ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಮಂಡಿಸಿರುವ ಬಜೆಟ್’ನಿಂದ ಕನ್ನಡ ಚಿತ್ರರಂಗಕ್ಕೆ ನಿರಾಸೆಯಾಗಿದೆ.
ಹೌದು, ಏಕೆಂದರೆ ಈ ಬಾರಿಯ ಬಜೆಟ್ನಲ್ಲಿ ಕನ್ನಡ ಚಿತ್ರರಂಗದ ಪ್ರಮುಖ ಬೇಡಿಕೆಯಾದ ಮೈಸೂರಿನಲ್ಲಿ ಫಿಲ್ಮ್ ಸಿಟಿ ನಿರ್ಮಾಣ ಆಗಬೇಕು ಎಂಬುದಕ್ಕೆ ಯಾವುದೇ ಸ್ಪಂದನೆ ಸಿಕ್ಕಿಲ್ಲ. ಕೊರೊನಾ ನಂತರ ಸಿನಿಮಾ ಮಂದಿರಗಳಿಗೆ ಹೋಗಿ ಸಿನಿಮಾ ನೋಡುವ ಹವ್ಯಾಸ ಜನರಲ್ಲಿ ಕಡಿಮೆಯಾಗಿರುವುದರಿಂದ ಎರಡು, ಮೂರನೇ ಹಂತದ ನಗರಗಳಲ್ಲಿ ಸಿನಿಮಾ ಮಂದಿರಗಳು ಹಾಳು ಬೀಳುತ್ತಿವೆ.
ಹೀಗಾಗಿ ರಾಜ್ಯ ಸರ್ಕಾರವೇ ಮುಂದೆ ನಿಂತು ಈ ನಗರಗಳಲ್ಲಿ 100 ರಿಂದ 200 ಆಸನಗಳುಳ್ಳ ಮಿನಿ ಥಿಯೇಟರ್’ಗಳನ್ನು ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಬಜೆಟ್’ನಲ್ಲಿ ತಿಳಿಸಲಾಗಿದೆ. ಇದನ್ನು ಬಿಟ್ಟರೇ 200 ಚಿತ್ರಗಳಿಗೆ ಈ ವರ್ಷದಲ್ಲಿ ಸಬ್ಸಿಡಿ ನೀಡುವ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.
ಒಟ್ಟಾರೆ ಈ ಸಾರಿಯ ಬಜೆಟ್’ನಲ್ಲಿ ಕನ್ನಡ ಚಿತ್ರರಂಗವನ್ನು ಸಂಪೂರ್ಣ ಕಡೆಗಣಿಸಲಾಗಿದೆ ಎಂಬ ಅಭಿಪ್ರಾಯಗಳು ಕೇಳಿ ಬಂದಿವೆ.
ನೀವು ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿ ಇಟ್ಟು ತಿನ್ನುತ್ತಿದ್ದೀರಾ ಹಾಗಾದರೆ ಇದನ್ನು ಒಮ್ಮೆ ನೋಡಿ
ಚುನಾವಣೆಗೆ ನಿಲ್ಲಲು ನನ್ನ ಹತ್ತಿರ ಹಣವಿಲ್ಲ ಎಂದ ನಿರ್ಮಲ ಸೀತಾರಾಮನ್
ಶಾಲೆಗೆ ಕುಡಿದು ಬರುತ್ತಿದ್ದ ಶಿಕ್ಷಕ ; ಚಪ್ಪಲಿ – ಶೂ ಎಸೆದು ಓಡಿಸಿದ ವಿದ್ಯಾರ್ಥಿಗಳು
ಮತದಾರರಿಗೆ ' ಸಿಹಿ ', ಸುದ್ದಿ..
ಮೋದಿ ಅಭಿಮಾನಿಯ ಕೋರಿಕೆ…
ಪ್ರಸ್ತುತ ಪೊಲೀಸ್ ವ್ಯವಸ್ಥೆಯನ್ನು ಅಣುಕಿಸುತ್ತಿರುವ ಕಾಲ್ಪನಿಕ ಸನ್ನಿವೇಶಗಳು..
ಅಭಿಮಾನಿ ದೇವರುಗಳ ಜೊತೆ ಜಾಕಿ ಚಲನಚಿತ್ರ ವೀಕ್ಷಿಸಿದ ಅಶ್ವಿನಿ ಪುನೀತ್
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.