ಮನೆ ಅಪರಾಧ ಕಲಬುರಗಿ: ಜಾತಿ ನಿಂದನೆ ಕೇಸ್ ದಾಖಲಿಸಿದಕ್ಕೆ ಹೆದರಿ ಯುವಕ ಆತ್ಮಹತ್ಯೆ

ಕಲಬುರಗಿ: ಜಾತಿ ನಿಂದನೆ ಕೇಸ್ ದಾಖಲಿಸಿದಕ್ಕೆ ಹೆದರಿ ಯುವಕ ಆತ್ಮಹತ್ಯೆ

0

ಕಲಬುರಗಿ: ಜಿಲ್ಲೆಯ ಕಮಲಾಪುರ ತಾಲೂಕಿನ ಲಾಡಮುಗಳಿ ಗ್ರಾಮದಲ್ಲಿ ಜಾತಿನಿಂದನೆ ಕೇಸ್ ದಾಖಲಿಸಿದಕ್ಕೆ ಹೆದರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಧಾರುಣ ಘಟನೆ ನಡೆದಿದೆ.

Join Our Whatsapp Group

ನಿಖಿಲ್ ಪೂಜಾರಿ(23) ನೇಣುಬಿಗಿದುಕೊಂಡು ಸಾವನ್ನಪ್ಪಿದವರು.

ಕಳೆದ ಏ.27 ರಂದು ಮೃತ ನಿಖಿಲ್​ ಸೇರಿ ಹಲವರ ವಿರುದ್ದ ಪ್ರಕರಣ ದಾಖಲಾಗಿತ್ತು. ಇದರಿಂದ ಹೆದರಿ ಇಂದು ಗ್ರಾಮದ ಹೊರವಲಯದ ಜಮೀನಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ನಾಲ್ಕು ದಿನದ ಹಿಂದೆ ಲಾಡಮುಗುಳಿ ಗ್ರಾಮದಲ್ಲಿ ಜಾತ್ರೆಯೊಂದು ನಡೆದಿತ್ತು. ಈ ವೇಳೆ ಎರಡು ಸಮುದಾಯದ ಯುವಕರ ನಡುವೆ ಕ್ಷುಲ್ಲಕ‌ ವಿಚಾರಕ್ಕೆ ಗಲಾಟೆ ನಡೆದಿತ್ತು. ಇದಾದ ಬಳಿಕ ಊರವರ ಸಮ್ಮುಖದಲ್ಲಿ ರಾಜಿ ಸಂಧಾನ ಕೂಡ ನಡೆದಿತ್ತು. ಬಳಿಕ ನಿಖಿಲ್ ಪೂಜಾರಿ ಸೇರಿ ಹಲವರ ವಿರುದ್ದ ನರೋಣಾ ಪೊಲೀಸ್ ಠಾಣೆಯಲ್ಲಿ ಇನ್ನೊಂದು ಸಮುದಾಯದ ಯುವಕರು ದೂರು ನೀಡಿದ್ದು, ಏ.27 ರಂದು ಜಾತಿ ನಿಂದನೆ ಕೇಸ್ ದಾಖಲಾಗಿತ್ತು. ಇದರಿಂದ ಹೆದರಿದ ನಿಖಿಲ್ ಪೂಜಾರಿ ಇಂದು ನೇಣಿಗೆ ಶರಣಾಗಿದ್ದಾನೆ. ಇದೇ ವೇಳೆ ಕುಟುಂಬಸ್ಥರು ಹಾಗೂ ಸಮುದಾಯದವರು ನ್ಯಾಯಕ್ಕಾಗಿ ಶವವನ್ನು ಕಲಬುರಗಿಗೆ ತರಲು ಮುಂದಾಗಿದ್ದಾರೆ.

ಹಿಂದಿನ ಲೇಖನಡ್ರಗ್ಸ್ ಮಾರುತ್ತಿದ್ದ ಇಬ್ಬರ ಬಂಧನ: ನಗದು ಸೇರಿ 16 ಲಕ್ಷ ಮೌಲ್ಯದ ವಸ್ತು ವಶಕ್ಕೆ
ಮುಂದಿನ ಲೇಖನಈ ಬಾರಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುವುದು ಖಚಿತ: ಸಿಎಂ ಸಿದ್ದರಾಮಯ್ಯ ಭರವಸೆ