ಮನೆ ರಾಜ್ಯ ಶ್ರೀ ಪಂಚಮುಖಿ ವಿನಾಯಕ ಆಟೋ ಚಾಲಕರಿಂದ ಕನ್ನಡ ರಾಜ್ಯೋತ್ಸವ ಆಚರಣೆ

ಶ್ರೀ ಪಂಚಮುಖಿ ವಿನಾಯಕ ಆಟೋ ಚಾಲಕರಿಂದ ಕನ್ನಡ ರಾಜ್ಯೋತ್ಸವ ಆಚರಣೆ

0

ಶ್ರೀರಂಗಪಟ್ಟಣ: ಪಟ್ಟಣದ ಪುರಸಭೆ ವೃತ್ತದಲ್ಲಿ ಶ್ರೀ ಪಂಚಮುಖಿ ವಿನಾಯಕ ಆಟೋ ಚಾಲಕರು ಹಾಗೂ ಮಾಲೀಕರ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವದ ಆಚರಣೆ ಮಾಡಲಾಯಿತು.

ಗಾಂಧಿವಾದಿ ಮಕ್ಕಳ ತಜ್ಞ ಡಾ. ಸಜಯ್ ಕುಮಾರ್ ಕನ್ನಡ ಧ್ವಜಾರೋಣ ಕಾರ್ಯ ನೆರವೇರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಶಾಸಕ ರಮೇಶ ಬಂಡಿಸಿದ್ದೇಗೌಡ ಕಾರ್ಯಕ್ರಮ ಕುರಿತು ಮಾತನಾಡಿ, ಕನ್ನಡ ಬೆಳವಣಿಗೆಗೆ ರಾಜ್ಯದಲ್ಲಿ ಆಟೋ ಸಂಘದ ಸದಸ್ಯರು ಮೂಲ ಕಾರಣರಾಗಿರುತ್ತಾರೆ. ಹೊರ ರಾಜ್ಯದಿಂದ ಬರುವ ಪ್ರವಾಸಿಗರಿಗೆ ಹಾಗೂ  ಕನ್ನಡ ಬರದವರಿಗೆ ಮಾರ್ಗ ಸೂಚಿಗಳ ನೀಡುವ ಮೂಲಕ ನಮ್ಮ ಕನ್ನಡ ಕಂಪನ್ನು ಪಸರಿಸುತ್ತಿದ್ದಾರೆ ಎಂದರು.

ಶಾಸಕ ರಮೇಶ್ ಬಂಡಿಸಿದ್ದೇಗೌಡ, ಪುರಸಭೆ ಸದಸ್ಯ ದಿನೇಶ್ ಹಾಗೂ ಕಾಂಗ್ರೆಸ್ ಪಕ್ಷದ ನಗರ ಅಧ್ಯಕ್ಷ ಸುರೇಶ್ ರವರಿಗೆ ಆಟೋ ಚಾಲಕರ ಸಂಘದ ಸದಸ್ಯರು ಸನ್ಮಾನಿಸಿ ಗೌರವಿಸಿದರು.  ನೆರೆದಿದ್ದ ಕನ್ನಡ ಅಭಿಮಾನಿಗಳಿಗೆ ಸಿಹಿ ಹಂಚಿ  ಎಲ್ಲಾ ಸಾರ್ವಜನಿಕರಿಗೆ ಸಂಘದ ವತಿಯಿಂದ ಉಪಹಾರ ವ್ಯವಸ್ಥೆಯನ್ನು ಆಯೋಜನೆ ಮಾಡಲಾಗಿತ್ತು.

ಹಿಂದಿನ ಲೇಖನISEC: 01 ಕ್ಷೇತ್ರ ತನಿಖಾಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಿ
ಮುಂದಿನ ಲೇಖನಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆಯಿಂದ ಸಾವು: ಯುವಕನಿಗೆ 6 ತಿಂಗಳ ಜೈಲು ಶಿಕ್ಷೆ ವಿಧಿಸಿದ ಕರ್ನಾಟಕ ಹೈಕೋರ್ಟ್