ರಾಷ್ಟ್ರಗೀತೆ ‘ಜನ ಗಣ ಮನ’ ಮತ್ತು ರಾಷ್ಟ್ರೀಯ ಹಾಡು ‘ವಂದೇ ಮಾತರಂ’ಗೆ ಸಮಾನ ಸ್ಥಾನಮಾನ ಇದ್ದು ದೇಶದ ಪ್ರತಿಯೊಬ್ಬ ಪ್ರಜೆ ಎರಡಕ್ಕೂ ಸಮಾನ ಗೌರವ ನೀಡಬೇಕು ಎಂದು ಕೇಂದ್ರ ಗೃಹ ಸಚಿವಾಲಯ (ಎಂಎಚ್ಎ) ಶುಕ್ರವಾರ ದೆಹಲಿ ಹೈಕೋರ್ಟ್’ಗೆ ತಿಳಿಸಿದೆ.
[ಅಶ್ವಿನಿ ಕುಮಾರ್ ಉಪಾಧ್ಯಾಯ ಮತ್ತು ಭಾರತ ಒಕ್ಕೂಟ ಇನ್ನಿತರರ ನಡುವಣ ಪ್ರಕರಣ].
ಬಂಕಿಮ ಚಂದ್ರ ಚಟರ್ಜಿ ವಿರಚಿತ ‘ವಂದೇ ಮಾತರಂ’ಗೆ ರಾಷ್ಟ್ರಕವಿ ರವೀಂದ್ರನಾಥ ಟ್ಯಾಗೋರ್ ಬರೆದಿರುವ ‘ಜನ-ಗಣ-ಮನ’ದ ಸ್ಥಾನಮಾನ ನೀಡುವಂತೆ ಕೋರಿ ಬಿಜೆಪಿ ನಾಯಕ ಅಶ್ವಿನಿ ಉಪಾಧ್ಯಾಯ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ (ಪಿಐಎಲ್) ಪ್ರತಿಕ್ರಿಯೆ ನೀಡಿರುವ ಸರ್ಕಾರ ರಾಷ್ಟ್ರೀಯ ಹಾಡಿಗೆ ಭಾರತದ ಜನಮಾನಸದಲ್ಲಿ ಅನನ್ಯ ಮತ್ತು ವಿಶಿಷ್ಟ ಸ್ಥಾನ ಇದೆ ಎಂದಿದೆ.
ಕೇಂದ್ರ ಸರ್ಕಾರ 1971ರಲ್ಲಿ ರಾಷ್ಟ್ರಗೀತೆ ಹಾಡುವುದನ್ನು ತಡೆಯುವ ಅಥವಾ ಅಂತಹ ರಾಷ್ಟ್ರಗೀತೆ ಹಾಡುತ್ತಿರುವ ಸಭೆಗೆ ಅಡಚಣೆ ಉಂಟುಮಾಡುವ ಕ್ರಮ ಶಿಕ್ಷಾರ್ಹ ಅಪರಾಧವೆಂದು ಪರಿಗಣಿಸಿ ರಾಷ್ಟ್ರೀಯ ಗೌರವಕ್ಕೆ ಧಕ್ಕೆ ತಡೆ ಕಾಯಿದೆಯನ್ನು ಜಾರಿಗೊಳಿಸಿತು. ಆದರೆ ವಂದೇ ಮಾತರಂ ವಿಚಾರದಲ್ಲಿ ಅಂತಹ ದಂಡನೀಯ ನಿಯಮಗಳನ್ನು ರೂಪಿಸಲಿಲ್ಲ ಮತ್ತು ಅದನ್ನು ಹಾಡುವ ನುಡಿಸುವ ಸಂದರ್ಭಗಳನ್ನು ಸೂಚಿಸಲಿಲ್ಲ ಎಂದು ಅದು ವಿವರಿಸಿದೆ.
ರಾಷ್ಟ್ರಗೀತೆ ಮತ್ತು ವಂದೇ ಮಾತರಂಗೆ ಅವುಗಳದೇ ಆದ ಪಾವಿತ್ರ್ಯತೆ ಇದ್ದರೂ ಸಮಾನ ಗೌರವಕ್ಕೆ ಅರ್ಹವಾಗಿದ್ದರೂ ಅದು ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಸುವ ವಿಷಯವಾಗಬಾರದು ಎಂದು ಗೃಹ ಸಚಿವಾಲಯ ಹೇಳಿದೆ. ಇದೇ ರೀತಿಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮತ್ತು ದೆಹಲಿ ಹೈಕೋರ್ಟ್ ಈಗಾಗಲೇ ವಿಚಾರಣೆ ನಡೆಸಿದ್ದು ಯಾವುದೇ ನಿರ್ದೇಶನ ನೀಡಲು ನಿರಾಕರಿಸಿವೆ ಎಂದು ನ್ಯಾಯಾಲಯಕ್ಕೆ ಅದು ತಿಳಿಸಿದೆ.
ಮೇ ತಿಂಗಳಲ್ಲಿ ಉಪಾಧ್ಯಾಯ ಅವರ ಮನವಿಗೆ ಹೈಕೋರ್ಟ್ ವಿಭಾಗೀಯ ಪೀಠ ನೋಟಿಸ್ ನೀಡಿತ್ತು. ನವೆಂಬರ್ 9 ರಂದು ಮತ್ತೆ ಪ್ರಕರಣದ ವಿಚಾರಣೆ ನಡೆಯಲಿದೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.