ಮನೆ ಅಪರಾಧ ಹುಟ್ಟು ಹಬ್ಬ ಸಂಭ್ರಮಾಚರಣೆ ಬಳಿಕ ಜಾಲಿ ರೈಡ್ ಹೋಗುತ್ತಿದ್ದಾಗ ಅಪಘಾತ: ಇಬ್ಬರ ಸಾವು

ಹುಟ್ಟು ಹಬ್ಬ ಸಂಭ್ರಮಾಚರಣೆ ಬಳಿಕ ಜಾಲಿ ರೈಡ್ ಹೋಗುತ್ತಿದ್ದಾಗ ಅಪಘಾತ: ಇಬ್ಬರ ಸಾವು

0

ಹಾಸನ: ಹುಟ್ಟು ಹಬ್ಬ ಸಂಭ್ರಮಾಚರಣೆ ಬಳಿಕ ಹಾಸನ ತಾಲೂಕಿನ ಮಡೆನೂರು ಫ್ಲೈಓವರ್ ಬಳಿ ಕಾರಿನಲ್ಲಿ ಜಾಲಿ ರೈಡ್​​ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ.

ಕಾರಿನಲ್ಲಿದ್ದ ರಕ್ಷಿತ್(22), ಕುಶಾಲ್(24) ಮೃತ ದುರ್ದೈವಿಗಳು.

ಗುರುವಾರ ರಾತ್ರಿ ಹುಟ್ಟು ಹಬ್ಬ ಸಂಭ್ರಮಾಚರಣೆ ಬಳಿಕ ಜಾಲಿ ರೈಡ್​​ ಹೋಗುತ್ತಿದ್ದಾಗ ಕಾರು ಎಲೆಕ್ಟ್ರಿಕ್ ಪೋಲ್‌ ಗೆ ಡಿಕ್ಕಿ ಹೊಡೆದು ಜಮೀನಿನಲ್ಲಿ ಉರುಳಿಬಿದ್ದ ಘಟನೆ ಹಾಸನ ತಾಲೂಕಿನ ಮಡೆನೂರು ಫ್ಲೈಓವರ್ ಬಳಿ ನಡೆದಿದೆ.

ರಕ್ಷಿತ್ ಸ್ಥಳದಲ್ಲೇ ಮೃತಪಟ್ಟಿದ್ದು, ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಕುಶಾಲ್ ಸಾವಿಗೀಡಾಗಿದ್ದಾನೆ. ಇನ್ನು ಕಾರಿನಲ್ಲಿದ್ದ ಅಭಿಷೇಕ್, ನಿಶಾಂತ್, ಮಂಜುನಾಥ್ ಎಂಬುವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚನ್ನರಾಯಪಟ್ಟಣದ ಯುವಕರು ಹುಟ್ಟುಹಬ್ಬದ ಆಚರಣೆಗೆ ಗಿರೀಶ್ ಎಂಬುವರಿಂದ ಕಾರು ಪಡೆದುಕೊಂಡು ಹಾಸನಕ್ಕೆ ಬಂದಿದ್ದರು ಎಂಬುವುದು ತಿಳಿದುಬಂದಿದೆ. ಶಾಂತಿಗ್ರಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಹಿಂದಿನ ಲೇಖನವಿಶ್ವೇಶ್ವರಯ್ಯ ಮ್ಯೂಸಿಯಂಗೆ ಹುಸಿ ಬಾಂಬ್ ಬೆದರಿಕೆ ಪ್ರಕರಣ ಸಿಬಿಗೆ ವರ್ಗ
ಮುಂದಿನ ಲೇಖನಶ್ರೀರಾಮಮಂದಿರದ ಉದ್ಘಾಟನಾ ಸಮಾರಂಭ: ವಿಶೇಷ ಧಾರ್ಮಿಕ ವ್ರತ ಅನುಸರಿಸುವುದಾಗಿ ತಿಳಿಸಿದ ಪ್ರಧಾನಿ ಮೋದಿ