ನಟ ನರೇಶ್ (Naresh) ಹಾಗೂ ಪವಿತ್ರಾ ಲೋಕೇಶ್ (Pavitra Lokesh) ನಟನೆಯ ‘ಮಳ್ಳಿ ಪೆಳ್ಳಿ’ ಸಿನಿಮಾ ಇಂದು (ಮೇ 26) ತೆಲುಗಿನಲ್ಲಿ ಬಿಡುಗಡೆ ಆಗಿದೆ. ಈ ಸಿನಿಮಾ ಹಲವು ಕಾರಣಕ್ಕೆ ಕುತೂಹಲ ಕೆರಳಿಸಿತ್ತು. ನರೇಶ್ ಹಾಗೂ ಪವಿತ್ರಾರ ಸಂಬಂಧದ ಕುರಿತ ವಿವಾದದ ಕುರಿತು ಕಳೆದ ವರ್ಷ ನಡೆದ ಘಟನೆಗಳನ್ನೇ ಆಧರಿಸಿ ಈ ಸಿನಿಮಾ ಮಾಡಲಾಗಿದೆ ಎನ್ನಲಾಗಿತ್ತು. ಸಿನಿಮಾದ ಟ್ರೈಲರ್ನಲ್ಲಿ ಸಹ ಇದಕ್ಕೆ ಸಾಕಷ್ಟು ಸಾಕ್ಷ್ಯಗಳಿದ್ದವು. ನರೇಶ್ರ ಮೂರನೇ ಪತ್ನಿ ರಮ್ಯಾ ರಘುಪತಿ ತಮ್ಮ ಹಾಗೂ ಪವಿತ್ರಾರ ವಿರುದ್ಧ ಮಾಡಿದ್ದ ಆರೋಪಗಳಿಗೆ ನರೇಶ್ ಮಳ್ಳಿ ಪೆಳ್ಳಿ ಸಿನಿಮಾ ಮೂಲಕ ಉತ್ತರ ನೀಡುತ್ತಿದ್ದಾರೆ ಎಂದೆನ್ನಲಾಗಿತ್ತು. ಇಂದು ಸಿನಿಮಾ ಬಿಡುಗಡೆ ಆಗಿದ್ದು, ಸಿನಿಮಾ ನೋಡಿದವರು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ಮಳ್ಳಿ ಪೆಳ್ಳಿ ಸಿನಿಮಾ ನೋಡಿದ ಅನೇಕರು ಸಿನಿಮಾ ಸಾಧಾರಣವಾಗಿದೆ ಎಂದಿದ್ದಾರೆ. ಸಿನಿಮಾದಲ್ಲಿನ ಹಾಸ್ಯ ಚೆನ್ನಾಗಿದೆಯೆಂದು ಆದರೆ ಸಿನಿಮಾ ಗಂಭೀರವಾಗಿ ಸಂದೇಶ ನೀಡಲು ಯತ್ನಿಸುವ ಸನ್ನಿವೇಶಗಳು ಬಹಳ ಬೋರಿಂಗ್ ಆಗಿದೆಯೆಂದು ಹೇಳಿದ್ದಾರೆ. ಅಲ್ಲದೆ ಹಲೆವೆಡೆ ಹಾಸ್ಯಕ್ಕಾಗಿ ದ್ವಂದ್ವಾರ್ಥ ಸಂಭಾಷಣೆಯನ್ನು ಬಳಸಿರುವ ಬಗ್ಗೆ ಕೆಲವರು ಆಕ್ಷೇಪವ್ಯಕ್ತಪಡಿಸಿದ್ದಾರೆ. ಸಾಮಾನ್ಯ ಸಿನಿಮಾ ಪ್ರೇಕ್ಷಕರು ಕೆಲವರು ಸಿನಿಮಾ ಮಹಾಬೋರು ಎಂದಿದ್ದರೆ, ತುಸು ಗಂಭೀರ ಸಿನಿಮಾ ವೀಕ್ಷಕರು ಸಿನಿಮಾ ಅಂದುಕೊಂಡಷ್ಟು ಕೆಟ್ಟದಾಗಿಲ್ಲ, ಬದಲಿಗೆ ಹಾಸ್ಯದ ಕಾರಣಕ್ಕೆ ಆರಾಮವಾಗಿ ನೋಡಿಸಿಕೊಳ್ಳುತ್ತದೆ ಎಂದಿದ್ದಾರೆ.
ಹಲವರ ಊಹೆಯಂತೆ ಮಳ್ಳಿ-ಪೆಳ್ಳಿ ಸಿನಿಮಾ ನರೇಶ್ ಹಾಗೂ ಪವಿತ್ರಾ ಲೋಕೇಶ್ರ ಜೀವನದ ಕುರಿತಾದದ್ದೇ ಆಗಿದ್ದು, ತಮ್ಮ ಬಗ್ಗೆ ತಾವು ಸ್ಪಷ್ಟನೆ ನೀಡಲೆಂದು, ನಾವು ತಪ್ಪಿತಸ್ಥರಲ್ಲ ಎಂದು ತೋರಿಸಲೆಂದೇ ಈ ಸಿನಿಮಾ ತೆಗೆದಿದ್ದಾರೆ ಎಂದು ಹಲವರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
ಯೂಟ್ಯೂಬ್ನಲ್ಲಿ ಸಿನಿಮಾ ವಿಮರ್ಶೆ ನೀಡಿರುವ ಕೆಲವರು, ನರೇಶ್ ಹಾಗೂ ಪವಿತ್ರಾ ತಮ್ಮ ವಿರೋಧಿ ವ್ಯಕ್ತಿಗಳನ್ನು ಅತ್ಯಂತ ಕೆಟ್ಟದಾಗಿ ಮಳ್ಳಿ ಪೆಳ್ಳಿ ಸಿನಿಮಾದಲ್ಲಿ ಚಿತ್ರೀಕರಿಸಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನರೇಶ್ ಹಾಗೂ ಪವಿತ್ರಾ ಇಬ್ಬರೂ ಏಕೆ ತಮ್ಮ ಈ ಹಿಂದಿನ ಸಂಗಾತಿಗಳನ್ನು ತ್ಯಜಿಸಿ ಒಟ್ಟಿಗೆ ಸೇರಿದರು ಎಂಬ ಸಿನಿಮಾದಲ್ಲಿ ತೋರಿಸಲಾಗಿದ್ದು, ತಮ್ಮ ಪರ ಸಹಾನುಭೂತಿ ವ್ಯಕ್ತವಾಗುವಂತೆ ಅದೇ ಸಮಯದಲ್ಲಿ ತಮ್ಮ ಮಾಜಿ ಸಂಗಾತಿಗಳ ಬಗ್ಗೆ ದ್ವೇಷ ಹುಟ್ಟುವಂತೆ ಪಾತ್ರಗಳನ್ನು ಸನ್ನಿವೇಶಗಳನ್ನು ಸೃಷ್ಟಿಸಿದ್ದಾರೆ ಎಂದು ಸಿನಿಮಾ ನೋಡಿದವರು ವಿಮರ್ಶಿಸಿದ್ದಾರೆ. ಪವಿತ್ರಾ ಲೋಕೇಶ್ ಪತಿಯನ್ನು ಮಹಾನ್ ಜಾತಿವಾದಿಯೆಂದು, ತನ್ನ ಜಾತಿಯೇ ದೊಡ್ಡದೆಂಬ ಅಹಂವುಳ್ಳ, ಮಹಿಳೆಯರ ಬಗ್ಗೆ ನಿಕೃಷ್ಟ ಭಾವವುಳ್ಳ ವ್ಯಕ್ತಿಯನ್ನಾಗಿ ಚಿತ್ರಿಸಲಾಗಿದೆಯಂತೆ. ಆದರೆ ಈ ಪಾತ್ರ ಪವಿತ್ರಾರ ಮಾಜಿ ಪತಿ ಸುಚೇಂದ್ರ ಪ್ರಸಾದ್ ಅವರನ್ನು ಪ್ರತಿನಿಧಿಸುತ್ತದೆಯೇ ಅಥವಾ ಪವಿತ್ರಾರ ಮೊದಲ ಪತಿಯನ್ನು ಗಮನದಲ್ಲಿಟ್ಟುಕೊಂಡು ಪಾತ್ರವನ್ನು ಚಿತ್ರಿಸಲಾಗಿದೆಯೇ ಎಂಬುದು ಸ್ಪಷ್ಟವಿಲ್ಲ.
ಇದನ್ನೂ ಓದಿ:ದುಷ್ಟಶಕ್ತಿಗಳಿಂದ ನನ್ನನ್ನು ಕಾಪಾಡಿ ಹೊಸ ಜೀವನ ಕೊಟ್ಟ ಮಹಾಪುರುಷ ನರೇಶ್: ಪವಿತ್ರಾ ಲೋಕೇಶ್ ಬಣ್ಣನೆ
ಅಂತೆಯೇ ನರೇಶ್ರ ಮೂರನೇ ಪತ್ನಿ ರಮ್ಯಾ ರಘುಪತಿಯನ್ನಂತೂ ತೀರ ರಾಕ್ಷಸಿಯಂತೆ ಸಿನಿಮಾದಲ್ಲಿ ಚಿತ್ರಿಸಲಾಗಿದ್ದು, ಆಕೆಗೆ ಬೇರೊಬ್ಬರೊಟ್ಟಿಗೆ ಅಕ್ರಮ ಸಂಬಂಧ ಇದೆಯೆಂದು, ಸಿಗರೇಟು ಸೇದುತ್ತಾಳೆಂದು, ನರೇಶ್ರ ತಾಯಿಗೆ ಸದಾ ಅವಮಾನಿಸುತ್ತಿದ್ದರೆಂದು, ಮಹಾನ್ ಮುಂಗೋಪಿ, ಕೆಟ್ಟ ವ್ಯಕ್ತಿದವಳಂತೆ, ನರೇಶ್ರ ಕೋಟ್ಯಂತರ ರೂಪಾಯಿ ಹಣವನ್ನು ತನ್ನ ಮೋಜಿಗಾಗಿ ಖರ್ಚು ಮಾಡಿದ್ದಾಳೆಂದು ಚಿತ್ರಿಸಲಾಗಿದೆಯಂತೆ. ಸಿನಿಮಾದಲ್ಲಿ ರಮ್ಯಾ ರಘುಪತಿಯ ಪಾತ್ರಕ್ಕೆ ಸೌಮ್ಯಾ ಸೇತುಪತಿ ಎಂದು ಹೆಸರಿಡಲಾಗಿದೆ. ಸಿನಿಮಾದಲ್ಲಿ ಸೂಪರ್ ಸ್ಟಾರ್ ಕೃಷ್ಣ, ಸ್ಟಾರ್ ನಟ ಮಹೇಶ್ ಬಾಬು ಪಾತ್ರಗಳು ಇವೆಯಾದರೂ ಕೇವಲ ಒಂದೊಂದು ದೃಶ್ಯಗಳಿಗೆ ಮಾತ್ರವೇ ಅವು ಸೀಮಿತವಾಗಿವೆಯಂತೆ. ಒಟ್ಟಾರೆಯಾಗಿ ಸಿನಿಮಾದಲ್ಲಿ ಹಾಸ್ಯ ಚೆನ್ನಾಗಿದೆ ಆದರೆ ಉಳಿದ ಅಂಶಗಳು ಚೆನ್ನಾಗಿಲ್ಲವೆಂದೇ ಬಹುತೇಕ ನೆಟ್ಟಿಗರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಶಾಲೆಗೆ ಕುಡಿದು ಬರುತ್ತಿದ್ದ ಶಿಕ್ಷಕ ; ಚಪ್ಪಲಿ – ಶೂ ಎಸೆದು ಓಡಿಸಿದ ವಿದ್ಯಾರ್ಥಿಗಳು
ಮತದಾರರಿಗೆ ' ಸಿಹಿ ', ಸುದ್ದಿ..
ಮೋದಿ ಅಭಿಮಾನಿಯ ಕೋರಿಕೆ…
ಪ್ರಸ್ತುತ ಪೊಲೀಸ್ ವ್ಯವಸ್ಥೆಯನ್ನು ಅಣುಕಿಸುತ್ತಿರುವ ಕಾಲ್ಪನಿಕ ಸನ್ನಿವೇಶಗಳು..
ಅಭಿಮಾನಿ ದೇವರುಗಳ ಜೊತೆ ಜಾಕಿ ಚಲನಚಿತ್ರ ವೀಕ್ಷಿಸಿದ ಅಶ್ವಿನಿ ಪುನೀತ್
ಮೈಸೂರು ಮೆಡಿಕಲ್ ಕಾಲೇಜು ಮತ್ತು ಕೆ ಆರ್ ಆಸ್ಪತ್ರೆಯ ಕರ್ಮಕಾಂಡ
ಕರ್ನಾಟಕದ ಹೆಮ್ಮೆಯ ರತ್ನ ಶ್ರೀಮತಿ ಸುಧಾಮೂರ್ತಿಯವರು ರಾಜ್ಯಸಭಾ ಸದಸ್ಯೆಯಾಗಿ ಪ್ರಮಾಣ ವಚನ ಸ್ವೀಕರಿಸಿದರು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.