ಮನೆ ರಾಜ್ಯ ನಾಡಹಬ್ಬ ದಸರಾ: ಜಿಲ್ಲಾಡಳಿತದಿಂದ ಗಣ್ಯರಿಗೆ ಆಹ್ವಾನ

ನಾಡಹಬ್ಬ ದಸರಾ: ಜಿಲ್ಲಾಡಳಿತದಿಂದ ಗಣ್ಯರಿಗೆ ಆಹ್ವಾನ

0

ಮೈಸೂರು(Mysuru): ನಾಡಹಬ್ಬ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವಂತೆ ಕೋರಿ ಜಿಲ್ಲಾಡಳಿತದಿಂದ ಗಣ್ಯರಿಗೆ ಬುಧವಾರ ಸಾಂಪ್ರದಾಯಿಕವಾಗಿ ಆಮಂತ್ರಣ ನೀಡಲಾಗಿದೆ.

ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ದಸರೆಗೆ ಆಹ್ವಾನಿಸಿದರು.

ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಶಾಸಕರಾದ ಎಲ್.ನಾಗೇಂದ್ರ, ವಿಧಾನಪರಿಷತ್ ಸದಸ್ಯರಾದ ಸಿ.ಎನ್.ಮಂಜೆಗೌಡ, ಡಾ.ಡಿ.ತಿಮ್ಮಯ್ಯ, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ದಸರಾ ಸ್ವಾಗತ ಉಪ ಸಮಿತಿ ಕಾರ್ಯಾಧ್ಯಕ್ಷೆ ರೂಪ ಎಂ.ಜೆ., ಕಾರ್ಯದರ್ಶಿ ಕೆ.ಕುಬೇರಪ್ಪ, ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಕಾರ್ಯದರ್ಶಿ ಶ್ರೀನಿವಾಸ್ ಗೌಡ, ವಿಶೇಷ ಕರ್ತವ್ಯಾಧಿಕಾರಿ ದೊಡ್ಡನಾಗಯ್ಯ ಇದ್ದರು.

ಬಳಿಕ ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್‌, ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಅವರನ್ನು ದಸರೆಗೆ ಆಹ್ವಾನಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರನ್ನು ಜಿಲ್ಲಾಡಳಿತದಿಂದ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಸ್ವಾಗತಿಸಿದರು.

  • ಟ್ಯಾಗ್ಗಳು
  • dasara
ಹಿಂದಿನ ಲೇಖನಬೀಟ್ರೂಟ್ ಸಕತ್ ಆರೋಗ್ಯಕಾರಿ ತರಕಾರಿ
ಮುಂದಿನ ಲೇಖನಅಯೋಧ್ಯೆಯಲ್ಲಿ ಆದಿಪುರುಷ್ ಸಿನಿಮಾ ಟೀಸರ್ ರಿಲೀಸ್ ಆಗುವ ಸಾಧ್ಯತೆ