ಮನೆ ರಾಜ್ಯ ನಿಗಮ ವಿಲೀನ ಮಾಡಲು ಕರ್ನಾಟಕ ಆಡಳಿತ ಸುಧಾರಣಾ ಆಯೋಗದಿಂದ ಸರ್ಕಾರಕ್ಕೆ ಶಿಫಾರಸು

ನಿಗಮ ವಿಲೀನ ಮಾಡಲು ಕರ್ನಾಟಕ ಆಡಳಿತ ಸುಧಾರಣಾ ಆಯೋಗದಿಂದ ಸರ್ಕಾರಕ್ಕೆ ಶಿಫಾರಸು

0

ಬೆಂಗಳೂರು : ಕರ್ನಾಟಕ ಆಡಳಿತ ಸುಧಾರಣಾ ಆಯೋಗ ತನ್ನ 9ನೇ ವರದಿಯನ್ನ ಸಿಎಂ ಸಿದ್ದರಾಮಯ್ಯಗೆ ಸಲ್ಲಿಕೆ ಮಾಡಿದೆ. ವಿಧಾನಸೌಧದ ಸಿಎಂ ಕಚೇರಿಯಲ್ಲಿ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ವರದಿಯನ್ನು ಸಿಎಂಗೆ ಸಲ್ಲಿಕೆ ಮಾಡಿದ್ದಾರೆ.

9ನೇ ವರದಿಯಲ್ಲಿ 449 ಹೊಸ ಶಿಫಾರಸುಗಳನ್ನು ಮಾಡಲಾಗಿದೆ. ಮೂರು ಪ್ರಮುಖ ವಿಷಯಗಳನ್ನು ಇಟ್ಟುಕೊಂಡು ಈ ವರದಿ ನೀಡಲಾಗಿದೆ ಅಂತ ದೇಶಪಾಂಡೆ ತಿಳಿಸಿದರು. ಪ್ರಮುಖವಾಗಿ ಈ ವರದಿಯಲ್ಲಿ 7 ಬೋರ್ಡ್, ಕಾರ್ಪೊರೇಷನ್‌ಗಳನ್ನು ಮುಚ್ಚಲು ಸಲಹೆ ನೀಡಲಾಗಿದೆ. ಅಲ್ಲದೇ, 9 ಬೋರ್ಡ್ ಕಾರ್ಪೊರೇಷನ್‌ಗಳನ್ನ ವಿಲೀನ ಮಾಡಲು ಶಿಫಾರಸು ‌ಮಾಡಲಾಗಿದೆ.

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ದೇಶಪಾಂಡೆ, ಬೋರ್ಡ್, ಕಾರ್ಪೊರೇಷನ್‌ಗಳಿಗೆ ಈಗಾಗಲೇ ಅಧ್ಯಕ್ಷರನ್ನ ನೇಮಕ ಮಾಡಿದ್ರೆ ನನಗೆ ಗೊತ್ತಿಲ್ಲ. ಜನರ ಹಣ ಇದು. ಆ ಹಣದ ಉಪಯೋಗ ಜನರಿಗೆ ಆಗಬೇಕು. ಇವತ್ತಿನ ಕಾಲದಲ್ಲಿ ಅವಶ್ಯಕತೆ ಇಲ್ಲದ ಬೋರ್ಡ್ ಮುಚ್ಚಲು ಹೇಳಿದ್ದೇವೆ. ನನ್ನ ಜವಾಬ್ದಾರಿ ನಾನು ಮಾಡಿದ್ದೇನೆ. ಸಿಎಂ ಅಂಗೀಕಾರ ಮಾಡೋದಾಗಿ ಹೇಳಿದ್ದಾರೆ. ನೋಡೋಣ ಏನ್ ಮಾಡ್ತಾರೆ ಎಂದು ತಿಳಿಸಿದರು.

84 ಬೋರ್ಡ್, ಕಾರ್ಪೊರೇಷನ್‌ಗಳ ರಿವ್ಯೂ ಮಾಡಿದ್ದೇವೆ. ಆ ಬೋರ್ಡ್‌ಗಳ A-Z ಮಾಹಿತಿ ನಮ್ಮ ಬಳಿ ಇದೆ. ಇದರಲ್ಲಿ 7 ಮುಚ್ಚಲು, 9 ಮರ್ಜ್ ಮಾಡಲು ಶಿಫಾರಸು ಮಾಡಿದ್ದೇವೆ. ನಮ್ಮ ಜವಾಬ್ದಾರಿ ಮಾಡಿದ್ದೇವೆ. ಮಿಕ್ಕಿದ್ದು ಸರ್ಕಾರ ಮಾಡಬೇಕು. ಮುಚ್ಚಲು ಹೇಳಿರೋ ಬೋರ್ಡ್‌ನಲ್ಲಿ ಕೆಲಸವೇ ಇಲ್ಲ. ಕೆಲವು ಬೋರ್ಡ್‌ಗೆ ಹಣವೇ ಇಲ್ಲ.

ಹೀಗಾಗಿ, ಮುಚ್ಚಲು ಶಿಫಾರಸು ಮಾಡಿದ್ದೇವೆ. ಉಳಿದ ಬೋರ್ಡ್, ಕಾರ್ಪೊರೇಷನ್ ಅಭಿವೃದ್ಧಿ, ಸುಧಾರಣೆ ಹೇಗೆ ಮಾಡಬೇಕು ಅಂತ 379 ಶಿಫಾರಸು ಮಾಡಿದ್ದೇವೆ. 15 ಶಿಫಾರಸು ಭೂಸ್ವಾಧೀನ ಮಾಡಿದ್ದೇವೆ. ಸಾಮಾನ್ಯ ಆಡಳಿತಾತ್ಮಕ-ಇ ಸುಧಾರಣೆಗೆ 55 ಶಿಫಾರಸು ಮಾಡಿದ್ದೇವೆ ಎಂದು ಅಧ್ಯಕ್ಷರು ಮಾಹಿತಿ ನೀಡಿದರು.