ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಮತ್ತು ತಮಿಳು ತಾರೆ ನಯನತಾರಾ ತಮ್ಮ ಚಿತ್ರ ಜವಾನ್ ಬಿಡುಗಡೆಗೆ ಮುನ್ನ ಮಂಗಳವಾರ (ಸೆಪ್ಟೆಂಬರ್ 5 ರಂದು) ಬೆಳಗ್ಗೆ ತಿರುಮಲ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
ತಿರುಮಲ ತಿರುಪತಿ ದೇವಸ್ಥಾನದ ಅಧಿಕಾರಿಗಳು ಶಾರುಖ್ ಖಾನ್ ಅವರನ್ನು ಸ್ವಾಗತಿಸಿ ದೇವರ ದರ್ಶನಕ್ಕೆ ವ್ಯವಸ್ಥೆ ಮಾಡಿದರು.
ಇದಾದ ಬಳಿಕ ಗರ್ಭ ಗುಡಿಯಲ್ಲಿರುವ ವೆಂಕಟೇಶ್ವರನ ದರ್ಶನ ಪಡೆದು, ಎಲ್ಲರೂ ಪೂಜೆಯಲ್ಲಿ ಭಾಗವಹಿಸಿದ್ದರು. ಅರ್ಚಕರು ನಟರಿಗೆ ರಂಗನಾಯಕುಲ ಮಂಟಪದಲ್ಲಿ ತೀರ್ಥ ಪ್ರಸಾದವನ್ನು ನೀಡಿ ಆಶೀರ್ವಾದ ನೀಡಿದ್ದಾರೆ.
ಶಾರುಖ್ ಅಭಿನಯದ ಜವಾನ್ ಚಿತ್ರವು ಸೆಪ್ಟೆಂಬರ್ 7 ರಂದು ಬಿಡುಗಡೆಯಾಗಲಿದೆ. ಈಗಾಗಲೇ ಚಿತ್ರದ ಆರು ಲಕ್ಷಕ್ಕೂ ಅಧಿಕ ಟಿಕೆಟ್ ಮಾರಾಟವಾಗಿದ್ದು, ಜವಾನ್ ಕ್ರೇಜ್ ಹೆಚ್ಚಾಗಿದೆ. ಚಿತ್ರ ಬಿಡುಗಡೆಗೆ ಇನ್ನೆರಡು ದಿನ ಬಾಕಿಯಿದ್ದು, ಸಿನಿಮಾ ತಂಡ ಭರ್ಜರಿ ಪ್ರಚಾರ ನಡೆಸುತ್ತಿದೆ . ಸೆಪ್ಟೆಂಬರ್ 7 ರಂದು ಜವಾನ್ ಚಿತ್ರವನ್ನು ಕಣ್ಣು ತುಂಬಿಕೊಳ್ಳಲು ಪ್ರೇಕ್ಷಕರು ಕಾಯುತಿದ್ದಾರೆ.