ಬೆಂಗಳೂರು: ಎರಡು ತಿಂಗಳ ಅವಧಿಗೆ (2024 ಜನವರಿ 31ರವರೆಗೆ) ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಜಯಪ್ರಕಾಶ್ ಹೆಗ್ಡೆ ಅವರನ್ನು ಮರುನೇಮಕಗೊಳಿಸಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.
ವಿಸ್ತರಣೆಗೆ ಅವಕಾಶವಿಲ್ಲದ ಕಾರಣ ಹಾಲಿ ಅಧ್ಯಕ್ಷರನ್ನೇ ಮರುನೇಮಕ ಮಾಡಲಾಗಿದೆ. ಇವರ ಜೊತೆಗೆ ಐವರು ಸದಸ್ಯರನ್ನು ಮರು ನೇಮಕ ಮಾಡಲಾಗಿದೆ. ಜಯಪ್ರಕಾಶ್ ಹೆಗ್ಡೆ ಅವರ ಅಧಿಕಾರಾವಧಿ ನವೆಂಬರ್ 26ಕ್ಕೆ ಅಂತ್ಯವಾಗುತ್ತಿತ್ತು. ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತಾಗಿ ನಿರ್ಣಯ ಕೈಗೊಳ್ಳಲಾಗಿದೆ. ಜಾತಿಗಣತಿ ವರದಿ ಬಗ್ಗೆ ಪರ-ವಿರೋಧ ವ್ಯಕ್ತವಾಗುತ್ತಿದ್ದು, ಕಾಂತರಾಜು ವರದಿ ಹೆಸರು ಮರುನಾಮಕರಣ ಮಾಡಿ, ಡಾ.ಜಯಪ್ರಕಾಶ್ ಹೆಗ್ಡೆ ವರದಿ ಅಂತಾ ಬದಲಾಯಿಸಲಾಗಿದೆ.
ಇತ್ತೀಚೆಗೆ ಜಾತಿ ಗಣತಿ ವರದಿಯ ಮೂಲ ಪ್ರತಿ ಕಾಣೆಯಾಗಿದ್ದು, ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದರು.
ನಂತರ ಈ ಕುರಿತಾಗಿ ಅವರು ಸ್ಪಷ್ಟನೆ ನೀಡಿದ್ದು, ಮೂಲ ಪ್ರತಿ ಅಂದರೆ ದತ್ತಾಂಶ ಅಲ್ಲ. ದತ್ತಾಂಶ ಎಲ್ಲವೂ ಸುರಕ್ಷಿತವಾಗಿದೆ. ಇಂದಿನ ಸದಸ್ಯರು, ಅಧ್ಯಕ್ಷರು ಹಾಗೂ ಸೆಕ್ರೆಟರಿ ಸಹಿ ಇರುವ ದತ್ತಾಂಶ, ಹಾರ್ಡ್ ಕಾಪಿ ಮತ್ತು ಪ್ರಿಂಟೆಡ್ ಕಾಪಿಯೂ ಇದೆ. ಕಾಂತರಾಜು ವರದಿಯ ಮೂಲ ಪ್ರತಿಯ ಕೆಲ ವರ್ಕ್ ಶೀಟ್ ಗಳು ಸಿಗುತ್ತಿಲ್ಲ ಎಂದು ಹೇಳಿದ್ದರು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.