ಮನೆ ರಾಜಕೀಯ ಶೀಘ್ರದಲ್ಲಿ ಪುನೀತ್ ರಾಜ್ ಕುಮಾರ್‌ಗೆ ಕರ್ನಾಟಕ ರತ್ನ ಪ್ರಶಸ್ತಿ: ಸಿಎಂ ಬೊಮ್ಮಾಯಿ

ಶೀಘ್ರದಲ್ಲಿ ಪುನೀತ್ ರಾಜ್ ಕುಮಾರ್‌ಗೆ ಕರ್ನಾಟಕ ರತ್ನ ಪ್ರಶಸ್ತಿ: ಸಿಎಂ ಬೊಮ್ಮಾಯಿ

0

ಬೆಂಗಳೂರು: ಶೀಘ್ರದಲ್ಲೇ ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಆರ್ ಟಿ ನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮೆಲ್ಲರ ಅಚ್ಚುಮೆಚ್ಚಿನ ಪುನೀತ್ ರಾಜ್ ಕುಮಾರ್ 47ನೇ ಹುಟ್ಟುಹಬ್ಬ ಇಂದು. ಅವರಿಲ್ಲದೆ ನಾವೆಲ್ಲ ದುಃಖದಲ್ಲಿದ್ದೇವೆ. ಅವರ ಬದುಕು ಸ್ಪೂರ್ತಿ. ಅಂಗಾಂಗ ದಾನ ಮಾಡಿರೋದು ನಮ್ಮೆಲ್ಲರಿಗೂ ಪ್ರೇರಣೆ. ಇಂದು ಅವರ ಸಿನಿಮಾ ಜೇಮ್ಸ್ ಕೂಡ ಬಿಡುಗಡೆಯಾಗುತ್ತಿದೆ. ಸಿನಿಮಾ ಯಶಸ್ವಿಯಾಗಲಿ ಎಂದು ಶುಭಾಶಯ ಕೋರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಈಗಾಗಲೇ ರಾಜ್ಯ ಸರ್ಕಾರ ಪುನೀತ್ ರಾಜ್‍ಕುಮಾರ್ ಅವ್ರಿಗೆ ಕರ್ನಾಟಕ ರತ್ನ ಘೋಷಣೆ ಮಾಡಿದ್ದೇವೆ. ಸದ್ಯದಲ್ಲೇ ಕುಟುಂಬದ ಜೊತೆಗೆ ಚರ್ಚಿಸಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬೊಮ್ಮಾಯಿ ಇದೇ ವೇಳೆ ತಿಳಿಸಿದರು.

ಈ ಮಧ್ಯೆ, ಪುನೀತ್ ರಾಜ್ ಕುಮಾರ್ ಅವರ ಹುಟ್ಟುಹಬ್ಬದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜನ್ಮದಿನದ ಶುಭಾಶಯ ಕೋರಿ, ಸ್ಮರಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಬಾಲನಟನಾಗಿ ಚಿತ್ರರಂಗ ಪ್ರವೇಶಿಸಿ, ಪವರ್ ಸ್ಟಾರ್ ಆಗಿ ಕನ್ನಡಿಗರ ಜನಮಾನಸದಲ್ಲಿ ಶಾಶ್ವತ ಸ್ಥಾನ ಪಡೆದಿರುವ ಕರ್ನಾಟಕ ರತ್ನ, ಪ್ರೀತಿಯ ಅಪ್ಪು ದಿ. ಡಾ. ಪುನೀತ್ ರಾಜಕುಮಾರ್ ಅವರ ಜನ್ಮದಿನದಂದು ಪ್ರೀತಿ ಪೂರ್ವಕ ನಮನಗಳು. ಅತಿ ಚಿಕ್ಕ ವಯಸ್ಸಿನಲ್ಲಿ ನೀವು ಮಾಡಿದ ಸಾಧನೆ, ಗಳಿಸಿದ ಜನಪ್ರಿಯತೆ, ಮಾಡಿದ ಜನಸೇವೆಯನ್ನು ಬಣ್ಣಿಸಲು ಪದಗಳೇ ಸಾಲದು ಎಂದು ಹೇಳಿದ್ದಾರೆ.

ಹಿಂದಿನ ಲೇಖನಯುವತಿಗೆ ವಂಚನೆ: ಸ್ಯಾಂಡಲ್ ವುಡ್ ನಟಿ ಸಹೋದರನ ವಿರುದ್ಧ ರೇಪ್ ಕೇಸ್ ದಾಖಲು
ಮುಂದಿನ ಲೇಖನಜೇಮ್ಸ್ ಚಿತ್ರದ ತೆರಿಗೆ ವಿನಾಯಿತಿಗೆ ಸಿಎಂಗೆ ಪತ್ರ: ವಿಪಕ್ಷ ನಾಯಕಸಿದ್ಧರಾಮಯ್ಯ