ಮಂಡ್ಯ : ಮಂಡ್ಯ ಜಿಲ್ಲೆಯ ಅಭಿವೃದ್ಧಿಯಲ್ಲಿ ಕ್ರೆಡಿಟ್ ವಾರ್ ಶುರುವಾಗಿದ್ದು, ಕೇಂದ್ರ ಸಚಿವ ಕುಮಾರಸ್ವಾಮಿಗೆ ಶಾಸಕ ರವಿಕುಮಾರ್ ಕೌಂಟರ್ ನೀಡಿದ್ದಾರೆ. ಜಿಲ್ಲೆಗೆ ಕೈಗಾರಿಕೆ ತರುವ ವಿಚಾರವಾಗಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿಗೆ ಶಾಸಕ ಗಣಿಗ ರವಿಕುಮಾರ್ ಸವಾಲು ಹಾಕಿದ್ದಾರೆ.
ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪನೆಗೆ 100 ಎಕರೆ ಜಾಗ ಇದೆ. ನೀವು ಇಂಡಸ್ಟ್ರಿ ತೆಗೆದುಕೊಂಡು ಬನ್ನಿ ಎಂದಿದ್ದಾರೆ. ರಾಜ್ಯ ಸರ್ಕಾರ ಇಂಡಸ್ಟ್ರಿ ತರಲು ಸಹಕಾರ ಕೊಡ್ತಿಲ್ಲ, ಮಂಡ್ಯದಲ್ಲಿ ಇಂಡಸ್ಟ್ರಿ ಸ್ಥಾಪನೆಗೆ ಜಾಗ ಇಲ್ಲ ಎಂದು ಹೆಚ್ಡಿಕೆ ಹೇಳಿದ್ದರು.
ಹೀಗಾಗಿ ಡಿಸಿ ಜೊತೆಗೆ ತೆರಳಿ ಇಂಡಸ್ಟ್ರಿ ಜಾಗ ಗುರುತಿಸಿದ ಗಣಿಗ ರವಿಕುಮಾರ್, ಇಂಡಸ್ಟ್ರಿ ಸ್ಥಾಪನೆಗೆ ಸೂಕ್ತ ಸ್ಥಳ, ಎಲ್ಲದಕ್ಕೂ ಸಹಕಾರ ಕೊಡುತ್ತೇವೆ. ಮಂಡ್ಯಕ್ಕೆ ಕೈಗಾರಿಕೆ ತೆಗೆದುಕೊಂಡು ಬನ್ನಿ ಎಂದಿದ್ದಾರೆ.
ಕಳೆದ ವಾರವಷ್ಟೇ ಕುಮಾರಸ್ವಾಮಿ ಹಾಗೂ ಚಲುವರಾಯಸ್ವಾಮಿ ನಡುವೆ ವಾಕ್ಸಮರ ನಡೆದಿತ್ತು. ಇದೀಗ ಶಾಸಕ ರವಿಕುಮಾರ್ ಕೂಡ ಅಖಾಡಕ್ಕೆ ಎಂಟ್ರಿಯಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ರಾಜಕೀಯ ವಿದ್ಯಮಾನಗಳಿಗೆ ಸಾಕ್ಷಿಯಾಗುವ ಸಾಧ್ಯತೆಯಿದೆ.














