ಮನೆ ರಾಜ್ಯ ರಾಷ್ಟ್ರಪತಿಗಳು ದಸರಾ ಉದ್ಘಾಟಿಸುತ್ತಿರುವುದು ಹೆಮ್ಮೆಯ ಸಂಗತಿ: ಯದುವೀರ್ ಒಡೆಯರ್

ರಾಷ್ಟ್ರಪತಿಗಳು ದಸರಾ ಉದ್ಘಾಟಿಸುತ್ತಿರುವುದು ಹೆಮ್ಮೆಯ ಸಂಗತಿ: ಯದುವೀರ್ ಒಡೆಯರ್

0

ಮೈಸೂರು(Mysuru): ನಾಡಹಬ್ಬ ಮೈಸೂರು ದಸರಾವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಉದ್ಘಾಟಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಎರಡು ವರ್ಷದ ಬಳಿಕ ಅದ್ಧೂರಿಯಾಗಿ ದಸರಾ ಆಚರಣೆ ಮಾಡಲಾಗುತ್ತಿದೆ. ಅರಮನೆಯಲ್ಲಿ ಪ್ರತಿ ವರ್ಷದಂತೆ ಸಾಂಪ್ರದಾಯಿಕವಾಗಿ ಆಚರಣೆ ಇರಲಿದೆ. ಮೈಸೂರಿಗೆ ಬರಲಿರುವ ರಾಷ್ಟ್ರಪತಿ ಅವರನ್ನು ಅರಮನೆಗೆ ಆಹ್ವಾನಿಸುವ ಬಗ್ಗೆ ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರು ತೀರ್ಮಾನ ಮಾಡುತ್ತಾರೆ ಎಂದರು.

ಜಂಬೂಸವಾರಿಯು ಎರಡು ವರ್ಷಗಳ ಬಳಿಕ ಅರಮನೆಯಿಂದ ಹೊರಗಡೆ ಅಂದರೆ ಬನ್ನಿಮಂಟಪದವರೆಗೆ ನಡೆಯುತ್ತಿದೆ. ಸಾರ್ವಜನಿಕರು, ಪ್ರವಾಸಿಗರು ಇದನ್ನು ಕಣ್ತುಂಬಿಕೊಂಡು ಆನಂದಿಸಬೇಕು ಎಂದು ಹೇಳಿದರು.

  • ಟ್ಯಾಗ್ಗಳು
  • dasara
ಹಿಂದಿನ ಲೇಖನಅಯೋಧ್ಯೆಯಲ್ಲಿ ಆದಿಪುರುಷ್ ಸಿನಿಮಾ ಟೀಸರ್ ರಿಲೀಸ್ ಆಗುವ ಸಾಧ್ಯತೆ
ಮುಂದಿನ ಲೇಖನಪ್ರೊ ಕಬಡ್ಡಿ ಲೀಗ್‌’ನ ವೇಳಾಪಟ್ಟಿ ಪ್ರಕಟ