ಮನೆ ರಾಜ್ಯ ಕಬಿನಿ: ಪ್ರವಾಹ ಮುನ್ನೆಚ್ಚರಿಕೆಗೆ ಸೂಚನೆ

ಕಬಿನಿ: ಪ್ರವಾಹ ಮುನ್ನೆಚ್ಚರಿಕೆಗೆ ಸೂಚನೆ

0

ಮೈಸೂರು(Mysuru): ಕಬಿನಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕಬಿನಿ ಜಲಾಶಯಕ್ಕೆ ಹೆಚ್ಚಿನ ಒಳಹರಿವು ಬರುತ್ತಿದ್ದು, ಕಬಿನಿ ಜಲಾಶಯದಿಂದ ಹೆಚ್ಚುವರಿ ನೀರನ್ನು ಯಾವುದೇ ಸಂದರ್ಭದಲ್ಲಾದರೂ ನದಿಗೆ ಬಿಡಲಾಗುವುದು.

ಆದ್ದರಿಂದ ಕಬಿನಿ ನದಿಯ ತಗ್ಗು ಪ್ರದೇಶದಲ್ಲಿ ಇರುವ ಮತ್ತು ನದಿಯ ಎರಡೂ ದಂಡೆಗಳಲ್ಲಿ ಇರುವ ಸಾರ್ವಜನಿಕರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರುಗಳ ರಕ್ಷಣೆಗೆ ಎಚ್ಚರಿಕೆ ವಹಿಸಿ ಸೂಕ್ತ ಮುಂಜಾಗ್ರತೆ ಕೈಗೊಂಡು ಸುರಕ್ಷಿತ ಸ್ಥಳಗಳಿಗೆ ತೆರಳಬೇಕೆಂದು ಕಾನೀನಿನಿ, ಕಬಿನಿ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದಿನ ಲೇಖನಓಮಿಕ್ರಾನ್ ನ ಹೊಸ ಉಪತಳಿ ಬಿಎ.2.75 ತಳಿ ಭಾರತದಲ್ಲಿ ಪತ್ತೆ
ಮುಂದಿನ ಲೇಖನವೈದ್ಯೆ ಗುರುಪ್ರೀತ್ ಕೌರ್’ನೊಂದಿಗೆ ಪಂಜಾಬ್ ಸಿಎಂ ಭಗವಂತ್ ಮಾನ್ ವಿವಾಹ