ಮನುಷ್ಯ ಹಣ ಮತ್ತು ಅಧಿಕಾರದ ದಾಹದಿಂದ ಎಂಥ ಹೀನ ಕೃತ್ಯವನ್ನಾದರೂ ಮಾಡುತ್ತಾನೆ ಎಂಬುದು ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಇದೇ ವಿಷಯವನ್ನು ಇಟ್ಟುಕೊಂಡು ಹೊಸ ರೀತಿಯಲ್ಲಿ ತೆರೆಮೇಲೆ ಹೇಳಿರುವ ಸಿನಿಮಾ “ಐರಾವನ್’ ರಾಜಕಾರಣ, ಮೆಡಿಕಲ್ ಮಾಫಿಯಾದ ಹಿನ್ನೆಲೆಯಲ್ಲಿ ಸಸ್ಪೆನ್ಸ್ ಕಂ ಕ್ರೈಂ-ಥ್ರಿಲ್ಲರ್ ಶೈಲಿಯಲ್ಲಿ ಇಡೀ “ಐರಾವನ್’ ಸಿನಿಮಾವನ್ನು ಕಟ್ಟಿಕೊಟ್ಟಿದ್ದಾರೆ
ನಿರ್ದೇಶಕ ರಾಮ್ಸ್ರಂಗ. ರಾಜಕಾರಣ ಮತ್ತು ಮೆಡಿಕಲ್ ಮಾಫಿಯಾದಿಂದ ನಡೆಯುವ ಒಂದು ಕೃತ್ಯದ ಹಿಂದೆ ಯಾರಿದ್ದಾರೆ ಎಂಬುದರ ಹುಡುಕಾಟದ ಸುತ್ತ ಇಡೀ ಸಿನಿಮಾದ ಕಥಾಹಂದರ ಸಾಗುತ್ತದೆ.
ಇಡೀ ಸಿನಿಮಾದಲ್ಲಿ ಹಲವು ಕಲಾವಿದರ ತಾರಾಗಣವಿದ್ದರೂ, ನಟ ಜಯರಾಮ್ ಕಾರ್ತಿಕ್ (ಜೆ.ಕೆ), ಅದ್ವಿತಿ ಶೆಟ್ಟಿ ಮತ್ತು ವಿವೇಕ್ ಮೂವರ ಪಾತ್ರಗಳ ಸುತ್ತ ಇಡೀ ಸಿನಿಮಾದ ಕಥಾಹಂದರ ಸಾಗುತ್ತದೆ. ಚಿತ್ರದ ನಾಯಕ ಜಯರಾಮ್ ಕಾರ್ತಿಕ್ (ಜೆ.ಕೆ) ಸಿನಿಮಾದಲ್ಲಿ ಎರಡು ಶೇಡ್ ಇರುವಂಥ ಪಾತ್ರದಲ್ಲಿ ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ.
ಇನ್ನು ನಾಯಕಿ ಅದ್ವಿತಿ ಶೆಟ್ಟಿ ಕೂಡ ತುಂಬ ಗಂಭೀರ ಪಾತ್ರದಲ್ಲಿ ಗಮನ ಸೆಳೆಯುತ್ತಾರೆ. ಮತ್ತೂಂದು ಪ್ರಮುಖ ಪಾತ್ರದಲ್ಲಿ ವಿವೇಕ್ ಕಾಣಿಸಿಕೊಂಡಿದ್ದಾರೆ. ಮೂವರು ಕೂಡ ತಮ್ಮ ಪಾತ್ರದಲ್ಲಿ ಪ್ರೇಕ್ಷಕರಿಗೆ ಇಷ್ಟವಾಗುವಂಥ ಅಭಿನಯ ನೀಡಿದ್ದಾರೆ.
ಸಿನಿಮಾದ ಛಾಯಾಗ್ರಹಣ, ಒಂದೆರಡು ಹಾಡುಗಳು ನೋಡುಗರ ಗಮನ ಸೆಳೆಯುವಂತಿದೆ. ಸುಂದರ ಲೊಕೇಶನ್ಸ್ ತೆರೆಮೇಲೆ ಸಿನಿಮಾದ ದೃಶ್ಯಗಳ ಸೌಂದರ್ಯವನ್ನು ಹೆಚ್ಚಿಸಿದೆ. ಸಸ್ಪೆನ್ಸ್ ಕಂ ಕ್ರೈಂ-ಥ್ರಿಲ್ಲರ್ ಸಿನಿಮಾಗಳನ್ನು ಇಷ್ಟಪಡುವವರು ಒಮ್ಮೆ “ಐರಾವನ್’ ನೋಡಿ ಬರಲು ಅಡ್ಡಿಯಿಲ್ಲ ಎನ್ನಬಹುದು.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
ITBT ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆರ್ಜಿ ಸ್ವೀಕಾರ..!
'ಓಲ್ಡ್ ಈಸ್ ಗೋಲ್ಡ್' ಕರೋಕೆ ಗಾಯನ ಕಾರ್ಯಕ್ರಮ
ಅಪ್ಪ ಅಮ್ಮ ಅಪ್ಪು, ಎಂಬ ಚಿತ್ರದ ಧ್ವನಿಸುರುಳಿ ಬಿಡುಗಡೆ
ಭಾರತೀಯ ನ್ಯಾಯ ಸಮಿತಿ 2023 ಜುಲೈ 1, 2024 ರಿಂದ ಜಾರಿ!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.