ಮನೆ ರಾಜಕೀಯ ಸೋಲಿನ ಭಯ ಕಾಡುತ್ತಿರುವುದು ಕಾಂಗ್ರೆಸ್ಸಿಗಲ್ಲ, ಬಿಜೆಪಿಗೆ: ಸಿದ್ದರಾಮಯ್ಯ

ಸೋಲಿನ ಭಯ ಕಾಡುತ್ತಿರುವುದು ಕಾಂಗ್ರೆಸ್ಸಿಗಲ್ಲ, ಬಿಜೆಪಿಗೆ: ಸಿದ್ದರಾಮಯ್ಯ

0

ಕಲಬುರಗಿ: ಈ ಬಾರಿ ಏನೇ ಪ್ರಯತ್ನ ಮಾಡಿದರೂ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ. ಸೋಲಿನ ಭಯ ಕಾಡುತ್ತಿರುವುದು ಕಾಂಗ್ರೆಸ್ಸಿಗಲ್ಲ, ಬಿಜೆಪಿಗೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದರು.

ಸುದ್ದಿಗಾರರೊಂದಿಗೆ ಇಂದು ಮಾತನಾಡಿದ ಅವರು, ರಾಜ್ಯದಲ್ಲಿ ಭ್ರಷ್ಟಾಚಾರ, ದುರಾಡಳಿತದಿಂದಾಗಿ ಬಿಜೆಪಿಗೆ ಈ ಬಾರಿ ಚುನಾವಣೆಯಲ್ಲಿ ಸೋಲುವ ಭಯ ಉಂಟಾಗಿದೆ. ಅದ್ದರಿಂದಲೇ ರಾಜ್ಯದ ನರೇಂದ್ರ ಮೋದಿ, ಅಮಿತ್ ಶಾ, ಜೆ.ಪಿ. ನಡ್ಡಾ ಬರುತ್ತಿದ್ದಾರೆ‌ ಎಂದು ಹೇಳಿದರು.

ಐದು ವರ್ಷಗಳಲ್ಲಿ ಬಡವರಿಗೆ ಒಂದಾದರೂ ಮನೆ ಕೊಟ್ಟಿದ್ದಾರೆ ಎಂದು ಪ್ರಶ್ನಿಸಿದರು.224 ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚರಿಸಬೇಕಿರುವುದರಿಂದ ನಾನು ಉತ್ತರ ಕರ್ನಾಟಕದಲ್ಲಿ, ಪಕ್ಷದ ಅಧ್ಯಕ್ಷ ‌ಡಿ.ಕೆ. ಶಿವಕುಮಾರ್ ಅವರು ದಕ್ಷಿಣ ಕರ್ನಾಟಕದಲ್ಲಿ ಸಂಚರಿಸಿ ಪಕ್ಷವನ್ನು ಸಂಘಟಿಸಲಿದ್ದೇವೆ.‌ ಸಾಮೂಹಿಕವಾಗಿ ಎಲ್ಲ ಮುಖಂಡರನ್ನು ಒಳಗೊಂಡು ಸಂಚಾರ ನಡೆಸಲಿದ್ದೇವೆ ಎಂದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.‌ ಶಿವಕುಮಾರ್ ಮಾತನಾಡಿ, ಬಿಜೆಪಿ ರಾಜ್ಯದಲ್ಲಿ ಈ ಬಾರಿ ಸೋಲುವುದು ಖಚಿತ. ಜನ ಚುನಾವಣೆ ಬರುವುದನ್ನೇ ಕಾಯುತ್ತಿದ್ದಾರೆ. ಈ ಬಾರಿ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಉಪಾಧ್ಯಕ್ಷ ಡಾ.ಶರಣಪ್ರಕಾಶ ಪಾಟೀಲ, ವಕ್ತಾರ ಪ್ರಿಯಾಂಕ್ ಖರ್ಗೆ ಇದ್ದರು.

ಹಿಂದಿನ ಲೇಖನಐಎಎಸ್ ಅಧಿಕಾರಿಗಳ ಸಹಿ ನಕಲು ಮಾಡಿದ ಅಧಿಕಾರಿ: ಬಿಎಂಟಿಸಿಯಲ್ಲಿ ಮತ್ತೊಂದು ಗೋಲ್ ಮಾಲ್
ಮುಂದಿನ ಲೇಖನಭಾರತವು ಜಗತ್ತಿನ ಮೂರನೇ ಆರ್ಥಿಕ ಶಕ್ತಿಯಾಗಿ ಬೆಳೆಯಲು ಯುವಜನರ ಪಾತ್ರ ಮಹತ್ವದ್ದು: ಅಮಿತ್ ಶಾ