿ ರಚನೆ

0

ಬೆಂಗಳೂರು(Bengaluru): ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಪ್ರಮಾಣ ಹೆಚ್ಚಿಸಿದ ಬೆನ್ನಲ್ಲೇ ಒಳ ಮೀಸಲಾತಿ ಕೂಗು ಜೋರಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ಒಳಮೀಸಲಾತಿ ಕುರಿತು ಪರಿಶೀಲಿಸಿ ಸೂಕ್ತ ಶಿಫಾರಸು ಮಾಡಲು ಸಚಿವ ಸಂಪುಟ ಉಪ ಸಮಿತಿ ರಚಿಸಿದೆ.

ನ. 17ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ, ಪರಿಶಿಷ್ಟ ಜಾತಿಗಳ ವರ್ಗೀಕರಣ (ಒಳಮೀಸಲಾತಿ) ಕುರಿತು ಸಂಪುಟ ಉಪ ಸಮಿತಿ ರಚಿಸಲು ನಿರ್ಣಯಿಸಲಾಗಿತ್ತು. ಆದರೆ, ಇದೀಗ ಒಳಮೀಸಲಾತಿ ಆಗ್ರಹಿಸಿ ಹೋರಾಟ ಆರಂಭವಾಗುತ್ತಿದ್ದಂತೆ ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ. ಮಾಧುಸ್ವಾಮಿ ಅಧ್ಯಕ್ಷತೆಯಲ್ಲಿ ಸಂಪುಟ ಉಪ ಸಮಿತಿ ರಚಿಸಿ ಆದೇಶ ಹೊರಡಿಸಲಾಗಿದೆ.

ಜಲಸಂಪನ್ಮೂಲ ಸಚಿವ ಗೋವಿಂದ ಎಂ. ಕಾರಜೋಳ, ಮೀನುಗಾರಿಕೆ ಸಚಿವ ಎಸ್‌. ಅಂಗಾರ, ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌ ಈ ಸಮಿತಿಯ ಸದಸ್ಯರು .ಈ ಸಮಿತಿಗೆ ಸಮಾಜ ಕಲ್ಯಾಣ ಇಲಾಖೆ ಅಗತ್ಯ ನೆರವು ನೀಡಬೇಕು ಎಂದೂ ಆದೇಶದಲ್ಲಿ ತಿಳಿಸಲಾಗಿದೆ.

ಹಿಂದಿನ ಲೇಖನನಾಗರಹೊಳೆ ರಾಷ್ಟ್ರೀಯ ಉದ್ಯಾನವನದ  ಟ್ರ್ಯಾಪಿಂಗ್ ಕ್ಯಾಮರಾ ಕಣ್ಣಲ್ಲಿ ಕರಿ ಚಿರತೆ ಸೆರೆ
ಮುಂದಿನ ಲೇಖನಮೈಸೂರು: ರೌಡಿ ಶೀಟರ್’​ಗಳ ಮನೆ ಮೇಲೆ ನಗರ ಪೊಲೀಸ್ ಕಮಿಷನರ್ ನೇತೃತ್ವದಲ್ಲಿ ದಾಳಿ