ಮೈಸೂರು : ಅಪಘಾತವಾಗಿ ಬಿದಿದ್ದ ವ್ಯಕ್ತಿಯ ಮೊಬೈಲ್ನಿಂದ 80,000 ಸಾವಿರ ರೂ. ಹಣ ಕದ್ದಿದ್ದ ಆರೋಪಿಗಳನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ರಮೇಶ್ ಮತ್ತು ಮನು ಎಂದು ಗುರುತಿಸಲಾಗಿದೆ.
ಮೈಸೂರು ತಾಲೂಕಿನ ಕಡಕೊಳದ ಬಳಿ ಡಿ.19 ರಂದು ಗಣೇಶ್ ಎಂಬವರು ಫ್ಯಾಕ್ಟರಿಯಲ್ಲಿ ಕೆಲಸ ಮುಗಿಸಿ ಮಧ್ಯರಾತ್ರಿ ಮನೆಗೆ ಬರುವಾಗ ಅಪಘಾತವಾಗಿತ್ತು. ಆಸ್ಪತ್ರೆಗೆ ಸೇರಿಸುವ ನೆಪದಲ್ಲಿ ಬಂದ ರಮೇಶ ಮತ್ತು ಮನು, ಗಣೇಶ್ ಮೊಬೈಲ್ ತೆಗೆದುಕೊಂಡು ಯುಪಿಐ ಮೂಲಕ 80 ಸಾವಿರ ರೂ. ಹಣ ವರ್ಗಾವಣೆ ಮಾಡಿಕೊಂಡು ಆಸ್ಪತ್ರೆಗೆ ಸೇರಿಸದೇ ಪರಾರಿ ಆಗಿದ್ದರು.
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಗಣೇಶ್ ಸಹೋದರ ಅಂಕನಾಯಕ. ಗಣೇಶ್ ನನ್ನ ಆಸ್ಪತ್ರೆಗೆ ಸೇರಿಸಿ ಸಿ.ಇ.ಎನ್ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದರು. ಹಣ ವರ್ಗಾವಣೆ ಮಾಹಿತಿಗ ಸಂಗ್ರಹಿಸಿ, ಮೈಸೂರಿನ ಮಹದೇವಪುರದ ನಿವಾಸಿಗಳಾದ ರಮೇಶ ಮತ್ತು ಮನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ಬಂಧಿತರಿಂದ 80 ಸಾವಿರ ಹಣ ಹಾಗೂ ಎರಡು ಮೊಬೈಲ್ ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.














