ಮನೆ ಕಾನೂನು ಬೀದರ್ ಡಿಸಿಸಿ ಬ್ಯಾಂಕ್ ಮೇಲೆ ಐಟಿ ದಾಳಿ

ಬೀದರ್ ಡಿಸಿಸಿ ಬ್ಯಾಂಕ್ ಮೇಲೆ ಐಟಿ ದಾಳಿ

0

ಬೀದರ್: ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರ ಸಹೋದರ ಅಧ್ಯಕ್ಷರಾಗಿರುವ ಬೀದರ್ ಡಿಸಿಸಿ ಬ್ಯಾಂಕ್ ​ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

Join Our Whatsapp Group

ಸರಕಾರದ ನಿಯಮಗಳನ್ನು ಗಾಳಿಗೆ ತೂರಿ ರೈತರಿಗೆ ಲೋನ್ ಕೊಡುತ್ತಿದ್ದಾರೆಂಬ ಆರೋಪದ ಮೇಲೆ ದಾಳಿಯಾಗಿದೆ. ಬೀದರ್ ನಗರದ ಹೈದ್ರಾಬಾದ್ ರಸ್ತೆಯಲ್ಲಿರು ಡಿಸಿಸಿ ಬ್ಯಾಂಕ್ ಮೇಲೆ 15ಕ್ಕೂ ಅಧಿಕ ಐಟಿ ಅಧಿಕಾರಿಗಳ ತಂಡ ದಾಳಿ ಮಾಡಿದ್ದು, ಬ್ಯಾಂಕ್ ಅಕೌಂಟ್ ಪರಿಶೀಲನೆ ನಡೆಸಿದ್ದಾರೆ.

ತೆಲಂಗಾಣ, ಯಾದಗಿರಿ ಕಲಬುರಗಿಯಿಂದ ಬಂದಿರುವ ಐಡಿ ಅಧಿಕಾರಿಗಳು ಬ್ಯಾಂಕ್ ​ನ ಅಕೌಂಟ್ಸ್​ಗಳನ್ನು ಪರಿಶೀನಲೆ ಮಾಡುತ್ತಿದ್ದಾರೆ. ಇನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ ಸಹೋದರ ಅಮರ ಖಂಡ್ರೆ ಬೀದರ್​ ಡಿಸಿಸಿ ಬ್ಯಾಂಕ್​ನ ಅಧ್ಯಕ್ಷರಾಗಿದ್ದಾರೆ. ಬ್ಯಾಂಕ್​ ಸಿಬ್ಬಂದಿಯ ಮೊಬೈಲ್​ಗಳನ್ನು ಆಫ್​ ಮಾಡಿಸಿ ಕೂಲಂಕುಶವಾಗಿ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಹಿಂದಿನ ಲೇಖನಆಸ್ತಿ ಪಾಲು ನಿರಾಕರಣೆಗೆ ಮಕ್ಕಳು ಕಾನೂನು ದುರ್ಬಳಕೆ ಮಾಡದಂತೆ ನ್ಯಾಯಾಧಿಕರಣ ಖಾತರಿಪಡಿಸಬೇಕು: ಬಾಂಬೆ ಹೈಕೋರ್ಟ್‌
ಮುಂದಿನ ಲೇಖನಬೆಂಗಳೂರು: ಭಿಕ್ಷಾಟನೆಯಲ್ಲಿ ತೊಡಗಿದ್ದ 47 ಅಪ್ರಾಪ್ತ ಮಕ್ಕಳ ರಕ್ಷಣೆ