ಅಹಮದಾಬಾದ್: ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಶುಕ್ರವಾರ ಐಪಿಎಲ್ ಸೀಸನ್ 16ನ ಆರಂಭಿಕ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಅಭಿಯಾನ ಆರಂಭಿಸಲಿದೆ.
ಇದೇ ವೇಳೆ ಸಿಎಸ್ ಕೆ ಫ್ರಾಂಚೈಸಿಗೆ ಗಾಯಾಳುಗಳ ಸಮಸ್ಯೆಯೂ ಕಾಡುತ್ತಿದೆ. ಎಡಗೈ ಸೀಮರ್ ಮುಕೇಶ್ ಚೌಧರಿ ಅವರು ಗಾಯದ ಕಾರಣದಿಂದ ಸಂಪೂರ್ಣ ಕೂಟದಿಂದ ಹೊರಬಿದ್ದಿದ್ದು, ಅವರ ಬದಲಿಗೆ ಆಕಾಶ್ ಸಿಂಗ್ ಅವರನ್ನು ತಂಡಕ್ಕೆ ಸೇರಿಸಲಾಗಿದೆ.
ಕಳೆದ ಋತುವಿನಲ್ಲಿ ಐಪಿಎಲ್ ಗೆ ಪಾದಾರ್ಪಣೆ ಮಾಡಿ 16 ವಿಕೆಟ್ ಗಳನ್ನು ಕಬಳಿಸಿದ್ದ ಮುಕೇಶ್ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಮುಕೇಶ್ ಕಳೆದ ವರ್ಷದ ಅತ್ಯುತ್ತಮ ಪ್ರದರ್ಶನ ನೀಡಿದ ಆಟಗಾರರಲ್ಲಿ ಒಬ್ಬರಾಗಿದ್ದರು.
2020 ರಲ್ಲಿ ಭಾರತದ ಅಂಡರ್-19 ವಿಶ್ವಕಪ್ ತಂಡದ ಭಾಗವಾಗಿದ್ದ ಆಕಾಶ್ ಸಿಂಗ್ ಈ ಹಿಂದೆ ರಾಜಸ್ಥಾನ್ ರಾಯಲ್ಸ್ ಪರ ಆಡಿದ್ದರು. ಎಡಗೈ ವೇಗಿ ಇದುವರೆಗೆ 9 ಲಿಸ್ಟ್ ಎ ಪಂದ್ಯಗಳು ಮತ್ತು ಐದು ಪ್ರಥಮ ದರ್ಜೆ ಪಂದ್ಯಗಳ ಜೊತೆಗೆ 9 ಟಿ 20 ಪಂದ್ಯಗಳನ್ನು ಆಡಿದ್ದಾರೆ ಮತ್ತು 31 ವಿಕೆಟ್ ಗಳನ್ನು ಹೊಂದಿದ್ದಾರೆ. 20 ಲಕ್ಷಕ್ಕೆ ಮೂಲಬೆಲೆಗೆ ಆಕಾಶ ಸಿಎಸ್ ಕೆ ಸೇರಿದ್ದಾರೆ.
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.