ಬೆಂಗಳೂರು: ಕಾಂತರಾಜ್ ವರದಿಯನ್ನು ತೆಗೆದುಕೊಂಡು ಹೋಗಿ ಬೆಂಕಿಗೆ ಹಾಕಿ ಸುಡಬೇಕು ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂತರಾಜ್ ವರದಿಗೆ ಸದಸ್ಯ ಕಾರ್ಯದರ್ಶಿ ಸಹಿಯೇ ಇಲ್ಲ. ಕಾಂತರಾಜ್ ವರದಿಯನ್ನು ತೆಗೆದುಕೊಂಡು ಹೋಗಿ ಬೆಂಕಿಗೆ ಹಾಕಿ ಸುಡಬೇಕು. ಕಾಂತರಾಜ್ ಆಯೋಗದ ವರದಿಯ ಅವೈಜ್ಞಾನಿಕವಾಗಿದೆ. ರಾಜ್ಯದಲ್ಲಿ ಜಾತಿಗಣತಿ ವರದಿ ಬಿಡುಗಡೆಗೆ ನಾಮಕಾವಸ್ತೆ ಸಿದ್ಧತೆ ಮಾಡಿದ್ದಾರೆ ಆಕ್ರೋಶ ವ್ಯಕ್ತಪಡಿಸಿದರು.
ಕಾಂತರಾಜ್ ಆಯೋಗದ ವರದಿ ಬಗ್ಗೆ ಇಬ್ಬರು ಈಗ ಬಡಿದಾಡುತ್ತಿದ್ದಾರೆ. ನಾನೇ ಹಿಂದುಳಿದ ವರ್ಗಗಳ ಚಾಂಪಿಯನ್ ಅಂತ ಬಿಂಬಿಸಿಕೊಳ್ಳಲು ಸಿಎಂ ಯತ್ನಿಸುತ್ತಿದ್ದಾರೆ. 8 ವರ್ಷಗಳಿಂದ ಕಾಂತರಾಜ್ ವರದಿ ಬಗ್ಗೆ ಸಿಎಂ ಹೇಳುತ್ತಿದ್ದಾರೆ. ನಾಳೆ ಬಾ ಅನ್ನೋದು ಸಿಎಂ ಸಿದ್ದರಾಮಯ್ಯರವರ ಘೋಷಣೆಯಾಗಿದೆ. ಹಿಂದುಳಿದ ವರ್ಗ, ದಲಿತರ ಉದ್ಧಾರ ಮಾಡುವುದು ಸಿಎಂ ಉದ್ದೇಶವಲ್ಲ ಎಂದು ವಾಗ್ದಾಳಿ ನಡೆಸಿದರು.
ವರದಿ ಬಿಡುಗಡೆಯಾದರೇ ಕೋರ್ಟ್ ನಲ್ಲಿ ಒಂದೇ ದಿನದಲ್ಲಿ ಬಿದ್ದುಹೋಗುತ್ತೆ. ಸಿಎಂ ಅವದ್ದು ಒಂದು ಅಭಿಪ್ರಾಯ, ಡಿಸಿಎಂ ಅವರು ಒಂದು ಅಭಿಪ್ರಾಯ ಹೊಂದಿದ್ದಾರೆ. ಒಂದೇ ಸರ್ಕಾರದಲ್ಲಿ ಎರಡು ಅಭಿಪ್ರಾಯಗಳಿವೆ. ಕಾಂತರಾಜ್ ರಿಪೋರ್ಟ್ ಬಗ್ಗೆ ಮೊದಲು ಸರ್ಕಾರ ತೀರ್ಮಾನ ಮಾಡಲಿ. ನಂತರ ವಿಪಕ್ಷವಾಗಿ ಬಿಜೆಪಿ ತನ್ನ ಅಭಿಪ್ರಾಯ ಹೇಳುತ್ತದೆ ಎಂದರು.
ಜಾತಿ ಗಣತಿ ವರದಿ ಬಗ್ಗೆ ಬಿಜೆಪಿ ಅಭಿಪ್ರಾಯ ಕೇಳಲು ಅಲ್ಲಿಯ ತನಕ ಸರ್ಕಾರವೇ ಇರಲ್ಲ. ವ್ಯವಸ್ಥಿತವಾಗಿ ಇಡೀ ದೇಶಕ್ಕೆ ಅನ್ವಯವಾಗುವಂತೆ ರಿಸರ್ವೇಷನ್ ಬಗ್ಗೆ ಬಿಜೆಪಿ ಒಂದು ಸ್ಪಷ್ಟ ನಿಲುವು ತಳೆಯಲಿದೆ ಎಂದು ಹೇಳಿದರು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.