ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಹುಬ್ಬಳ್ಳಿ: ಆರ್ಥಿಕವಾಗಿ ಒಂದು ರಾಜ್ಯ ಬೆಳೆದರೆ, ಶೈಕ್ಷಣಿಕವಾಗಿಯೂ ರಾಜ್ಯ ಬೆಳೆಯತ್ತದೆ. ಇಡೀ ದೇಶದಲ್ಲಿ ಕರ್ನಾಟಕ ಎಫ್ ಡಿಐ ನಲ್ಲಿ ನಂಬರ್ ಒನ್ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದ ಕೆಎಲ್ ಇ ಸಂಸ್ಥೆಯ ಬಿವಿಬಿ ವಿವಿ ಅಮೃತ ಮಹೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.
ಕೇಂದ್ರದಲ್ಲಿ ಅತ್ಯುತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರದೊಂದಿಗೆ ಜೊತೆಗೂಡಿ ನಾವು ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದ್ದೇವೆ. ನಮ್ಮದು ಡಬಲ್ ಇಂಜಿನ್ ಸರ್ಕಾರ ಎಂದು ಹೇಳಿದರು.
ಇವತ್ತು ಕರ್ನಾಟಕಕ್ಕೆ ವಿಧಿ ವಿಜ್ಞಾನ ಕ್ಯಾಂಪಸ್ ಕೊಟ್ಟಿದ್ದು ಅಮಿತ್ ಶಾ ಅವರು. ಇದು ಮುಂದಿನ ದಿನಗಳಲ್ಲಿ ಬಹು ದೊಡ್ಡ ಕೊಡುಗೆಯಾಗಲಿದೆ ಎಂದ ಅವರು, ಅಮಿತ್ ಶಾ ಅವರು ಹೆಣ್ಣು ಮಕ್ಜಳಿಗಾಗಿ 700 ಕೋಟಿ ಹಣ ಕೊಟ್ಟಿದ್ದಾರೆ. ಸಹಕಾರ ಸಚಿವರಾಗಿರುವ ಅವರಿಂದ ಮುಂಬರುವ ದಿನಗಳಲ್ಲಿ ಸಹಕಾರ ಇಲಾಖೆಯಲ್ಲಿ ದೊಡ್ಡ ಕ್ರಾಂತಿ ಆಗಲಿದೆ ಎಂದು ಭವಿಷ್ಯ ನುಡಿದರು.
ನವ ನಿರ್ಮಾಣದಲ್ಲಿ ಕೆಎಲ್’ಇ ಸಂಸ್ಥೆಯ ಬಹಳ ಪ್ರಮುಖ ಪಾತ್ರವಿದೆ ದೇಶದ ಪ್ರಗತಿಯಲ್ಲಿ ತನ್ನದೇ ಆದ ಕೊಡುಗೆ ನೀಡುತ್ತಿದೆ. ಇದನ್ನು ಬಣ್ಣಿಸಲು ಅಸಾಧ್ಯ. ನಾವು ಎಷ್ಟೇ ದೊಡ್ಡವರಾದರೂ ಕಲಿತ ಶಾಲೆ, ಗುರುಗಳನ್ನು ಎಂದು ಮರೆಯಬಾರದು. ಇದು ನಮ್ಮ ಧರ್ಮ. ಬಿವಿಬಿ ವಿವಿಯ ಸೆಂಚೂರಿ ಸಂಭ್ರಮದಲ್ಲಿ ಮತ್ತೆ ನಾವೆಲ್ಲರೂ ಭಾಗಿಯಾಗೋಣ ಎಂದು ಅವರು ತಿಳಿಸಿದರು.