ಬೆಂಗಳೂರು(Bangaluru): ಕೇಂದ್ರ ಸರಕಾರ ರಾಜ್ಯದಲ್ಲಿ ಕನ್ನಡವನ್ನು ಧಿಕ್ಕರಿಸಿ ಹಿಂದಿ ದಿವಸ ಆಚರಿಸುತ್ತಿರುವುದು, ಅದಕ್ಕೆ ರಾಜ್ಯ ಬಿಜೆಪಿ ಸರಕಾರ ಬೆಂಬಲ ನೀಡುತ್ತಿರುವುದು ಅತ್ಯಂತ ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಹಿಂದಿ ದಿವಸ ಆಚರಣೆ ಖಂಡಿಸಿ ವಿಧಾನಸೌಧ ಬಳಿಯ ಮಹಾತ್ಮ ಗಾಂಧೀಜಿ ಪ್ರತಿಮೆ ಎದುರು ಕನ್ನಡ ಶಾಲು ಧರಿಸಿ ಹಾಗೂ ಕಪ್ಪು ಪಟ್ಟಿ ಕಟ್ಟಿಕೊಂಡು ನಡೆಸಿದ ಪ್ರತಿಭಟನೆ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.
ಕೇಂದ್ರ ಸರಕಾರಕ್ಕೆ ಭಾಷಾ ಸಹಿಷ್ಣುತೆ ಇಲ್ಲ. ರಾಜ್ಯಗಳ ಮೇಲೆ, ಅದರಲ್ಲೂ ಕರ್ನಾಟಕದ ಮೇಲೆ ಪದೇಪದೆ ಹಿಂದಿ ಹೇರಿಕೆ ಮಾಡುತ್ತಲೇ ಇದೆ. ಪ್ರಾದೇಶಿಕ ಭಾಷೆಗಳನ್ನು, ಮುಖ್ಯವಾಗಿ ಕನ್ನಡವನ್ನು ಹತ್ತಿಕ್ಕುವ ಎಲ್ಲ ಪ್ರಯತ್ನಗಳನ್ನೂ ಮಾಡುತ್ತಿದೆ ಎಂದು ನೇರವಾಗಿ ಆರೋಪಿಸಿದರು .
ಕೇಂದ್ರ ಸರ್ಕಾರದಿಂದ ಇವತ್ತು ಹಿಂದಿ ಆಚರಣೆ ಮಾಡುತ್ತಿರುವುದಕ್ಕೆ ನಮ್ಮ ಪಕ್ಷ ಜಾತ್ಯತೀತ ಜನತಾದಳದ ವಿರೋಧ ಇದೆ. ಸ್ವಾತಂತ್ರ್ಯ ಬಂದು 75 ವರ್ಷಗಳ ನಂತರವೂ ದೇಶದಲ್ಲಿ ನಾನಾ ಭಾಷೆ ಮಾತಾಡುವ ನಾಗರೀಕರು ಇದ್ದಾರೆ. ಈಗಾಗಲೇ ಅಮೃತ ಮಹೋತ್ಸವ ಮಾಡಿದ್ದೇವೆ. ಅದರೂ ಕೇಂದ್ರ ಬಿಜೆಪಿ ಸರಕಾರ ಕೇವಲ ಒಂದು ಭಾಷೆಯನ್ನು ರಾಜ್ಯಗಳ ಮೇಲೆ ಹೇರಿಕೆ ಮಾಡುತ್ತಿದೆ ಎಂದು ಕಿಡಿಕಾರಿದರು.
ಒಂದು ಭಾಷೆ ಒಂದು ರಾಷ್ಟ್ರ ಎಂಬ ಗೃಹ ಸಚಿವರ ಹೇಳಿಕೆ ಸರಿಯಲ್ಲ. ಕೇವಲ ಹಿಂದಿ ಒಂದು ಭಾಷೆಯಿಂದ ಭಾರತ ಒಂದಾಗಿ ಉಳಿದಿಲ್ಲ. ವಿವಿಧತೆಯಲ್ಲಿ ಏಕತೆ ಭಾರತದ ಶಕ್ತಿ. ಅದನ್ನೇ ಹಾಳು ಮಾಡಿದರೆ ದೇಶವನ್ನು ಓಡೆದಂತೆ. ಅವರು ಕೇಲ ಭಾವನಾತ್ಮಕ ವಿಚಾರ ಕೆಣಕುತ್ತಾ ದೇಶವನ್ನು ವಿಭಜಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇವತ್ತು ಉತ್ತರ ಭಾರತದ ಕೆಲವು ಭಾಗದಲ್ಲಿ ಹಿಂದಿ ಇಲ್ಲ. ಅನೇಕ ರಾಜ್ಯಗಳಲ್ಲಿ ಅವರವರದೇ ಭಾಷೆ ಇದೆ. ತಮ್ಮ ಭಾಷೆಯನ್ನೇ ಮಾತನಾಡುತ್ತಾ ನೆಮ್ಮದಿಯಿಂದ ಇದ್ದಾರೆ. ಸಾವಿರಾರು ವರ್ಷಗಳ ಇತಿಹಾಸ ಇರುವ ಪ್ರಾದೇಶಿಕ ಭಾಷೆಗಳ ಕತ್ತನ್ನು ಹಿಸುಕುವ ಕೇಂದ್ರದ ನಡೆಗೆ ನಮ್ಮ ವಿರೋಧ ಇದೆ. ಕನ್ನಡದ ಬಗ್ಗೆ ಯಾಕಿಷ್ಟು ಅಸಹನೆ ಇವರಿಗೆ ಎಂದು ನನಗೆ ಅರ್ಥವಾಗುತ್ತಿಲ್ಲ ಎಂದು ಹೇಳಿದರು.
ಹಿಂದಿ ದಿವಸದ ಹೆಸರಿನಲ್ಲಿ ಕನ್ನಡಿಗರ ತೆರಿಗೆ ಹಣ ವ್ಯಯ ಮಾಡೋದು ಎಷ್ಟು ಸರಿ? ಜನ ಈಗಾಗಲೇ ನೆರೆ ಹಾವಳಿ ಯಿಂದ ತತ್ತರಿಸಿದ್ದಾರೆ. ಅವರ ನೆರವಿಗೆ ಭಾರದೆ ಹಿಂದಿ ಭಾಷೆಯ ವಿಚಾರ ಸರಕಾರಕ್ಕೆ ಮುಖ್ಯವಾಗಿದೆ. ಇದಕ್ಕೆ ಕನ್ನಡಿಗರ ಧಿಕ್ಕಾರವಿದೆ ಎಂದು ಕಿಡಿ ಕಾರಿದರು.
ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ಜೆಡಿಎಸ್ ಶಾಸಕಾಂಗ ಪಕ್ಷದ ಮುಖ್ಯ ಸಚೇತಕ ವೆಂಕಟರಾವ್ ನಾಡಗೌಡ ಸೇರಿದಂತೆ ಪಕ್ಷದ ಎಲ್ಲ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಜರಿದ್ದರು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.